AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ‘ನೀರಿದ್ದರೆ ಮಾತ್ರ ಜೀವನ!’; ಜಲಶಕ್ತಿ ಸಚಿವಾಲಯ ಹಂಚಿಕೊಂಡ ವಿಶೇಷ ವಿಡಿಯೋ ನೋಡಿ

ವರ್ಷದಿಂದ ವರ್ಷಕ್ಕೆ ನೀರಿನ ಸಮಸ್ಯೆ ಹೆಚ್ಚುತ್ತಿದೆ. ಸರ್ಕಾರ ಈ ಕುರಿತು ಜನರಿಗೆ ಅರಿವು ಮೂಡಿಸಲು ಹಲವು ಕಾರ್ಯಕ್ರಮಗಳನ್ನು ಕೈಗೊಳ್ಳುತ್ತಿದೆ. ಸಾಮಾಜಿಕ ಜಾಲತಾಣದಲ್ಲೂ ತಿಳುವಳಿಕೆ ಮೂಡಿಸುವ ಪ್ರಯತ್ನ ನಿರಂತರವಾಗಿ ಸಾಗುತ್ತಿದೆ.

Viral Video: ‘ನೀರಿದ್ದರೆ ಮಾತ್ರ ಜೀವನ!’; ಜಲಶಕ್ತಿ ಸಚಿವಾಲಯ ಹಂಚಿಕೊಂಡ ವಿಶೇಷ ವಿಡಿಯೋ ನೋಡಿ
ವಿಡಿಯೋದಿಂದ ಸೆರೆಹಿಡಿಯಲಾದ ಚಿತ್ರ
TV9 Web
| Edited By: |

Updated on: Jan 09, 2022 | 4:05 PM

Share

ನೀರು ಅತ್ಯಂತ ಅಮೂಲ್ಯವಾದದ್ದು. ಪ್ರಾಣಿಗಳಿಗೆ, ಮನುಷ್ಯರಿಗೆ ಜೀವನಾಧಾರವೆಂದರೆ ತಪ್ಪಿಲ್ಲ. ಆದರೆ ಈಗ ನೀರಿನ ಮೂಲಗಳ ನಾಶದಿಂದ ಎಲ್ಲರೂ ಸಂಕಷ್ಟ ಅನುಭವಿಸುತ್ತಿದ್ದಾರೆ. ಅದರಲ್ಲೂ ಮೂಕ ಪ್ರಾಣಿಗಳು ಬಹಳ ಕಷ್ಟ ಅನುಭವಿಸುತ್ತಿವೆ. ಟಾದ್ದರಿಂದಲೇ ಬೇಸಿಗೆ ಕಾಲದ ಸಮಯದಲ್ಲಿ ಪಕ್ಷಿಗಳಿಗೆ ಸಹಾಯವಾಗಲೆಂದು ಮನೆಯ ಹೊರಗೆ ಅಥವಾ ಟೆರೇಸ್​ನಲ್ಲಿ ನೀರಿಡಿ ಎಂದು ಹೇಳುವುದುನ್ನು ನಾವು ಕೇಳಿದ್ದೇವೆ. ಪ್ರಾಣಿಗಳು ಸೇರಿದಂತೆ ಹಲವು ಬಿಸಿಲಿನಲ್ಲಿ ನೀರಿಗಾಗಿ ಪರಿತಪಿಸುವುದನ್ನು ನಾವು ನೋಡಿದ್ದೇವೆ. ಸದ್ಯ ಅಂತರ್ಜಾಲದಲ್ಲಿ ವಿಡಿಯೋವೊಂದು ವೈರಲ್ ಆಗಿದ್ದು, ಅದರಲ್ಲಿ ವ್ಯಕ್ತಿಯೋರ್ವರು ಒಂದು ಮಂಗಕ್ಕೆ ನೀರು ಕುಡಿಸುತ್ತಿದ್ದಾರೆ.

ಜಲಶಕ್ತಿ ಸಚಿವಾಲಯದ ಅಧಿಕೃತ ಟ್ವಿಟರ್ ಖಾತೆಯಿಂದ ವಿಡಿಯೋ ಹಂಚಿಕೊಳ್ಳಲಾಗಿದೆ. ಅದರಲ್ಲಿ ಬಾಯಾರಿದ ಕೋತಿಗೆ ವ್ಯಕ್ತಿಯೊಬ್ಬ ನೀರುಣಿಸುತ್ತಿದ್ದಾನೆ. ಸಾಮಾನ್ಯವಾಗಿ ಪ್ರಾಣಿಗಳ ಹತ್ತಿರ ಹೋಗಿ ಅಥವಾ ಅವುಗಳಿಗೆ ನೇರವಾಗಿ ನೀರುಣಿಸುವುದು ಬಹಳ ಅಪರೂಪ. ಆದರೆ ಯುವಕ ಯಾವುದೇ ಭಯವಿಲ್ಲದೇ ನೀರು ನೀಡಿದ್ದಾನೆ. ಕೋತಿ ಕೂಡ ಯಾವುದೇ ಅಂಜಿಕೆಯಿಲ್ಲದೇ ನಿರ್ಭಯದಿಂದ ಸಾಕಷ್ಟು ನೀರು ಕುಡಿದಿದೆ. ಈ ಅಪರೂಪದ ಘಟನೆಯನ್ನು ಸೆರೆ ಹಿಡಿಯಲಾಗಿದೆ. ಇದನ್ನು ಜಲಶಕ್ತಿ ಸಚಿವಾಲಯ ಹಂಚಿಕೊಂಡಿದೆ.

ಸಚಿವಾಲಯವು ವಿಡಿಯೋ ಹಂಚಿಕೊಂಡು ಸಂದೇಶವನ್ನೂ ನೀಡಿದೆ. ‘ಎಲ್ಲರಿಗೂ ಬಾಯಾರಿಕೆಯಾಗುತ್ತದೆ. ಮನುಷ್ಯರು, ಪಕ್ಷಿಗಳು, ಪ್ರಾಣಿಗಳೆನ್ನದೆ ಎಲ್ಲರ ಗಂಟಲೂ ಒಣಗುತ್ತದೆ. ಯಾರೇ ಆಗಲಿ ಬಾಯಾರಿದವರಿಗೆ ನೀರು ನೀಡಿ. ನೀರಿದ್ದರೆ ಮಾತ್ರ ಜೀವನ’ ಎಂದು ಬರೆದಿದೆ. ಈ ವಿಡಿಯೋಕ್ಕೆ ಜನರು ಮೆಚ್ಚುಗೆ ಸೂಚಿಸಿದ್ದಾರೆ. ಅಲ್ಲದೇ ವಿಡಿಯೋ ವೈರಲ್ ಆಗಿದೆ.

ಜಲಶಕ್ತಿ ಸಚಿವಾಲಯ ಹಂಚಿಕೊಂಡ ವಿಡಿಯೋ ಇಲ್ಲಿದೆ:

ಸಚಿವಾಲಯ ಹಂಚಿಕೊಂಡ ವಿಡಿಯೋವನ್ನು ಐಎಎಸ್ ಅಧಿಕಾರಿ ಸೋನಲ್ ಗೋಯಲ್ ಸೇರಿದಂತೆ ಹಲವರು ಹಂಚಿಕೊಂಡಿದ್ದಾರೆ. ಅಲ್ಲದೇ ನೆಟ್ಟಿಗರು ವಿವಿಧ ಕಾಮೆಂಟ್​ಗಳ ಮೂಲಕ ಮೆಚ್ಚುಗೆ ಸೂಚಿಸುತ್ತಿದ್ದಾರೆ. ‘ವಿಶ್ವದ ಎಲ್ಲಾ ಜೀವಿಗಳನ್ನು ಪ್ರೀತಿಸುವುದು ನಮ್ಮ ಕರ್ತವ್ಯ’ ಎಂದು ಒಬ್ಬರು ಬರೆದಿದ್ದರೆ, ಮತ್ತೋರ್ವರು ವಿಡಿಯೋ ಭಾವುಕವಾಗಿದೆ ಎಂದಿದ್ಧಾರೆ. ವಿಡಿಯೋ ನೋಡಿದ ನಿಮಗೇನನ್ನಿಸಿತು?

ಇದನ್ನೂ ಓದಿ:

ಕೊರೆಯುವ ಚಳಿಯಲ್ಲಿ ಗರ್ಭಿಣಿ ಮಹಿಳೆಯನ್ನು ಸ್ಟ್ರೆಚರ್​ನಲ್ಲಿ ಹೊತ್ತು ಆಸ್ಪತ್ರೆಗೆ ದಾಖಲಿಸಿದ ಭಾರತೀಯ ಯೋಧರು; ವಿಡಿಯೋ ಇಲ್ಲಿದೆ

Viral Video: ಪೊಲೀಸ್ ವ್ಯಾನ್​ನಲ್ಲಿ ಕರೆದೊಯ್ಯುತ್ತಿರುವಾಗಲೇ ಕೈಕೋಳ ತೊಡಿಸಿದ್ದ ಖೈದಿ ಎಸ್ಕೇಪ್; ಇಲ್ಲಿದೆ ವೈರಲ್ ವಿಡಿಯೋ

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ