AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕೊಂಬೆಯಲ್ಲಿ ಸಿಲುಕಿದ್ದ ಗೂಬೆಯನ್ನು ರಕ್ಷಿಸಿದವನಿಗೆ ನೆಟ್ಟಿಗರಿಂದ ಧನ್ಯವಾದ

Owl Rescue : ಹಕ್ಕಿಗೆ ರೆಕ್ಕೆಯೇ ಜೀವ. ಕೆಳಗೆ ನೀರು ಬೇರೆ. ಭಯದಿಂದ ಗೂಬೆ ಎಷ್ಟೊಂದು ಒದ್ದಾಡಿತೋ. ತನ್ನನ್ನು ಈಗ ಈ ಅಪಾಯದಿಂದ ಯಾರು ಹೇಗೆ ಕಾಪಾಡಬಹುದು ಎಂಬ ಅಂದಾಜೂ ಅದಕ್ಕಿರಲಿಲ್ಲವೇನೋ.

Viral Video: ಕೊಂಬೆಯಲ್ಲಿ ಸಿಲುಕಿದ್ದ ಗೂಬೆಯನ್ನು ರಕ್ಷಿಸಿದವನಿಗೆ ನೆಟ್ಟಿಗರಿಂದ ಧನ್ಯವಾದ
ಗೂಬೆಯನ್ನು ರಕ್ಷಿಸುತ್ತಿರುವುದು
TV9 Web
| Edited By: ಶ್ರೀದೇವಿ ಕಳಸದ|

Updated on: Jun 10, 2023 | 10:57 AM

Share

Animal Love: ದಯೆ, ಕರುಣೆ, ಸಹಾನುಭೂತಿ ಮನುಷ್ಯನಲ್ಲಿರಬೇಕಾದ ಅತ್ಯವಶ್ಯ ಗುಣಗಳು. ಈ ಗುಣಗಳನ್ನು ಹೊಂದಿದ ಮನುಷ್ಯ ಯಾರನ್ನೂ ನೋಯಿಸಲಾರ. ಕಷ್ಟದಲ್ಲಿರುವ ಯಾವ ಜೀವಿಯನ್ನೂ ಮೇಲೆತ್ತುವ ಹೃದಯವಂತ ಅವನಾಗಿರುತ್ತಾನೆ. ಇದೀಗ ವೈರಲ್ (Viral Video) ಆಗಿರುವ ಈ ವಿಡಿಯೋ ನೋಡಿ. ಹರಿವ ನೀರು, ದಡದಲ್ಲಿರುವ ಮರ, ಮರದ ಕೊಂಬೆಯಲ್ಲಿ ಸಿಕ್ಕಿಹಾಕಿಕೊಂಡು ಪ್ರಾಣಭಯದಲ್ಲಿ ಒದ್ದಾಡುತ್ತಿರುವ ಗೂಬೆ. ಅಂತೂ ಅಲ್ಲಿಗೆ ಬಂದ ಈ ಮನುಷ್ಯ ಅದನ್ನು ರಕ್ಷಿಸಿದ್ದಾನೆ. ನೆಟ್ಟಿಗರೆಲ್ಲ ಈತನನ್ನು ಪ್ರಶಂಸಿಸುತ್ತಿದ್ದಾರೆ.

54 ಸೆಕೆಂಡುಗಳ ಈ ವಿಡಿಯೋ ಕ್ಲಿಪ್​ ಗಮನಿಸಿದಿರಲ್ಲವೆ? ಇದರ ರೆಕ್ಕೆಗಳು ಕೊಂಬೆಗೆ ಸಿಕ್ಕಿಕೊಂಡುಬಿಟ್ಟಿವೆ. ಬಿಡಿಸಿಕೊಳ್ಳುವಲ್ಲಿ ವಿಫಲವಾಗಿದೆ. ಹಕ್ಕಿಗೆ ರೆಕ್ಕೆಯೇ ಜೀವ. ರೆಕ್ಕೆಯ ಗತಿಯೇ ಹೀಗಾದರೆ? ಕೆಳಗೆ ನೀರು ಬೇರೆ. ಭಯದಿಂದ ಗೂಬೆ ಎಷ್ಟೊಂದು ಒದ್ದಾಡಿತೋ. ತನ್ನನ್ನು ಈಗ ಈ ಅಪಾಯದಿಂದ ಯಾರು ಹೇಗೆ ಕಾಪಾಡಬಹುದು ಎಂಬ ಅಂದಾಜೂ ಅದಕ್ಕಿರಲಾರದು. ಅದೃಷ್ಟವಶಾತ್​ ಈ ಮನುಷ್ಯ ಅಲ್ಲಿಗೆ ಬಂದಿದ್ದಾನೆ.

ಇದನ್ನೂ ಓದಿ : Viral Video: ”ಡ್ರೀಮಮ್ ವೇಕಪಮ್ ಕ್ರಿಟಿಕಲ್ ಕಂಡೀಷನಮ್” ಗಾಯಕಿ ಅಂಕಿತಾ ಕುಂಡು ಹೊಸ ರೀಲ್​ಗೆ ನೆಟ್ಟಿಗರ ಬೇಸರ

ಗೂಬೆಯ ಜೀವ ಉಳಿಸಿದ ನಿಮಗೆ ಕೃತಜ್ಞತೆ ಎನ್ನುತ್ತಿದ್ದಾರೆ ನೆಟ್​ಮಂದಿ. ನಿಮ್ಮ ತಾಳ್ಮೆ, ಉಪಾಯ ನಿಜಕ್ಕೂ ಶ್ಲಾಘನೀಯ. ಗೂಬೆ ಬಲೆಯೊಳಗೆ ಕುಳಿತುಕೊಳ್ಳುತ್ತಿದ್ದಂತೆ ಆ ದಾರವನ್ನು ಸುಡುವ ನಿಮ್ಮ ಜಾಣ್ಮೆ ಸ್ತುತ್ಯಾರ್ಹ ಎಂದಿದ್ದಾರೆ ಕೆಲವರು. ನೀವು ಅದನ್ನು ಸ್ಪರ್ಶಿಸಿ ಮುದ್ದಿಸುವ ಕ್ಷಣಗಳು ವರ್ಣಿಸಲಸಾಧ್ಯ, ಪರಸ್ಪರ ನಿಮ್ಮಿಬ್ಬರಿಗೂ ಇವ ಅಪೂರ್ವ ಗಳಿಗೆಗಳು ಎಂದು ಹಲವರು ಹೇಳಿದ್ದಾರೆ. ಈ ವಿಡಿಯೋ ಅನ್ನು ಈತನಕ ಸುಮಾರು 2.7 ಮಿಲಿಯನ್​ ಜನರು ನೋಡಿದ್ದಾರೆ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ