AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಝೂನಲ್ಲಿ ಸಿಂಹವಿದ್ದ ಬೇಲಿಯೊಳಗೆ ಹೋಗಲು ಪ್ರಯತ್ನಿಸಿದ ವ್ಯಕ್ತಿ; ಪ್ರಶ್ನಿಸಿದ್ದಕ್ಕೆ ಊಹಿಸಲೂ ಸಾಧ್ಯವಿಲ್ಲದ ಉತ್ತರ ಕೊಟ್ಟ!

ಈ ವ್ಯಕ್ತಿಯ ಹೆಸರು ಜಿ.ಸಾಯಿಕುಮಾರ್​. 31 ವರ್ಷ.  ನೆಲದ ಮೇಲೆ ಸಿಂಹವಿದೆ. ಈತ ಅಲ್ಲಿಯೇ ಇರುವ ಬಂಡೆಗಲ್ಲಿನ ಮೇಲೆ ಕುಳಿತ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟೆ ವೈರಲ್​ ಆಗುತ್ತಿದೆ.

Video: ಝೂನಲ್ಲಿ ಸಿಂಹವಿದ್ದ ಬೇಲಿಯೊಳಗೆ ಹೋಗಲು ಪ್ರಯತ್ನಿಸಿದ ವ್ಯಕ್ತಿ; ಪ್ರಶ್ನಿಸಿದ್ದಕ್ಕೆ ಊಹಿಸಲೂ ಸಾಧ್ಯವಿಲ್ಲದ ಉತ್ತರ ಕೊಟ್ಟ!
ಸಾಂಕೇತಿಕ ಚಿತ್ರ
TV9 Web
| Edited By: |

Updated on: Nov 28, 2021 | 11:29 AM

Share

ಎಂತೆಂತಾ ವಿಚಿತ್ರ ಜನರು ಇರುತ್ತಾರೆ ಎಂಬುದಕ್ಕೆ ಈ ಸುದ್ದಿಯೇ ಸಾಕ್ಷಿ.  ಹೈದರಾಬಾದ್​​ನಲ್ಲಿ ಒಬ್ಬ ವ್ಯಕ್ತಿ ಅಲ್ಲಿನ ನೆಹರೂ ಝೂಲಾಜಿಕಲ್​ ಪಾರ್ಕ್​​ (ನೆಹರೂ ಝೂ)ಗೆ ಹೋಗಿ ಆತಂಕ ಸೃಷ್ಟಿಸಿದ್ದಾನೆ. ಪ್ರಾಣಿ ಸಂಗ್ರಹಾಲಯಕ್ಕೆ ಹೋದ ಆತ ಸೀದಾ ಆಫ್ರಿಕಾದ ಸಿಂಹಗಳಿದ್ದ ಸ್ಥಳಕ್ಕೆ ಬೇಲಿಯೊಳಗೆ ನುಸುಳಲು ಪ್ರಯತ್ನ ಪಟ್ಟಿದ್ದಾನೆ. ಅದನ್ನು ನೋಡಿದ ಝೂ ಸಿಬ್ಬಂದಿ ಕೂಡಲೇ ಆ ವ್ಯಕ್ತಿಯನ್ನು ತಡೆದು, ಪೊಲೀಸರಿಗೆ ಒಪ್ಪಿಸಿದ್ದಾರೆ.

ವಿಚಿತ್ರ ಕಾರಣ ಕೊಟ್ಟ ವ್ಯಕ್ತಿ ಸಾಮಾನ್ಯವಾಗಿ ಪ್ರಾಣಿ ಸಂಗ್ರಹಾಲಯಗಳಲ್ಲಿ ಬೇರೆಬೇರೆ ವಿಭಾಗಗಳಲ್ಲಿ ಬೇರೆ ಬೇರೆ ಜಾತಿಯ ಪ್ರಾಣಿಗಳು ಇರುತ್ತವೆ. ಹಾಗೇ, ಅವಕ್ಕೊಂದು ಪಂಜರದ ಮಾದರಿಯ ಬೇಲಿ ಮಾಡಿಡಲಾಗುತ್ತದೆ. ಈತ ಸೀದಾ ಬಂದು ಆ ಬೇಲಿಯೊಳಗೆ ನುಗ್ಗಿ ಸಿಂಹವಿದ್ದಲ್ಲಿಗೆ ಹೋಗುವುದನ್ನು ನೋಡಿ ಝೂ ಸಿಬ್ಬಂದಿಯೇ ತಲೆಕೆಡಿಸಿಕೊಂಡಿದ್ದಾರೆ. ಅಲ್ಲಿ ಸಿಂಹ ಓಡಾಡುತ್ತಿದ್ದರೂ ಬೇಲಿಯೊಳಗೆ ಹೋಗಲು ಯಾಕೆ ಪ್ರಯತ್ನಿಸಿದೆ ಎಂಬ ಪ್ರಶ್ನೆಗೆ ಅವನು ನೀಡಿದ ಉತ್ತರ ಇನ್ನಷ್ಟು ಅಚ್ಚರಿಯನ್ನುಂಟು ಮಾಡಿದೆ. ಆ ಸಿಂಹ ಇರುವ ಜಾಗದಲ್ಲಿ ಡೈಮಂಡ್​​ (ವಜ್ರ)ನ್ನು ಅಡಗಿಸಿಡಲಾಗಿದೆ. ಅದನ್ನು ತೆಗೆದುಕೊಳ್ಳಬೇಕು. ಹಾಗಾಗಿ ಒಳಗೆ ಹೋಗುತ್ತಿದ್ದೆ ಎಂದು ಆತ ಹೇಳಿದ್ದಾನೆ.

ಈ ವ್ಯಕ್ತಿಯ ಹೆಸರು ಜಿ.ಸಾಯಿಕುಮಾರ್​. 31 ವರ್ಷ.  ನೆಲದ ಮೇಲೆ ಸಿಂಹವಿದೆ. ಈತ ಅಲ್ಲಿಯೇ ಇರುವ ಬಂಡೆಗಲ್ಲಿನ ಮೇಲೆ ಕುಳಿತ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟೆ ವೈರಲ್​ ಆಗುತ್ತಿದೆ.  ಪೊಲೀಸರು ಈತನನ್ನು ಹಿಡಿದು ವಿಚಾರಿಸಿದಾಗ ಇವನು ಸ್ವಲ್ಪಮಟ್ಟಿಗೆ ಮಾನಸಿಕ ಅಸ್ವಸ್ಥ ಎಂಬುದು ಗೊತ್ತಾಗಿದೆ.  ನಂತರ ಪೊಲೀಸರು ಯುವಕನ ಪಾಲಕರಿಗೆ ವಿಷಯ ತಿಳಿಸಿ ಆತನನ್ನು ಕಳಿಸಿಕೊಟ್ಟಿದ್ದಾರೆ.

ಇದನ್ನೂ ಓದಿ: Mann Ki Baat: ಇಂದು ಬೆಳಗ್ಗೆ 11 ಗಂಟೆಗೆ ಪ್ರಧಾನಿ ಮೋದಿಯವರಿಂದ ಮನ್​ ಕೀ ಬಾತ್​; ಎಲ್ಲೆಲ್ಲಿ ಪ್ರಸಾರಗೊಳ್ಳಿದೆ? ಇಲ್ಲಿದೆ ಮಾಹಿತಿ

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ