AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಪಲ್ಯ ಇಲ್ಲ ಅಂತಾ ಚಪಾತಿಗೆ ಸಗಣಿ ಬೆರೆಸಿ ತಿಂದ ಭೂಪ

ಸೋಷಿಯಲ್‌ ಮೀಡಿಯಾದಲ್ಲಿ ಫೇಮಸ್‌ ಆಗುವುದಕ್ಕೆ, ರೀಲ್ಸ್‌ ವಿಡಿಯೋ ಮಾಡುವ ಸಲುವಾಗಿ ಜನಎಂತೆಂತಹ ಹುಚ್ಚು ಸಾಹಸಕ್ಕೂ ಬೇಕಾದ್ರೂ ಕೈ ಹಾಕ್ತಾರೆ. ಅದೇ ರೀತಿ ಇಲ್ಲೊಬ್ಬ ಆಸಾಮಿ ವಿಚಿತ್ರ ಸಾಹಸವೊಂದಕ್ಕೆ ಕೈ ಹಾಕಿದ್ದು, ಚಪಾತಿಗೆ ಕೆಚಪ್‌ ಸವರಿ ತಿಂದ ಹಾಗೆ, ಆತ ಚಪಾತಿಗೆ ಸಗಣಿ ಬೆರೆಸಿ ತಿಂದಿದ್ದಾನೆ. ಈ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಭಾರೀ ವೈರಲ್‌ ಆಗುತ್ತಿದೆ.

Viral: ಪಲ್ಯ ಇಲ್ಲ ಅಂತಾ ಚಪಾತಿಗೆ ಸಗಣಿ ಬೆರೆಸಿ ತಿಂದ ಭೂಪ
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Oct 02, 2024 | 6:04 PM

Share

ಸಾಮಾನ್ಯವಾಗಿ ಯಾರಾದ್ರೂ ಹೇಳಿದ ಕೆಲಸವನ್ನು ಸರಿಯಾಗಿ ಮಾಡಿಲ್ಲ ಅಂದ್ರೆ ಅಥವಾ ಕೆಲಸದಲ್ಲಿ ಎಡವಟ್ಟು ಮಾಡಿದ್ರೆ ಹೋಗಿ ಸಗಣಿ ತಿನ್ನು ಅಂತಾ ಹೇಳ್ತಾರೆ. ಆದ್ರೆ ಇಲ್ಲೊಬ್ಬ ವ್ಯಕ್ತಿ ಸಗಣಿ ತಿಂದು ಆ ವಿಡಿಯೋವನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾನೆ. ಹೌದು ಚಪಾತಿಯೊಂದಿಗೆ ಪಲ್ಯ ಇಲ್ಲ ಅಂತ ಈ ಭೂಪ ಚಪಾತಿಗೆ ಸಗಣಿ ಬೆರೆಸಿ ತಿಂದಿದ್ದಾನೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದ್ದು, ಪೇಮಸ್‌ ಆಗೋಕೆ ನಮ್‌ ಜನ ಏನ್‌ ಬೇಕಾದ್ರೂ ಮಾಡ್ತಾರೆ ಅಂತ ನೆಟ್ಟಿಗರು ಮಾತನಾಡಿಕೊಂಡಿದ್ದಾರೆ.

ಈ ಕುರಿತ ವಿಡಿಯೋವನ್ನು Viralvideop ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ಇವರೊಂದಿಗೆ ಸ್ಪರ್ಧಿಸಲು ಯಾರಾದರೂ ಇದ್ದಾರೆಯೇ” ಎಂಬ ತಮಾಷೆಯ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ವೈರಲ್‌ ವಿಡಿಯೋದಲ್ಲಿ ವ್ಯಕ್ತಿಯೊಬ್ಬ ಚಪಾತಿಯೊಂದಿಗೆ ಸಗಣಿ ತಿನ್ನುವ ದೃಶ್ಯವನ್ನು ಕಾಣಬಹುದು. ಚಪಾತಿಯನ್ನು ಕೈಯಲ್ಲಿಡಿದು ಸಗಣಿ ಬಳಿ ಕುಳಿತ ಆ ವ್ಯಕ್ತಿ ಹಸಿ ಸಗಣಿಯನ್ನು ಚೆನ್ನಾಗಿ ಚಪಾತಿಗೆ ಬೆರೆಸಿ ನಂತರ ಅದನ್ನು ರೋಲ್‌ ಮಾಡಿಕೊಂಡು ತಿಂದಿದ್ದಾನೆ.

View this post on Instagram

A post shared by @viralvideop

ಎರಡು ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 2.3 ಮಿಲಿಯನ್‌ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಇದು ಎಡಿಟಿಂಗ್‌ ಇದ್ದ ಹಾಗೆ ಕಾಣುತ್ತೆʼ ಎಂದು ಕಾಮೆಂಟ್‌ ಮಾಡಿದ್ದಾರೆ. ಇನ್ನೊಬ್ಬ ಬಳಕೆದಾರರು ʼಸಗಣಿ ತಿಂದ ಈತನಿಗೆ ಖಂಡಿತವಾಗಿಯೂ ಯಾವುದೇ ಖಾಯಿಲೆ ಬಾರದುʼ ಎಂದು ಹೇಳಿದ್ದಾರೆ. ಇನ್ನೂ ಅನೇಕರು ಇದು ನಿಜವೇ ಅಥವಾ ಫೇಕ್‌ ಆಗಿರಬಹುದೇ ಒಂದು ತಿಳಿಯುತ್ತಿಲ್ಲ ಎಂದು ಹೇಳಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ