Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಂಡರ್ ಡೇಟ್​ನ ನಂತರ ಜೈಲುಪಾಲಾದ ವ್ಯಕ್ತಿ

Capitol Riot : ಡೇಟ್​ ಮುಗಿದ ಮರುದಿನ ಅಮೆರಿಕದ ಸಂಸತ್ತಿನೆದುರು ಗಲಭೆ ಎದ್ದಿದ್ದನ್ನು ಟಿವಿಯಲ್ಲಿ ನೋಡಿದ ಈತ ಉಬರ್​ನಲ್ಲಿ ಪ್ರಯಾಣಿಸಿ ಆ ಗುಂಪಿಗೆ ಸೇರಿಕೊಂಡ. ಇದೀಗ ಪೊಲೀಸರು ಈ ವ್ಯಕ್ತಿಗೆ 30 ದಿನಗಳ ಜೈಲುಶಿಕ್ಷೆ ನೀಡಿದ್ದಾರೆ.

ಟಿಂಡರ್ ಡೇಟ್​ನ ನಂತರ ಜೈಲುಪಾಲಾದ ವ್ಯಕ್ತಿ
A man was arrested for participating in Capital Riot after a tinder date
Follow us
TV9 Web
| Updated By: ಶ್ರೀದೇವಿ ಕಳಸದ

Updated on:Nov 21, 2022 | 3:59 PM

Viral Video : 2022ರ ಜನವರಿ 6 ರಂದು ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ‘ಸ್ಟಾಪ್ ದಿ ಸ್ಟೀಲ್’ ರ್ಯಾಲಿಯ ಮುನ್ನಾದಿನದಂದು ಡೆಲ್​ವೇರ್​ನ ಉದ್ಯಮಿ ಸ್ಕೇಫರ್ ಟಿಂಡರ್ ಆನ್‌ಲೈನ್ ಡೇಟಿಂಗ್ ಅಪ್ಲಿಕೇಶನ್‌ನಲ್ಲಿ ಪರಿಚಯವಾದ ಮಹಿಳೆಯೊಂದಿಗೆ ರಾತ್ರಿ ಕಳೆಯಲು ಡೆಲವೇರ್‌ನಿಂದ ವರ್ಜೀನಿಯಾಕ್ಕೆ ಪ್ರಯಾಣಿಸಿದ. ಡೇಟ್​ ಮುಗಿದ ಮರುದಿನ ಅಮೆರಿಕದ ಸಂಸತ್ತಿನೆದುರು ಗಲಭೆ ಎದ್ದಿದ್ದನ್ನು ಟಿವಿಯಲ್ಲಿ ನೋಡಿದ ಈತ ಉಬರ್​ನಲ್ಲಿ ಪ್ರಯಾಣಿಸಿ ಆ ಗುಂಪಿಗೆ ಸೇರಿಕೊಂಡ. ಇದೀಗ ಪೊಲೀಸರು ಈ ವ್ಯಕ್ತಿಗೆ 30 ದಿನಗಳ ಜೈಲುಶಿಕ್ಷೆ ನೀಡಿದ್ದಾರೆ. ಗಲಭೆಯಲ್ಲಿ ಪಾಲ್ಗೊಂಡಿದ್ದಕ್ಕಾಗಿ 2,000 ಡಾಲರ್​ ದಂಡ ವಿಧಿಸಿದ್ದಾರೆ. ಅಮೆರಿಕದ ಜಿಲ್ಲಾ ನ್ಯಾಯಾಧೀಶ ಥಾಮಸ್​ ಹೊಗನ್ ಈ ಕುರಿತು​ ಶುಕ್ರವಾರ ಆದೇಶಿಸಿದ್ದಾರೆ.

ಸ್ಕೇಫರ್ ಸೆನೆಟ್ ವಿಂಗ್​ನ ಬಾಗಿಲುಗಳ ಬಳಿ ಇರುವ ಮುರಿದ ಕಿಟಕಿಯ ಮೂಲಕ ಸಂಸತ್ತನ್ನು ಪ್ರವೇಶಿಸಿ ಗಲಭೆ ನಡೆಸುತ್ತಿದ್ದ ಗುಂಪಿನೊಂದಿಗೆ ಸ್ಕೇಫರ್​ ಸೇರಿಸಿಕೊಂಡಿದ್ದಾನೆ. ಸುಮಾರು 28 ನಿಮಿಷಗಳ ಕಾಲ ಗಲಭೆಗೆ ಈತ ಸಾಕ್ಷಿಯಾಗಿದ್ದಾನೆ. ಈ ಕುರಿತು ಎಲ್ಲ ಸಾಕ್ಷ್ಯಾಧಾರಗಳನ್ನು ಸಾಬೀತುಪಡಿಸಿದ ಪಬ್ಲಿಕ್ ಪ್ರಾಸಿಕ್ಯೂಟರ್ 36 ವರ್ಷದ ಸ್ಕೇಫರ್​ನನ್ನು ಅಪರಾಧಿ ಎಂದು ಪರಿಗಣಿಸಬೇಕೆಂದು 2022ರ ಜನವರಿಯಲ್ಲಿ ತಿಳಿಸಿದ್ದರು.

ಇದನ್ನೂ ಓದಿ  : ಮೆನ್ಸ್​ ಡೇ ಪಂಚಾಂಗದಾಗೂ ಇಲ್ಲ ಮತ್ತ ಗೂಗಲ್​ ಡೂಡಲ್​ದಾಗೂ ಇಲ್ಲ; ಸೋನು ವೇಣುಗೋಪಾಲ

ಇದನ್ನೂ ಓದಿ
Image
Literature: ನೆರೆನಾಡ ನುಡಿಯೊಳಗಾಡಿ; ‘ಈಗಲೇ ರಿಕಾರ್ಡ್ ಹಚ್ಚಬಾರದು, ಇನ್ನೂ ಅಪ್ಪನ ಖತಮು ಮುಗಿದಿಲ್ಲ’
Image
Literature : ನೆರೆನಾಡ ನುಡಿಯೊಳಗಾಡಿ; ಬಿಎಂ ಶರ್ಮಾ ಅನುವಾದಿಸಿದ ರಾಹುಲ ಸಾಂಕೃತ್ಯಾಯನ ಕಥೆ ‘ನಿಶಾ‘
Image
Literature: ನೆರೆನಾಡ ನುಡಿಯೊಳಗಾಡಿ; ‘ಉಭಯ ಜೀವನ’ ಕೆಕೆ ಗಂಗಾಧರನ್ ಅನುವಾದಿಸಿದ ಮಲಯಾಳ ಕಥೆ
Image
Literature: ನೆರೆನಾಡ ನುಡಿಯೊಳಗಾಡಿ; ಪಾವಣ್ಣನ್ ಚಿಂತಾಮಣಿ ಕೊಡ್ಲೆಕೆರೆ ಅನುವಾದಿಸಿದ ಬಿ ಜಯಮೋಹನ್ ಕಥೆ ‘ವಿಷಸರ್ಪ’

ಅಧ್ಯಕ್ಷ ಜೋ ಬೈಡನ್​ ಅವರ 2020 ರ ಚುನಾವಣಾ ಫಲಿತಾಂಶದ ಸಂದರ್ಭದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಜಂಟಿ ಅಧಿವೇಶನದಲ್ಲಿ ಯಾವುದೇ ರೀತಿಯ ಹಿಂಸಾಚಾರದಲ್ಲಿ ಸ್ಕೇಫರ್ ತೊಡಗಿಕೊಂಡಿಲ್ಲ ಎಂದು ಸ್ಕೇಫರ್​ ಪರ ವಕೀಲ ಜೋಶುವಾ ವಾದಿಸಿದ್ದರೂ ನ್ಯಾಯಾಲಯ ಇವರ ವಾದವನ್ನು ತಳ್ಳಿಹಾಕಿತು. ನಂತರ ಆರೋಪಿ ತನ್ನ ತಪ್ಪನ್ನು ಒಪ್ಪಿಕೊಂಡ.

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 3:58 pm, Mon, 21 November 22

ವಾಟರ್ ಬಾಟಲ್ ಆರೋಗ್ಯಕ್ಕೆ ಮಾರಕ: ಆರೋಗ್ಯ ಸಚಿವರ ಸುದ್ದಿಗೋಷ್ಠಿ ಲೈವ್​
ವಾಟರ್ ಬಾಟಲ್ ಆರೋಗ್ಯಕ್ಕೆ ಮಾರಕ: ಆರೋಗ್ಯ ಸಚಿವರ ಸುದ್ದಿಗೋಷ್ಠಿ ಲೈವ್​
ದ್ವಿತೀಯ ಪಿಯು ಫಲಿತಾಂಶ: ಲಾರಿ ಡ್ರೈವರ್​ ಪುತ್ರಿ ಕರ್ನಾಟಕಕ್ಕೆ ಫಸ್ಟ್
ದ್ವಿತೀಯ ಪಿಯು ಫಲಿತಾಂಶ: ಲಾರಿ ಡ್ರೈವರ್​ ಪುತ್ರಿ ಕರ್ನಾಟಕಕ್ಕೆ ಫಸ್ಟ್
ಸರ್ಕಾರೀ ಕಾಲೇಜುಗಳಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಪ್ರಯತ್ನ: ಸಚಿವ
ಸರ್ಕಾರೀ ಕಾಲೇಜುಗಳಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಪ್ರಯತ್ನ: ಸಚಿವ
IPL 2025: ಗೆಲುವಿನ ಬಳಿಕ RCB ಸಂಭ್ರಮ ಹೇಗಿತ್ತು? ಇಲ್ಲಿದೆ ವಿಡಿಯೋ
IPL 2025: ಗೆಲುವಿನ ಬಳಿಕ RCB ಸಂಭ್ರಮ ಹೇಗಿತ್ತು? ಇಲ್ಲಿದೆ ವಿಡಿಯೋ
ಅಂಗಡಿಗಳಲ್ಲಿ ನೀರಿನ ಬಾಟಲ್​​​​ ಖರೀದಿಸುವ ಮುನ್ನ ಎಚ್ಚರ...!
ಅಂಗಡಿಗಳಲ್ಲಿ ನೀರಿನ ಬಾಟಲ್​​​​ ಖರೀದಿಸುವ ಮುನ್ನ ಎಚ್ಚರ...!
Live: ದ್ವಿತೀಯ ಪಿಯುಸಿ ಫಲಿತಾಂಶ 2025 ಲೈವ್​ ವಿಡಿಯೋ
Live: ದ್ವಿತೀಯ ಪಿಯುಸಿ ಫಲಿತಾಂಶ 2025 ಲೈವ್​ ವಿಡಿಯೋ
ಸಿಲಿಂಡರ್ ಬೆಲೆ ಹೆಚ್ಚಾಗಿರುವುದನ್ನು ಸರ್ಕಾರ ಗುರಾಣಿಯಾಗಿ ಬಳಸಬಾರದು: ರವಿ
ಸಿಲಿಂಡರ್ ಬೆಲೆ ಹೆಚ್ಚಾಗಿರುವುದನ್ನು ಸರ್ಕಾರ ಗುರಾಣಿಯಾಗಿ ಬಳಸಬಾರದು: ರವಿ
ಕೋರ್ಟ್ ಮುಂದೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಪವಿತ್ರಾ ಗೌಡ
ಕೋರ್ಟ್ ಮುಂದೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಪವಿತ್ರಾ ಗೌಡ
ದೊಡ್ಡ ನಗರದಲ್ಲಿ ಇಂತಹ ಘಟನೆಗಳು ನಡೆಯುತ್ತವೆ ಹೇಳಿಕೆಗೆ ಪರಮೇಶ್ವರ್ ವಿಷಾದ
ದೊಡ್ಡ ನಗರದಲ್ಲಿ ಇಂತಹ ಘಟನೆಗಳು ನಡೆಯುತ್ತವೆ ಹೇಳಿಕೆಗೆ ಪರಮೇಶ್ವರ್ ವಿಷಾದ
ಹಾಸನಕ್ಕೆ ನಾನ್ಯಾವತ್ತೂ ಕೃಷಿ ವಿಶ್ವವಿದ್ಯಾಲಯ ಕೇಳಿಲ್ಲ: ರೇವಣ್ಣ
ಹಾಸನಕ್ಕೆ ನಾನ್ಯಾವತ್ತೂ ಕೃಷಿ ವಿಶ್ವವಿದ್ಯಾಲಯ ಕೇಳಿಲ್ಲ: ರೇವಣ್ಣ