AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಝೂನಲ್ಲಿ ಸಿಂಹವಿದ್ದ ಬೇಲಿಯೊಳಗೆ ಹೋಗಲು ಪ್ರಯತ್ನಿಸಿದ ವ್ಯಕ್ತಿ; ಪ್ರಶ್ನಿಸಿದ್ದಕ್ಕೆ ಊಹಿಸಲೂ ಸಾಧ್ಯವಿಲ್ಲದ ಉತ್ತರ ಕೊಟ್ಟ!

ಈ ವ್ಯಕ್ತಿಯ ಹೆಸರು ಜಿ.ಸಾಯಿಕುಮಾರ್​. 31 ವರ್ಷ.  ನೆಲದ ಮೇಲೆ ಸಿಂಹವಿದೆ. ಈತ ಅಲ್ಲಿಯೇ ಇರುವ ಬಂಡೆಗಲ್ಲಿನ ಮೇಲೆ ಕುಳಿತ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟೆ ವೈರಲ್​ ಆಗುತ್ತಿದೆ.

Video: ಝೂನಲ್ಲಿ ಸಿಂಹವಿದ್ದ ಬೇಲಿಯೊಳಗೆ ಹೋಗಲು ಪ್ರಯತ್ನಿಸಿದ ವ್ಯಕ್ತಿ; ಪ್ರಶ್ನಿಸಿದ್ದಕ್ಕೆ ಊಹಿಸಲೂ ಸಾಧ್ಯವಿಲ್ಲದ ಉತ್ತರ ಕೊಟ್ಟ!
ಸಾಂಕೇತಿಕ ಚಿತ್ರ
TV9 Web
| Edited By: |

Updated on: Nov 28, 2021 | 11:29 AM

Share

ಎಂತೆಂತಾ ವಿಚಿತ್ರ ಜನರು ಇರುತ್ತಾರೆ ಎಂಬುದಕ್ಕೆ ಈ ಸುದ್ದಿಯೇ ಸಾಕ್ಷಿ.  ಹೈದರಾಬಾದ್​​ನಲ್ಲಿ ಒಬ್ಬ ವ್ಯಕ್ತಿ ಅಲ್ಲಿನ ನೆಹರೂ ಝೂಲಾಜಿಕಲ್​ ಪಾರ್ಕ್​​ (ನೆಹರೂ ಝೂ)ಗೆ ಹೋಗಿ ಆತಂಕ ಸೃಷ್ಟಿಸಿದ್ದಾನೆ. ಪ್ರಾಣಿ ಸಂಗ್ರಹಾಲಯಕ್ಕೆ ಹೋದ ಆತ ಸೀದಾ ಆಫ್ರಿಕಾದ ಸಿಂಹಗಳಿದ್ದ ಸ್ಥಳಕ್ಕೆ ಬೇಲಿಯೊಳಗೆ ನುಸುಳಲು ಪ್ರಯತ್ನ ಪಟ್ಟಿದ್ದಾನೆ. ಅದನ್ನು ನೋಡಿದ ಝೂ ಸಿಬ್ಬಂದಿ ಕೂಡಲೇ ಆ ವ್ಯಕ್ತಿಯನ್ನು ತಡೆದು, ಪೊಲೀಸರಿಗೆ ಒಪ್ಪಿಸಿದ್ದಾರೆ.

ವಿಚಿತ್ರ ಕಾರಣ ಕೊಟ್ಟ ವ್ಯಕ್ತಿ ಸಾಮಾನ್ಯವಾಗಿ ಪ್ರಾಣಿ ಸಂಗ್ರಹಾಲಯಗಳಲ್ಲಿ ಬೇರೆಬೇರೆ ವಿಭಾಗಗಳಲ್ಲಿ ಬೇರೆ ಬೇರೆ ಜಾತಿಯ ಪ್ರಾಣಿಗಳು ಇರುತ್ತವೆ. ಹಾಗೇ, ಅವಕ್ಕೊಂದು ಪಂಜರದ ಮಾದರಿಯ ಬೇಲಿ ಮಾಡಿಡಲಾಗುತ್ತದೆ. ಈತ ಸೀದಾ ಬಂದು ಆ ಬೇಲಿಯೊಳಗೆ ನುಗ್ಗಿ ಸಿಂಹವಿದ್ದಲ್ಲಿಗೆ ಹೋಗುವುದನ್ನು ನೋಡಿ ಝೂ ಸಿಬ್ಬಂದಿಯೇ ತಲೆಕೆಡಿಸಿಕೊಂಡಿದ್ದಾರೆ. ಅಲ್ಲಿ ಸಿಂಹ ಓಡಾಡುತ್ತಿದ್ದರೂ ಬೇಲಿಯೊಳಗೆ ಹೋಗಲು ಯಾಕೆ ಪ್ರಯತ್ನಿಸಿದೆ ಎಂಬ ಪ್ರಶ್ನೆಗೆ ಅವನು ನೀಡಿದ ಉತ್ತರ ಇನ್ನಷ್ಟು ಅಚ್ಚರಿಯನ್ನುಂಟು ಮಾಡಿದೆ. ಆ ಸಿಂಹ ಇರುವ ಜಾಗದಲ್ಲಿ ಡೈಮಂಡ್​​ (ವಜ್ರ)ನ್ನು ಅಡಗಿಸಿಡಲಾಗಿದೆ. ಅದನ್ನು ತೆಗೆದುಕೊಳ್ಳಬೇಕು. ಹಾಗಾಗಿ ಒಳಗೆ ಹೋಗುತ್ತಿದ್ದೆ ಎಂದು ಆತ ಹೇಳಿದ್ದಾನೆ.

ಈ ವ್ಯಕ್ತಿಯ ಹೆಸರು ಜಿ.ಸಾಯಿಕುಮಾರ್​. 31 ವರ್ಷ.  ನೆಲದ ಮೇಲೆ ಸಿಂಹವಿದೆ. ಈತ ಅಲ್ಲಿಯೇ ಇರುವ ಬಂಡೆಗಲ್ಲಿನ ಮೇಲೆ ಕುಳಿತ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟೆ ವೈರಲ್​ ಆಗುತ್ತಿದೆ.  ಪೊಲೀಸರು ಈತನನ್ನು ಹಿಡಿದು ವಿಚಾರಿಸಿದಾಗ ಇವನು ಸ್ವಲ್ಪಮಟ್ಟಿಗೆ ಮಾನಸಿಕ ಅಸ್ವಸ್ಥ ಎಂಬುದು ಗೊತ್ತಾಗಿದೆ.  ನಂತರ ಪೊಲೀಸರು ಯುವಕನ ಪಾಲಕರಿಗೆ ವಿಷಯ ತಿಳಿಸಿ ಆತನನ್ನು ಕಳಿಸಿಕೊಟ್ಟಿದ್ದಾರೆ.

ಇದನ್ನೂ ಓದಿ: Mann Ki Baat: ಇಂದು ಬೆಳಗ್ಗೆ 11 ಗಂಟೆಗೆ ಪ್ರಧಾನಿ ಮೋದಿಯವರಿಂದ ಮನ್​ ಕೀ ಬಾತ್​; ಎಲ್ಲೆಲ್ಲಿ ಪ್ರಸಾರಗೊಳ್ಳಿದೆ? ಇಲ್ಲಿದೆ ಮಾಹಿತಿ

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ