AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಝೂನಲ್ಲಿ ಸಿಂಹವಿದ್ದ ಬೇಲಿಯೊಳಗೆ ಹೋಗಲು ಪ್ರಯತ್ನಿಸಿದ ವ್ಯಕ್ತಿ; ಪ್ರಶ್ನಿಸಿದ್ದಕ್ಕೆ ಊಹಿಸಲೂ ಸಾಧ್ಯವಿಲ್ಲದ ಉತ್ತರ ಕೊಟ್ಟ!

ಈ ವ್ಯಕ್ತಿಯ ಹೆಸರು ಜಿ.ಸಾಯಿಕುಮಾರ್​. 31 ವರ್ಷ.  ನೆಲದ ಮೇಲೆ ಸಿಂಹವಿದೆ. ಈತ ಅಲ್ಲಿಯೇ ಇರುವ ಬಂಡೆಗಲ್ಲಿನ ಮೇಲೆ ಕುಳಿತ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟೆ ವೈರಲ್​ ಆಗುತ್ತಿದೆ.

Video: ಝೂನಲ್ಲಿ ಸಿಂಹವಿದ್ದ ಬೇಲಿಯೊಳಗೆ ಹೋಗಲು ಪ್ರಯತ್ನಿಸಿದ ವ್ಯಕ್ತಿ; ಪ್ರಶ್ನಿಸಿದ್ದಕ್ಕೆ ಊಹಿಸಲೂ ಸಾಧ್ಯವಿಲ್ಲದ ಉತ್ತರ ಕೊಟ್ಟ!
ಸಾಂಕೇತಿಕ ಚಿತ್ರ
TV9 Web
| Edited By: |

Updated on: Nov 28, 2021 | 11:29 AM

Share

ಎಂತೆಂತಾ ವಿಚಿತ್ರ ಜನರು ಇರುತ್ತಾರೆ ಎಂಬುದಕ್ಕೆ ಈ ಸುದ್ದಿಯೇ ಸಾಕ್ಷಿ.  ಹೈದರಾಬಾದ್​​ನಲ್ಲಿ ಒಬ್ಬ ವ್ಯಕ್ತಿ ಅಲ್ಲಿನ ನೆಹರೂ ಝೂಲಾಜಿಕಲ್​ ಪಾರ್ಕ್​​ (ನೆಹರೂ ಝೂ)ಗೆ ಹೋಗಿ ಆತಂಕ ಸೃಷ್ಟಿಸಿದ್ದಾನೆ. ಪ್ರಾಣಿ ಸಂಗ್ರಹಾಲಯಕ್ಕೆ ಹೋದ ಆತ ಸೀದಾ ಆಫ್ರಿಕಾದ ಸಿಂಹಗಳಿದ್ದ ಸ್ಥಳಕ್ಕೆ ಬೇಲಿಯೊಳಗೆ ನುಸುಳಲು ಪ್ರಯತ್ನ ಪಟ್ಟಿದ್ದಾನೆ. ಅದನ್ನು ನೋಡಿದ ಝೂ ಸಿಬ್ಬಂದಿ ಕೂಡಲೇ ಆ ವ್ಯಕ್ತಿಯನ್ನು ತಡೆದು, ಪೊಲೀಸರಿಗೆ ಒಪ್ಪಿಸಿದ್ದಾರೆ.

ವಿಚಿತ್ರ ಕಾರಣ ಕೊಟ್ಟ ವ್ಯಕ್ತಿ ಸಾಮಾನ್ಯವಾಗಿ ಪ್ರಾಣಿ ಸಂಗ್ರಹಾಲಯಗಳಲ್ಲಿ ಬೇರೆಬೇರೆ ವಿಭಾಗಗಳಲ್ಲಿ ಬೇರೆ ಬೇರೆ ಜಾತಿಯ ಪ್ರಾಣಿಗಳು ಇರುತ್ತವೆ. ಹಾಗೇ, ಅವಕ್ಕೊಂದು ಪಂಜರದ ಮಾದರಿಯ ಬೇಲಿ ಮಾಡಿಡಲಾಗುತ್ತದೆ. ಈತ ಸೀದಾ ಬಂದು ಆ ಬೇಲಿಯೊಳಗೆ ನುಗ್ಗಿ ಸಿಂಹವಿದ್ದಲ್ಲಿಗೆ ಹೋಗುವುದನ್ನು ನೋಡಿ ಝೂ ಸಿಬ್ಬಂದಿಯೇ ತಲೆಕೆಡಿಸಿಕೊಂಡಿದ್ದಾರೆ. ಅಲ್ಲಿ ಸಿಂಹ ಓಡಾಡುತ್ತಿದ್ದರೂ ಬೇಲಿಯೊಳಗೆ ಹೋಗಲು ಯಾಕೆ ಪ್ರಯತ್ನಿಸಿದೆ ಎಂಬ ಪ್ರಶ್ನೆಗೆ ಅವನು ನೀಡಿದ ಉತ್ತರ ಇನ್ನಷ್ಟು ಅಚ್ಚರಿಯನ್ನುಂಟು ಮಾಡಿದೆ. ಆ ಸಿಂಹ ಇರುವ ಜಾಗದಲ್ಲಿ ಡೈಮಂಡ್​​ (ವಜ್ರ)ನ್ನು ಅಡಗಿಸಿಡಲಾಗಿದೆ. ಅದನ್ನು ತೆಗೆದುಕೊಳ್ಳಬೇಕು. ಹಾಗಾಗಿ ಒಳಗೆ ಹೋಗುತ್ತಿದ್ದೆ ಎಂದು ಆತ ಹೇಳಿದ್ದಾನೆ.

ಈ ವ್ಯಕ್ತಿಯ ಹೆಸರು ಜಿ.ಸಾಯಿಕುಮಾರ್​. 31 ವರ್ಷ.  ನೆಲದ ಮೇಲೆ ಸಿಂಹವಿದೆ. ಈತ ಅಲ್ಲಿಯೇ ಇರುವ ಬಂಡೆಗಲ್ಲಿನ ಮೇಲೆ ಕುಳಿತ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟೆ ವೈರಲ್​ ಆಗುತ್ತಿದೆ.  ಪೊಲೀಸರು ಈತನನ್ನು ಹಿಡಿದು ವಿಚಾರಿಸಿದಾಗ ಇವನು ಸ್ವಲ್ಪಮಟ್ಟಿಗೆ ಮಾನಸಿಕ ಅಸ್ವಸ್ಥ ಎಂಬುದು ಗೊತ್ತಾಗಿದೆ.  ನಂತರ ಪೊಲೀಸರು ಯುವಕನ ಪಾಲಕರಿಗೆ ವಿಷಯ ತಿಳಿಸಿ ಆತನನ್ನು ಕಳಿಸಿಕೊಟ್ಟಿದ್ದಾರೆ.

ಇದನ್ನೂ ಓದಿ: Mann Ki Baat: ಇಂದು ಬೆಳಗ್ಗೆ 11 ಗಂಟೆಗೆ ಪ್ರಧಾನಿ ಮೋದಿಯವರಿಂದ ಮನ್​ ಕೀ ಬಾತ್​; ಎಲ್ಲೆಲ್ಲಿ ಪ್ರಸಾರಗೊಳ್ಳಿದೆ? ಇಲ್ಲಿದೆ ಮಾಹಿತಿ

Follow Us
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ