Viral: ಪಲ್ಯ ಇಲ್ಲ ಅಂತಾ ಚಪಾತಿಗೆ ಸಗಣಿ ಬೆರೆಸಿ ತಿಂದ ಭೂಪ

ಸೋಷಿಯಲ್‌ ಮೀಡಿಯಾದಲ್ಲಿ ಫೇಮಸ್‌ ಆಗುವುದಕ್ಕೆ, ರೀಲ್ಸ್‌ ವಿಡಿಯೋ ಮಾಡುವ ಸಲುವಾಗಿ ಜನಎಂತೆಂತಹ ಹುಚ್ಚು ಸಾಹಸಕ್ಕೂ ಬೇಕಾದ್ರೂ ಕೈ ಹಾಕ್ತಾರೆ. ಅದೇ ರೀತಿ ಇಲ್ಲೊಬ್ಬ ಆಸಾಮಿ ವಿಚಿತ್ರ ಸಾಹಸವೊಂದಕ್ಕೆ ಕೈ ಹಾಕಿದ್ದು, ಚಪಾತಿಗೆ ಕೆಚಪ್‌ ಸವರಿ ತಿಂದ ಹಾಗೆ, ಆತ ಚಪಾತಿಗೆ ಸಗಣಿ ಬೆರೆಸಿ ತಿಂದಿದ್ದಾನೆ. ಈ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಭಾರೀ ವೈರಲ್‌ ಆಗುತ್ತಿದೆ.

Viral: ಪಲ್ಯ ಇಲ್ಲ ಅಂತಾ ಚಪಾತಿಗೆ ಸಗಣಿ ಬೆರೆಸಿ ತಿಂದ ಭೂಪ
ವೈರಲ್​​ ವಿಡಿಯೋ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Oct 02, 2024 | 6:04 PM

ಸಾಮಾನ್ಯವಾಗಿ ಯಾರಾದ್ರೂ ಹೇಳಿದ ಕೆಲಸವನ್ನು ಸರಿಯಾಗಿ ಮಾಡಿಲ್ಲ ಅಂದ್ರೆ ಅಥವಾ ಕೆಲಸದಲ್ಲಿ ಎಡವಟ್ಟು ಮಾಡಿದ್ರೆ ಹೋಗಿ ಸಗಣಿ ತಿನ್ನು ಅಂತಾ ಹೇಳ್ತಾರೆ. ಆದ್ರೆ ಇಲ್ಲೊಬ್ಬ ವ್ಯಕ್ತಿ ಸಗಣಿ ತಿಂದು ಆ ವಿಡಿಯೋವನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾನೆ. ಹೌದು ಚಪಾತಿಯೊಂದಿಗೆ ಪಲ್ಯ ಇಲ್ಲ ಅಂತ ಈ ಭೂಪ ಚಪಾತಿಗೆ ಸಗಣಿ ಬೆರೆಸಿ ತಿಂದಿದ್ದಾನೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದ್ದು, ಪೇಮಸ್‌ ಆಗೋಕೆ ನಮ್‌ ಜನ ಏನ್‌ ಬೇಕಾದ್ರೂ ಮಾಡ್ತಾರೆ ಅಂತ ನೆಟ್ಟಿಗರು ಮಾತನಾಡಿಕೊಂಡಿದ್ದಾರೆ.

ಈ ಕುರಿತ ವಿಡಿಯೋವನ್ನು Viralvideop ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ಇವರೊಂದಿಗೆ ಸ್ಪರ್ಧಿಸಲು ಯಾರಾದರೂ ಇದ್ದಾರೆಯೇ” ಎಂಬ ತಮಾಷೆಯ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ವೈರಲ್‌ ವಿಡಿಯೋದಲ್ಲಿ ವ್ಯಕ್ತಿಯೊಬ್ಬ ಚಪಾತಿಯೊಂದಿಗೆ ಸಗಣಿ ತಿನ್ನುವ ದೃಶ್ಯವನ್ನು ಕಾಣಬಹುದು. ಚಪಾತಿಯನ್ನು ಕೈಯಲ್ಲಿಡಿದು ಸಗಣಿ ಬಳಿ ಕುಳಿತ ಆ ವ್ಯಕ್ತಿ ಹಸಿ ಸಗಣಿಯನ್ನು ಚೆನ್ನಾಗಿ ಚಪಾತಿಗೆ ಬೆರೆಸಿ ನಂತರ ಅದನ್ನು ರೋಲ್‌ ಮಾಡಿಕೊಂಡು ತಿಂದಿದ್ದಾನೆ.

View this post on Instagram

A post shared by @viralvideop

ಎರಡು ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 2.3 ಮಿಲಿಯನ್‌ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಇದು ಎಡಿಟಿಂಗ್‌ ಇದ್ದ ಹಾಗೆ ಕಾಣುತ್ತೆʼ ಎಂದು ಕಾಮೆಂಟ್‌ ಮಾಡಿದ್ದಾರೆ. ಇನ್ನೊಬ್ಬ ಬಳಕೆದಾರರು ʼಸಗಣಿ ತಿಂದ ಈತನಿಗೆ ಖಂಡಿತವಾಗಿಯೂ ಯಾವುದೇ ಖಾಯಿಲೆ ಬಾರದುʼ ಎಂದು ಹೇಳಿದ್ದಾರೆ. ಇನ್ನೂ ಅನೇಕರು ಇದು ನಿಜವೇ ಅಥವಾ ಫೇಕ್‌ ಆಗಿರಬಹುದೇ ಒಂದು ತಿಳಿಯುತ್ತಿಲ್ಲ ಎಂದು ಹೇಳಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಟಿನ್ ರಿಲೀಸ್ ಹೊಸ್ತಿಲಲ್ಲಿ ಚಿತ್ರತಂಡದ ಸುದ್ದಿಗೋಷ್ಠಿ; ಲೈವ್ ನೋಡಿ..
ಮಾರ್ಟಿನ್ ರಿಲೀಸ್ ಹೊಸ್ತಿಲಲ್ಲಿ ಚಿತ್ರತಂಡದ ಸುದ್ದಿಗೋಷ್ಠಿ; ಲೈವ್ ನೋಡಿ..
‘ನಾನೇ ಬಿಗ್ ಬಾಸ್’: ಶಾಕಿಂಗ್ ಹೇಳಿಕೆ ನೀಡಿ ಹೊರಗೆ ಬರಲು ಸಿದ್ಧವಾದ ಜಗದೀಶ್​
‘ನಾನೇ ಬಿಗ್ ಬಾಸ್’: ಶಾಕಿಂಗ್ ಹೇಳಿಕೆ ನೀಡಿ ಹೊರಗೆ ಬರಲು ಸಿದ್ಧವಾದ ಜಗದೀಶ್​
ಧಾರವಾಡ: ಧಾರ್ಮಿಕ ಧ್ವಜದ ಕೆಳಗೆ ರಾಷ್ಟ್ರಧ್ವಜ ಅಳವಡಿಕೆ ಮಾಡಿ ಅಪಮಾನ
ಧಾರವಾಡ: ಧಾರ್ಮಿಕ ಧ್ವಜದ ಕೆಳಗೆ ರಾಷ್ಟ್ರಧ್ವಜ ಅಳವಡಿಕೆ ಮಾಡಿ ಅಪಮಾನ
ಗ್ಯಾಲಕ್ಸಿ ಹೊಸ ಸ್ಮಾರ್ಟ್​ಫೋನ್ ಭಾರತದ ಮಾರುಕಟ್ಟೆಗೆ ಗ್ರ್ಯಾಂಡ್ ಎಂಟ್ರಿ!
ಗ್ಯಾಲಕ್ಸಿ ಹೊಸ ಸ್ಮಾರ್ಟ್​ಫೋನ್ ಭಾರತದ ಮಾರುಕಟ್ಟೆಗೆ ಗ್ರ್ಯಾಂಡ್ ಎಂಟ್ರಿ!
ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಪ್ರದೀಪ್ ಈಶ್ವರ್ ಫೋಟೋ ಹಾಕಿಲ್ಲ ಎಂದು ಗಲಾಟೆ
ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಪ್ರದೀಪ್ ಈಶ್ವರ್ ಫೋಟೋ ಹಾಕಿಲ್ಲ ಎಂದು ಗಲಾಟೆ
ಗಾಂಧಿ ಜಯಂತಿ: ಪೊರಕೆ ಹಿಡಿದ ಸಚಿವ ಪ್ರಲ್ಹಾದ್ ಜೋಶಿ, ವಿಜಯೇಂದ್ರ!
ಗಾಂಧಿ ಜಯಂತಿ: ಪೊರಕೆ ಹಿಡಿದ ಸಚಿವ ಪ್ರಲ್ಹಾದ್ ಜೋಶಿ, ವಿಜಯೇಂದ್ರ!
ಸಿಎಂ ಸಿದ್ದರಾಮಯ್ಯಗೆ ಗಾಂಧಿ ಟೋಪಿ ಹಾಕಿದ ಡಿಕೆ ಶಿವಕುಮಾರ್​
ಸಿಎಂ ಸಿದ್ದರಾಮಯ್ಯಗೆ ಗಾಂಧಿ ಟೋಪಿ ಹಾಕಿದ ಡಿಕೆ ಶಿವಕುಮಾರ್​
ಗಾಂಧಿ ಜಂಯತಿ 2024: ವಿಧಾನಸೌಧದವರೆಗೂ ನಡೆದುಕೊಂಡೇ ಹೋದ ಸಿಎಂ, ಡಿಸಿಎಂ
ಗಾಂಧಿ ಜಂಯತಿ 2024: ವಿಧಾನಸೌಧದವರೆಗೂ ನಡೆದುಕೊಂಡೇ ಹೋದ ಸಿಎಂ, ಡಿಸಿಎಂ
ಇದು ಪ್ರಾರಂಭ ಅಷ್ಟೆ, ಪಿಕ್ಚರ್ ಇನ್ನೂ ಬಾಕಿ ಇದೆ ಎಂದ ಜಗದೀಶ್
ಇದು ಪ್ರಾರಂಭ ಅಷ್ಟೆ, ಪಿಕ್ಚರ್ ಇನ್ನೂ ಬಾಕಿ ಇದೆ ಎಂದ ಜಗದೀಶ್
ಗಾಂಧಿ ಜಯಂತಿ: ಮಕ್ಕಳೊಂದಿಗೆ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡ ಮೋದಿ
ಗಾಂಧಿ ಜಯಂತಿ: ಮಕ್ಕಳೊಂದಿಗೆ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡ ಮೋದಿ