Viral Video: ‘ನಮ್ಮೇಲ್​ ನಿಮ್ಗೆ ವಿಶ್ವಾಸ ಇದೆಯಲ್ವಾ?’ ಸಿಎಂ ಹಳೆಯ ಭಾಷಣಕ್ಕೆ ಲಿಪ್​ಸಿಂಕ್​ ಮಾಡಿದ ಯುವಕ

Speech : ಈ ವಿಡಿಯೋ ಅನ್ನು ಜೂ.30ರಂದು ಎಂ.ಎಸ್. ರಘು ಎಂಬುವವರು ಇನ್​ಸ್ಟಾಗ್ರಾಮ್​ಗೆ ಅಪ್​ಲೋಡ್ ಮಾಡಿದ್ದಾರೆ. ಈತನಕ ಸುಮಾರು 2 ಲಕ್ಷ ಜನರು ಈ ವಿಡಿಯೋ ನೋಡಿದ್ದಾರೆ. 60,000ಕ್ಕಿಂತಲೂ ಹೆಚ್ಚು ಜನರು ಲೈಕ್ ಮಾಡಿದ್ದಾರೆ.

Viral Video: 'ನಮ್ಮೇಲ್​ ನಿಮ್ಗೆ ವಿಶ್ವಾಸ ಇದೆಯಲ್ವಾ?' ಸಿಎಂ ಹಳೆಯ ಭಾಷಣಕ್ಕೆ ಲಿಪ್​ಸಿಂಕ್​ ಮಾಡಿದ ಯುವಕ
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾಡಿದ ಹಳೆಯ ಭಾಷಣದ ವಿಡಿಯೋಗೆ ಲಿಪ್​ಸಿಂಕ್ ಮಾಡುತ್ತಿರುವ ಎಂ.ಎಸ್​. ರಘು
Follow us
|

Updated on: Jul 15, 2023 | 6:26 PM

Siddaramaiah : ನಟರಾಗಬೇಕೆಂದರೆ ನಟನೆಯ ಕೋರ್ಸ್ ಮಾಡಲೇಬೇಕು. ಅವಕಾಶಕ್ಕಾಗಿ ನಿರ್ದೇಶಕರ ಮನೆಗೆ ಎಡತಾಕಬೇಕು. ಅನುಭವಕ್ಕಾಗಿ ಬಂದ ಪಾತ್ರಗಳನ್ನೆಲ್ಲಾ ನಿರ್ವಹಿಸಬೇಕು. ಅಂದುಕೊಂಡ ಅವಕಾಶಕ್ಕಾಗಿ ವರ್ಷಗಟ್ಟಲೆ ಕಾಯಲೇಬೇಕು ಎಂದುಕೊಂಡು ಕುಳಿತುಕೊಳ್ಳುವ ಕಾಲ ಇದಲ್ಲ. ಯಾವುದೇ ಪ್ರತಿಭೆಯನ್ನು ನೀವು ಹೊಂದಿದ್ದರೆ ಸ್ವಲ್ಪ ತಾಲೀಮು ಮಾಡಿಕೊಂಡು ನಿಮಿಷಗಳ ಲೆಕ್ಕದಲ್ಲಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಿಗೆ (Social Media) ಅಪ್​ಲೋಡ್ ಮಾಡುವ ಕಾಲ ಇದು. ಹೀಗೆ ಮಾಡಿದ ಒಂದು ರೀಲ್​ ಇದೀಗ ವೈರಲ್ ಆಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಧಿಕಾರಾವಧಿಯ ಮುನ್ನ ಮಾಡಿದ ಭಾಷಣದ ತುಣುಕಿಗೆ ಇನ್​ಸ್ಟಾಗ್ರಾಮಿಗರೊಬ್ಬರು ಲಿಪ್​ ಸಿಂಕ್ ಮಾಡಿದ ವಿಡಿಯೋ ಇದಾಗಿದೆ.

View this post on Instagram
ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

A post shared by ms_raghu_07 (@raghufunstore_07)

ಈ ವಿಡಿಯೋ ಅನ್ನು ಜೂ.30ರಂದು ಎಂ.ಎಸ್. ರಘು ಎಂಬುವವರು ಅಪ್​ಲೋಡ್ ಮಾಡಿದ್ದಾರೆ. ಈತನಕ ಸುಮಾರು 2 ಲಕ್ಷ ಜನರು ಈ ವಿಡಿಯೋ ನೋಡಿದ್ದಾರೆ. ಸುಮಾರು 60,000ಕ್ಕಿಂತಲೂ ಹೆಚ್ಚು ಜನರು ಲೈಕ್ ಮಾಡಿದ್ದಾರೆ. ಸಾವಿರಾರು ಜನರು ಇದಕ್ಕೆ ಪ್ರತಿಕ್ರಿಯಿಸಿದ್ದಾರೆ. ಕೆಲವರು ಈತನ ಆ್ಯಕ್ಟಿಂಗ್​ ಬಗ್ಗೆ ಶ್ಲಾಘಿಸಿದ್ದಾರೆ. ಇನ್ನೂ ಕೆಲವರು ಪಕ್ಷಗಳ ಪರವಿರೋಧ ವಹಿಸಿ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ : Viral Video: ಶ್ರೀಮಂತರು ಷೋಕಿಗಾಗಿ ನಾಯಿ ಸಾಕುತ್ತಾರೆ, ಅವರು ಪ್ರೀತಿಸುವುದಿಲ್ಲ; ನೆಟ್ಟಿಗರ ಚರ್ಚೆ

ಪಕ್ಕಾ ಸಿದ್ದರಾಮಯ್ಯನವರ ಅಭಿಮಾನಿಯಾಗಿ ಹೇಳುತ್ತಿದ್ದೀನಿ, ನಿಮ್ಮ ಆ್ಯಕ್ಟಿಂಗ್​ ಸೂಪರ್​ ಎಂದಿದ್ದಾರೆ ಒಬ್ಬರು. ನಿಮ್ಮ ಮೈಕ್​ ಸೂಪರ್​ ಎಂದು ಮತ್ತೊಬ್ಬರು ಹೇಳಿದ್ದಾರೆ. ಮೊದಲು ಆರ್ ಎಸ್ ಎಸ್, ಬಜರಂಗದಳದ ಬಗ್ಗೆ ತಿಳಿದುಕೋ, ಯಾರು ಹೆಂಗೆ ಏನು ಅಂತ ಅಂತ ಗೊತ್ತಾಗುತ್ತೆ. ಸುಮ್ಮನೆ ಲೈಕು ಫಾಲೋವರ್ಸ್​ಗೋಸ್ಕರ ವಿಡಿಯೋ ಮಾಡಬೇಡ, ತಿಳಿದುಕೊಂಡು ವಿಡಿಯೋ ಮಾಡು ಎಂದು ಹೇಳಿದ್ದಾರೆ ಮಗದೊಬ್ಬರು. ನಿಮ್ಮ ಹತ್ತು ಕೇಜಿ ಅಕ್ಕಿ ನಮಗೆ ಬೇಡ ನಾವೇ ಖರೀದಿಸುತ್ತೇವೆ ಎಂದು ಇನ್ನೂ ಒಬ್ಬರು ಹೇಳಿದ್ದಾರೆ. ಬಹುಪಾಲು ಜನರು ಇವರ ಅಭಿನಯವನ್ನು ಮೆಚ್ಚಿಕೊಂಡಿದ್ದಾರೆ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್