Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕೊಂಬೆಯಲ್ಲಿ ಸಿಲುಕಿದ್ದ ಗೂಬೆಯನ್ನು ರಕ್ಷಿಸಿದವನಿಗೆ ನೆಟ್ಟಿಗರಿಂದ ಧನ್ಯವಾದ

Owl Rescue : ಹಕ್ಕಿಗೆ ರೆಕ್ಕೆಯೇ ಜೀವ. ಕೆಳಗೆ ನೀರು ಬೇರೆ. ಭಯದಿಂದ ಗೂಬೆ ಎಷ್ಟೊಂದು ಒದ್ದಾಡಿತೋ. ತನ್ನನ್ನು ಈಗ ಈ ಅಪಾಯದಿಂದ ಯಾರು ಹೇಗೆ ಕಾಪಾಡಬಹುದು ಎಂಬ ಅಂದಾಜೂ ಅದಕ್ಕಿರಲಿಲ್ಲವೇನೋ.

Viral Video: ಕೊಂಬೆಯಲ್ಲಿ ಸಿಲುಕಿದ್ದ ಗೂಬೆಯನ್ನು ರಕ್ಷಿಸಿದವನಿಗೆ ನೆಟ್ಟಿಗರಿಂದ ಧನ್ಯವಾದ
ಗೂಬೆಯನ್ನು ರಕ್ಷಿಸುತ್ತಿರುವುದು
Follow us
TV9 Web
| Updated By: ಶ್ರೀದೇವಿ ಕಳಸದ

Updated on: Jun 10, 2023 | 10:57 AM

Animal Love: ದಯೆ, ಕರುಣೆ, ಸಹಾನುಭೂತಿ ಮನುಷ್ಯನಲ್ಲಿರಬೇಕಾದ ಅತ್ಯವಶ್ಯ ಗುಣಗಳು. ಈ ಗುಣಗಳನ್ನು ಹೊಂದಿದ ಮನುಷ್ಯ ಯಾರನ್ನೂ ನೋಯಿಸಲಾರ. ಕಷ್ಟದಲ್ಲಿರುವ ಯಾವ ಜೀವಿಯನ್ನೂ ಮೇಲೆತ್ತುವ ಹೃದಯವಂತ ಅವನಾಗಿರುತ್ತಾನೆ. ಇದೀಗ ವೈರಲ್ (Viral Video) ಆಗಿರುವ ಈ ವಿಡಿಯೋ ನೋಡಿ. ಹರಿವ ನೀರು, ದಡದಲ್ಲಿರುವ ಮರ, ಮರದ ಕೊಂಬೆಯಲ್ಲಿ ಸಿಕ್ಕಿಹಾಕಿಕೊಂಡು ಪ್ರಾಣಭಯದಲ್ಲಿ ಒದ್ದಾಡುತ್ತಿರುವ ಗೂಬೆ. ಅಂತೂ ಅಲ್ಲಿಗೆ ಬಂದ ಈ ಮನುಷ್ಯ ಅದನ್ನು ರಕ್ಷಿಸಿದ್ದಾನೆ. ನೆಟ್ಟಿಗರೆಲ್ಲ ಈತನನ್ನು ಪ್ರಶಂಸಿಸುತ್ತಿದ್ದಾರೆ.

54 ಸೆಕೆಂಡುಗಳ ಈ ವಿಡಿಯೋ ಕ್ಲಿಪ್​ ಗಮನಿಸಿದಿರಲ್ಲವೆ? ಇದರ ರೆಕ್ಕೆಗಳು ಕೊಂಬೆಗೆ ಸಿಕ್ಕಿಕೊಂಡುಬಿಟ್ಟಿವೆ. ಬಿಡಿಸಿಕೊಳ್ಳುವಲ್ಲಿ ವಿಫಲವಾಗಿದೆ. ಹಕ್ಕಿಗೆ ರೆಕ್ಕೆಯೇ ಜೀವ. ರೆಕ್ಕೆಯ ಗತಿಯೇ ಹೀಗಾದರೆ? ಕೆಳಗೆ ನೀರು ಬೇರೆ. ಭಯದಿಂದ ಗೂಬೆ ಎಷ್ಟೊಂದು ಒದ್ದಾಡಿತೋ. ತನ್ನನ್ನು ಈಗ ಈ ಅಪಾಯದಿಂದ ಯಾರು ಹೇಗೆ ಕಾಪಾಡಬಹುದು ಎಂಬ ಅಂದಾಜೂ ಅದಕ್ಕಿರಲಾರದು. ಅದೃಷ್ಟವಶಾತ್​ ಈ ಮನುಷ್ಯ ಅಲ್ಲಿಗೆ ಬಂದಿದ್ದಾನೆ.

ಇದನ್ನೂ ಓದಿ : Viral Video: ”ಡ್ರೀಮಮ್ ವೇಕಪಮ್ ಕ್ರಿಟಿಕಲ್ ಕಂಡೀಷನಮ್” ಗಾಯಕಿ ಅಂಕಿತಾ ಕುಂಡು ಹೊಸ ರೀಲ್​ಗೆ ನೆಟ್ಟಿಗರ ಬೇಸರ

ಗೂಬೆಯ ಜೀವ ಉಳಿಸಿದ ನಿಮಗೆ ಕೃತಜ್ಞತೆ ಎನ್ನುತ್ತಿದ್ದಾರೆ ನೆಟ್​ಮಂದಿ. ನಿಮ್ಮ ತಾಳ್ಮೆ, ಉಪಾಯ ನಿಜಕ್ಕೂ ಶ್ಲಾಘನೀಯ. ಗೂಬೆ ಬಲೆಯೊಳಗೆ ಕುಳಿತುಕೊಳ್ಳುತ್ತಿದ್ದಂತೆ ಆ ದಾರವನ್ನು ಸುಡುವ ನಿಮ್ಮ ಜಾಣ್ಮೆ ಸ್ತುತ್ಯಾರ್ಹ ಎಂದಿದ್ದಾರೆ ಕೆಲವರು. ನೀವು ಅದನ್ನು ಸ್ಪರ್ಶಿಸಿ ಮುದ್ದಿಸುವ ಕ್ಷಣಗಳು ವರ್ಣಿಸಲಸಾಧ್ಯ, ಪರಸ್ಪರ ನಿಮ್ಮಿಬ್ಬರಿಗೂ ಇವ ಅಪೂರ್ವ ಗಳಿಗೆಗಳು ಎಂದು ಹಲವರು ಹೇಳಿದ್ದಾರೆ. ಈ ವಿಡಿಯೋ ಅನ್ನು ಈತನಕ ಸುಮಾರು 2.7 ಮಿಲಿಯನ್​ ಜನರು ನೋಡಿದ್ದಾರೆ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ ಕಾರು ಜಸ್ಟ್​ ಮಿಸ್, ಬೈಕ್ ಹೋಗೇಬಿಡ್ತು
ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ ಕಾರು ಜಸ್ಟ್​ ಮಿಸ್, ಬೈಕ್ ಹೋಗೇಬಿಡ್ತು
Daily Devotional: ಪ್ರದೂಷ ಕಾಲದ ಮಹತ್ವ ಹಾಗೂ ಹಿಂದಿನ ರಹಸ್ಯ ತಿಳಿಯಿರಿ
Daily Devotional: ಪ್ರದೂಷ ಕಾಲದ ಮಹತ್ವ ಹಾಗೂ ಹಿಂದಿನ ರಹಸ್ಯ ತಿಳಿಯಿರಿ
ಬಾಂಬೆ ಹೈಕೋರ್ಟ್​ ಆವರಣದಲ್ಲಿ ವಾಮಾಚಾರ?
ಬಾಂಬೆ ಹೈಕೋರ್ಟ್​ ಆವರಣದಲ್ಲಿ ವಾಮಾಚಾರ?
Daily Horoscope: ಈ ರಾಶಿಯವರಿಗೆ ಇಂದು ಸಾಲ ಮಾಡುವ ಸಂದರ್ಭ ಬರಬಹುದು
Daily Horoscope: ಈ ರಾಶಿಯವರಿಗೆ ಇಂದು ಸಾಲ ಮಾಡುವ ಸಂದರ್ಭ ಬರಬಹುದು
ರಜತ್, ವಿನಯ್ ಗೌಡ ಮೆಡಿಕಲ್ ಚೆಕಪ್; ಲಾಂಗ್ ಹಿಡಿದವರಿಗೆ ಕಾದಿದೆ ಕಷ್ಟ ಕಾಲ
ರಜತ್, ವಿನಯ್ ಗೌಡ ಮೆಡಿಕಲ್ ಚೆಕಪ್; ಲಾಂಗ್ ಹಿಡಿದವರಿಗೆ ಕಾದಿದೆ ಕಷ್ಟ ಕಾಲ
ಹರಿಯಾಣದ ಸೋನಿಪತ್ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ
ಹರಿಯಾಣದ ಸೋನಿಪತ್ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ
ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ