Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: 4 ವಾರವಾದರೂ ಬಿಯರ್​​​​ನ ಅಮಲು ಬಿಡಲಿಲ್ಲ, ‘ಲಾಂಗ್ ಹ್ಯಾಂಗೋವರ್’ ದಾಖಲೆ ಮಾಡಿದ ವ್ಯಕ್ತಿ!

ಸ್ಕಾಟ್ಲೆಂಡ್‌ನಲ್ಲಿ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದೆ. ವ್ಯಕ್ತಿಯೊಬ್ಬ ಕಂಠ ಪೂರ್ತಿ ಬಿಯರ್​ ಕುಡಿದಿದ್ದಾನೆ. ಆದರೆ ಆಶ್ಚರ್ಯವೆನೆಂದರೆ 4 ವಾರವಾದರೂ ಬಿಯರ್ ನ ಅಮಲು ಬಿಟ್ಟಿಲ್ಲ. ಕೊನೆಗೆ ಆತನನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಈಮೂಲಕ 'ಲಾಂಗ್ ಹ್ಯಾಂಗೋವರ್' ಹೊಂದಿರುವ ವ್ಯಕ್ತಿ ಎಂಬ ದಾಖಲೆಯನ್ನು ಮಾಡಿದ್ದಾನೆ.

Viral: 4 ವಾರವಾದರೂ ಬಿಯರ್​​​​ನ ಅಮಲು ಬಿಡಲಿಲ್ಲ, 'ಲಾಂಗ್ ಹ್ಯಾಂಗೋವರ್' ದಾಖಲೆ ಮಾಡಿದ ವ್ಯಕ್ತಿ!
ಸಾಂದರ್ಭಿಕ ಚಿತ್ರImage Credit source: Pinterest
Follow us
ಅಕ್ಷತಾ ವರ್ಕಾಡಿ
|

Updated on: Nov 23, 2023 | 11:00 AM

ಆಲ್ಕೋಹಾಲ್ ಆರೋಗ್ಯಕ್ಕೆ ಹಾನಿಕಾರಕ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯ. ಮಿತಿಮೀರಿದ ಪ್ರಮಾಣದಲ್ಲಿ ಆಲ್ಕೋಹಾಲ್ ಕುಡಿಯುವುದರಿಂದ ಕ್ಯಾನ್ಸರ್, ಯಕೃತ್ತಿನ ಕಾಯಿಲೆ, ಪಾರ್ಶ್ವವಾಯು ಮತ್ತು ಹೃದ್ರೋಗದ ಅಪಾಯವನ್ನು ಹೆಚ್ಚಿಸುತ್ತದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಆದರೂ ಕೂಡ ಕುಡಿಯುವವರು ತಮ್ಮ ಕುಡಿಯುವ ಅಭ್ಯಾಸವನ್ನು ಮಾತ್ರ ಬಿಡುವುದಿಲ್ಲ. ಸಾಮಾನ್ಯವಾಗಿ ಆಲ್ಕೋಹಾಲ್ ಕುಡಿದ ನಂತರ ಅದರ ಅಮಲು ಮರುದಿನದ ವರೆಗೂ ಇರುತ್ತದೆ. ಹೆಚ್ಚೆಂದರೆ ಒಂದೆರಡು ದಿನಗಳ ವರೆಗೆ ಅದೇ ಅಮಲಿನಲ್ಲಿ ಇರುತ್ತಾರೆ. ಆದರೆ ಇಲ್ಲೊಬ್ಬ ವ್ಯಕ್ತಿ ಬಿಯರ್​​ ಕುಡಿದು, ಒಂದೆರಡು ದಿನವಲ್ಲ, ಬರೋಬ್ಬರಿ 4 ವಾರವಾದರೂ ಆತನಿಗೆ ಅದರ ಅಮಲಿನಿಂದ ಹೊರಬರಲು ಸಾಧ್ಯವಾಗಲಿಲ್ಲ. ಈ ವಿಚಿತ್ರ ಘಟನೆ ಸ್ಕಾಟ್ಲೆಂಡ್‌ನಲ್ಲಿ ನಡೆದಿದೆ.

‘ದಿ ಲ್ಯಾನ್ಸೆಟ್’ ಎಂಬ ನಿಯತಕಾಲಿಕೆಯ ಪ್ರಕಾರ ಈ 37 ವರ್ಷದ ವ್ಯಕ್ತಿಯನ್ನು ಆಲಸ್ಯ, ತಲೆನೋವು ಮತ್ತು ಕಣ್ಣು ಮಂಜಾಗುತ್ತಿದೆ ಎಂಬ ಸಮಸ್ಯೆಯಿಂದಾಗಿ ಮೊದಲಿಗೆ ಆಸ್ಪ್ರತೆಗೆ ದಾಖಲಿಸಲಾಗಿದೆ. ಆದರೆ ಆ ವ್ಯಕ್ತಿಗೆ ಇಂತಹ ಸಮಸ್ಯೆಗಳು ಏಕೆ ಬರುತ್ತಿವೆ ಎಂದು ಆರಂಭದಲ್ಲಿ ವೈದ್ಯರಿಗೂ ಅರ್ಥವಾಗಲಿಲ್ಲ. ಸಿಟಿ ಸ್ಕ್ಯಾನ್ ಮಾಡಿ, ಫಲಿತಾಂಶ ನೋಡಿದ ವೈದ್ಯರು ಆಶ್ಚರ್ಯಚಕಿತರಾಗಿದ್ದಾರೆ. ವ್ಯಕ್ತಿಯ ಮೆದುಳಿನ ಸುತ್ತ ಏನೋ ಸಮಸ್ಯೆ ಇದೆ ಎಂದು ವೈದ್ಯರಿಗೆ ತಿಳಿದುಬಂದಿದೆ.

ಇದನ್ನೂ ಓದಿ: ಕದಿಯಲು ಬಂದಿದ್ದ ಕಳ್ಳ ನಿದ್ರೆಗೆ ಜಾರಿದ, ಗೊರಕೆಯ ಸದ್ದಿಗೆ ಪೊಲೀಸರಿಗೆ ಮಾಹಿತಿ ನೀಡಿದ ಮನೆಯವರು

28 ಲೀಟರ್ ಬಿಯರ್ ಕುಡಿದಿದ್ದ ವ್ಯಕ್ತಿ:

ನಂತರ, ವೈದ್ಯರು ವ್ಯಕ್ತಿಯ ಜೀವನಶೈಲಿಯ ಬಗ್ಗೆ ಕೇಳಿದ್ದಾರೆ. ಈ ಸಂದರ್ಭದಲ್ಲಿ ಆತ ತಾನು ಒಂದು ತಿಂಗಳ ಹಿಂದೆ 60 ಪಿಂಟ್‌ಗಳು ಅಂದರೆ ಸುಮಾರು 28 ಲೀಟರ್‌ ಬಿಯರ್‌ ಕುಡಿದಿರುವುದಾಗಿ ಹೇಳಿಕೊಂಡಿದ್ದಾನೆ. ವೈದ್ಯರು ಆತನ ರಕ್ತವನ್ನು ಪರೀಕ್ಷಿಸಿದಾಗ ಆತನ ದೇಹದಲ್ಲಿ ಲೂಪಸ್ ಹೆಪ್ಪುರೋಧಕ ಅಂಶ ಹೆಚ್ಚಿರುವುದು ಕಂಡುಬಂದಿದೆ. ಈ ಮೂಲಕ ‘ಲಾಂಗ್ ಹ್ಯಾಂಗೊವರ್’ ಹೊಂದಿರುವ ವ್ಯಕ್ತಿ ಎಂಬ ದಾಖಲೆಯನ್ನು ಮಾಡಿದ್ದಾನೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಸಜ್ಜನರ ನೋಯಿಸಿದರೆ ಆ ಕರ್ಮ ಹೇಗೆ ಸುತ್ತಿಕೊಳ್ಳುತ್ತೆ? ಇಲ್ಲಿದೆ ವಿವರ
ಸಜ್ಜನರ ನೋಯಿಸಿದರೆ ಆ ಕರ್ಮ ಹೇಗೆ ಸುತ್ತಿಕೊಳ್ಳುತ್ತೆ? ಇಲ್ಲಿದೆ ವಿವರ
ರವಿ ಮೀನ ರಾಶಿ, ಚಂದ್ರ ಕರ್ಕಾಟಕ ರಾಶಿಯಲ್ಲಿ ಸಂಚರಿಸುವ ಇಂದಿನ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ಕರ್ಕಾಟಕ ರಾಶಿಯಲ್ಲಿ ಸಂಚರಿಸುವ ಇಂದಿನ ರಾಶಿ ಭವಿಷ್ಯ
ಮುಂಬೈ ಸೋಲಿಗೆ ಕಾರಣವಾಯ್ತು ಸಾಲ್ಟ್ ಹಿಡಿದ ಕ್ಯಾಚ್
ಮುಂಬೈ ಸೋಲಿಗೆ ಕಾರಣವಾಯ್ತು ಸಾಲ್ಟ್ ಹಿಡಿದ ಕ್ಯಾಚ್
ರಜತ್ ಪಾಟಿದರ್ ಆಟಕ್ಕೆ ಬೆರಗಾದ ಕಿಂಗ್ ಕೊಹ್ಲಿ; ವಿಡಿಯೋ
ರಜತ್ ಪಾಟಿದರ್ ಆಟಕ್ಕೆ ಬೆರಗಾದ ಕಿಂಗ್ ಕೊಹ್ಲಿ; ವಿಡಿಯೋ
ಸಮನ್ವಯ ಸಮಿತಿಯ ಅವಶ್ಯಕತೆ ಮನಗಾಣುತ್ತಿರುವ ಕೆಲ ನಾಯಕರು
ಸಮನ್ವಯ ಸಮಿತಿಯ ಅವಶ್ಯಕತೆ ಮನಗಾಣುತ್ತಿರುವ ಕೆಲ ನಾಯಕರು
ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದಲ್ಲಿ ಹೊಸಬರೇ ಜಾಸ್ತಿ
ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದಲ್ಲಿ ಹೊಸಬರೇ ಜಾಸ್ತಿ
ಪಂಬನ್ ಸೇತುವೆ ಮೇಲೆ ಮೊದಲ ರೈಲು ಸಂಚಾರ; ಬಾವುಟ ಬೀಸಿ ಪ್ರಯಾಣಿಕರ ಸಂತಸ
ಪಂಬನ್ ಸೇತುವೆ ಮೇಲೆ ಮೊದಲ ರೈಲು ಸಂಚಾರ; ಬಾವುಟ ಬೀಸಿ ಪ್ರಯಾಣಿಕರ ಸಂತಸ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ