AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಝೂನಲ್ಲಿ ಸಿಂಹವಿದ್ದ ಬೇಲಿಯೊಳಗೆ ಹೋಗಲು ಪ್ರಯತ್ನಿಸಿದ ವ್ಯಕ್ತಿ; ಪ್ರಶ್ನಿಸಿದ್ದಕ್ಕೆ ಊಹಿಸಲೂ ಸಾಧ್ಯವಿಲ್ಲದ ಉತ್ತರ ಕೊಟ್ಟ!

ಈ ವ್ಯಕ್ತಿಯ ಹೆಸರು ಜಿ.ಸಾಯಿಕುಮಾರ್​. 31 ವರ್ಷ.  ನೆಲದ ಮೇಲೆ ಸಿಂಹವಿದೆ. ಈತ ಅಲ್ಲಿಯೇ ಇರುವ ಬಂಡೆಗಲ್ಲಿನ ಮೇಲೆ ಕುಳಿತ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟೆ ವೈರಲ್​ ಆಗುತ್ತಿದೆ.

Video: ಝೂನಲ್ಲಿ ಸಿಂಹವಿದ್ದ ಬೇಲಿಯೊಳಗೆ ಹೋಗಲು ಪ್ರಯತ್ನಿಸಿದ ವ್ಯಕ್ತಿ; ಪ್ರಶ್ನಿಸಿದ್ದಕ್ಕೆ ಊಹಿಸಲೂ ಸಾಧ್ಯವಿಲ್ಲದ ಉತ್ತರ ಕೊಟ್ಟ!
ಸಾಂಕೇತಿಕ ಚಿತ್ರ
TV9 Web
| Edited By: |

Updated on: Nov 28, 2021 | 11:29 AM

Share

ಎಂತೆಂತಾ ವಿಚಿತ್ರ ಜನರು ಇರುತ್ತಾರೆ ಎಂಬುದಕ್ಕೆ ಈ ಸುದ್ದಿಯೇ ಸಾಕ್ಷಿ.  ಹೈದರಾಬಾದ್​​ನಲ್ಲಿ ಒಬ್ಬ ವ್ಯಕ್ತಿ ಅಲ್ಲಿನ ನೆಹರೂ ಝೂಲಾಜಿಕಲ್​ ಪಾರ್ಕ್​​ (ನೆಹರೂ ಝೂ)ಗೆ ಹೋಗಿ ಆತಂಕ ಸೃಷ್ಟಿಸಿದ್ದಾನೆ. ಪ್ರಾಣಿ ಸಂಗ್ರಹಾಲಯಕ್ಕೆ ಹೋದ ಆತ ಸೀದಾ ಆಫ್ರಿಕಾದ ಸಿಂಹಗಳಿದ್ದ ಸ್ಥಳಕ್ಕೆ ಬೇಲಿಯೊಳಗೆ ನುಸುಳಲು ಪ್ರಯತ್ನ ಪಟ್ಟಿದ್ದಾನೆ. ಅದನ್ನು ನೋಡಿದ ಝೂ ಸಿಬ್ಬಂದಿ ಕೂಡಲೇ ಆ ವ್ಯಕ್ತಿಯನ್ನು ತಡೆದು, ಪೊಲೀಸರಿಗೆ ಒಪ್ಪಿಸಿದ್ದಾರೆ.

ವಿಚಿತ್ರ ಕಾರಣ ಕೊಟ್ಟ ವ್ಯಕ್ತಿ ಸಾಮಾನ್ಯವಾಗಿ ಪ್ರಾಣಿ ಸಂಗ್ರಹಾಲಯಗಳಲ್ಲಿ ಬೇರೆಬೇರೆ ವಿಭಾಗಗಳಲ್ಲಿ ಬೇರೆ ಬೇರೆ ಜಾತಿಯ ಪ್ರಾಣಿಗಳು ಇರುತ್ತವೆ. ಹಾಗೇ, ಅವಕ್ಕೊಂದು ಪಂಜರದ ಮಾದರಿಯ ಬೇಲಿ ಮಾಡಿಡಲಾಗುತ್ತದೆ. ಈತ ಸೀದಾ ಬಂದು ಆ ಬೇಲಿಯೊಳಗೆ ನುಗ್ಗಿ ಸಿಂಹವಿದ್ದಲ್ಲಿಗೆ ಹೋಗುವುದನ್ನು ನೋಡಿ ಝೂ ಸಿಬ್ಬಂದಿಯೇ ತಲೆಕೆಡಿಸಿಕೊಂಡಿದ್ದಾರೆ. ಅಲ್ಲಿ ಸಿಂಹ ಓಡಾಡುತ್ತಿದ್ದರೂ ಬೇಲಿಯೊಳಗೆ ಹೋಗಲು ಯಾಕೆ ಪ್ರಯತ್ನಿಸಿದೆ ಎಂಬ ಪ್ರಶ್ನೆಗೆ ಅವನು ನೀಡಿದ ಉತ್ತರ ಇನ್ನಷ್ಟು ಅಚ್ಚರಿಯನ್ನುಂಟು ಮಾಡಿದೆ. ಆ ಸಿಂಹ ಇರುವ ಜಾಗದಲ್ಲಿ ಡೈಮಂಡ್​​ (ವಜ್ರ)ನ್ನು ಅಡಗಿಸಿಡಲಾಗಿದೆ. ಅದನ್ನು ತೆಗೆದುಕೊಳ್ಳಬೇಕು. ಹಾಗಾಗಿ ಒಳಗೆ ಹೋಗುತ್ತಿದ್ದೆ ಎಂದು ಆತ ಹೇಳಿದ್ದಾನೆ.

ಈ ವ್ಯಕ್ತಿಯ ಹೆಸರು ಜಿ.ಸಾಯಿಕುಮಾರ್​. 31 ವರ್ಷ.  ನೆಲದ ಮೇಲೆ ಸಿಂಹವಿದೆ. ಈತ ಅಲ್ಲಿಯೇ ಇರುವ ಬಂಡೆಗಲ್ಲಿನ ಮೇಲೆ ಕುಳಿತ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟೆ ವೈರಲ್​ ಆಗುತ್ತಿದೆ.  ಪೊಲೀಸರು ಈತನನ್ನು ಹಿಡಿದು ವಿಚಾರಿಸಿದಾಗ ಇವನು ಸ್ವಲ್ಪಮಟ್ಟಿಗೆ ಮಾನಸಿಕ ಅಸ್ವಸ್ಥ ಎಂಬುದು ಗೊತ್ತಾಗಿದೆ.  ನಂತರ ಪೊಲೀಸರು ಯುವಕನ ಪಾಲಕರಿಗೆ ವಿಷಯ ತಿಳಿಸಿ ಆತನನ್ನು ಕಳಿಸಿಕೊಟ್ಟಿದ್ದಾರೆ.

ಇದನ್ನೂ ಓದಿ: Mann Ki Baat: ಇಂದು ಬೆಳಗ್ಗೆ 11 ಗಂಟೆಗೆ ಪ್ರಧಾನಿ ಮೋದಿಯವರಿಂದ ಮನ್​ ಕೀ ಬಾತ್​; ಎಲ್ಲೆಲ್ಲಿ ಪ್ರಸಾರಗೊಳ್ಳಿದೆ? ಇಲ್ಲಿದೆ ಮಾಹಿತಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ