AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ವಂದೇ ಭಾರತ್ ಎಕ್ಸ್​​ಪ್ರೆಸ್​ ಟ್ರೈನ್ ಬರುವ ವೇಳೆ ಹಳಿ ದಾಟಿದ ವ್ಯಕ್ತಿ, ಮುಂದೆನಾಯ್ತು ನೋಡಿ? 

ರೈಲು ಇನ್ನೇನೂ ಬರುತ್ತಿದೆ ಎನ್ನುವ ಸಂದರ್ಭದಲ್ಲಿ  ಆ ಸ್ಥಳದಲ್ಲಿ ರೈಲ್ವೆ ಹಳಿಯನ್ನು ದಾಟುವುದು ದೊಡ್ಡ ಅಪಾಯ ಅಂತಾನೇ ಹೇಳ್ಬಹುದು. ಏಕೆಂದ್ರೆ ರೈಲು ತುಂಬಾನೇ ವೇಗವಾಗಿ ಬರುತ್ತಿರುತ್ತೆ,  ಹೀಗೆ ರೈಲು ಅಲ್ಲೆಲ್ಲೋ ದೂರದಲ್ಲಿ ಬರುತ್ತಿರೋದಲ್ವಾ, ಆ ಕಡೆ ದಾಟಿದ್ರೆ ಏನು ಆಗಲ್ಲ ಅಂತ ಹೇಳಿ, ರೈಲು ಬರುವ ಸಂದರ್ಭದಲ್ಲಿ ರೈಲ್ವೆ ಹಳಿಯನ್ನು ದಾಟಲು ಹೋಗಿ ಅದೆಷ್ಟೋ ಜನರು ಪ್ರಾಣವನ್ನು ಕಳೆದುಕೊಂಡಿದ್ದಾರೆ. ಅದೇ ರೀತಿ ಇಲ್ಲೊಬ್ರು  ವ್ಯಕ್ತಿ ವಂದೇ ಭಾರತ್ ಟ್ರೈನ್ ವೇಗವಾಗಿ ಬರುತ್ತಿರುವ  ಸಂದರ್ಭದಲ್ಲಿ  ಭಂಡ ಧೈರ್ಯದಿಂದ ರೈಲ್ವೆ ಹಳಿ ದಾಟಲು ಹೋಗಿ, ಕೂದಲೆಳೆಯುವ ಅಂತರದಲ್ಲಿ  ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Viral Video: ವಂದೇ ಭಾರತ್ ಎಕ್ಸ್​​ಪ್ರೆಸ್​ ಟ್ರೈನ್ ಬರುವ ವೇಳೆ ಹಳಿ ದಾಟಿದ ವ್ಯಕ್ತಿ, ಮುಂದೆನಾಯ್ತು ನೋಡಿ? 
ಮಾಲಾಶ್ರೀ ಅಂಚನ್​
| Edited By: |

Updated on: Jan 05, 2024 | 2:40 PM

Share

ರೈಲ್ವೆ ಹಳಿಯನ್ನು ದಾಟುವಾಗ ಎಷ್ಟು ಎಚ್ಚರಿಕೆ ವಹಿಸಿದ್ರೂ ಕಮ್ಮೀನೆ, ಯಾಕೆಂದ್ರೆ ಕೆಲವೊಮ್ಮೆ ಅಲ್ಲೆಲ್ಲೋ ದೂರದಲ್ಲಿ ರೈಲು ಬರ್ತಿರೋದು ಅಲ್ವಾ, ಧಾರಾಳವಾಗಿ ಈಗ ರೈಲ್ವೆ ಹಳಿ ದಾಟಬಹುದು ಅಂತ ಭಾವಿಸಿ ರೈಲ್ವೆ ಹಳಿ ದಾಟುವಷ್ಟರಲ್ಲಿ, ರೈಲು ಅವರ ಮುಂದೆ ಪಾಸ್ ಆಗಿರುತ್ತೆ, ಇದೇ ರೀತಿ ತರಾತುರಿಯಲ್ಲಿ  ರೈಲು ವೇಗವಾಗಿ ಬರುತ್ತಿರುವ ವೇಳೆಯಲ್ಲಿ ರೈಲ್ವೇ ಹಳಿ ದಾಟಲು ಹೋಗಿ ಅದೆಷ್ಟೋ ಜನರು ಪ್ರಾಣವನ್ನು ಕಳೆದುಕೊಂಡಿದ್ದಾರೆ. ಅದೇ ರೀತಿ ಇಲ್ಲೊಬ್ಬ ವ್ಯಕ್ತಿ ವಂದೇ ಭಾರತ್ ಟ್ರೈನ್ ಬರುತ್ತಿರುವ ವೇಳೆಯಲ್ಲಿ ರಸ್ತೆ ದಾಟಲು ಹೋಗಿ, ಕೂದಲೆಳೆಯುವ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈ ಘಟನೆ ನಡೆದಿರುವುದು, ಕೇರಳದ ತಿರೂರ್ ಎಂಬಲ್ಲಿ. ತಿರೂರು ರೈಲ್ವೆ ಸ್ಟೇಷನ್​​ನಲ್ಲಿ ಮಧ್ಯ ವಯಸ್ಸಿನ  ವ್ಯಕ್ತಿಯೊಬ್ಬ್ರು ಸರಿಸುಮಾರು ಸಂಜೆ 5 ಗಂಟೆಯ ವೇಳೆಯಲ್ಲಿ, ರೈಲು ಬರುವಂತಹ ಸಂದರ್ಭದಲ್ಲಿ ರೈಲ್ವೆ ಹಳಿ ದಾಟುವಂತಹ ಸಾಹಸಕ್ಕೆ ಕೈ ಹಾಕಿದ್ದಾರೆ. ಈ ಘಟನೆಯ ಕುರಿತ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ.

ಪ್ರವೀಶ್ ಶೊರನೂರ್ (@praveeshshoranurphotography) ಎಂಬವರು ಈ ವಿಡಿಯೋನ್ನು ತಮ್ಮ  ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದು, ವಂದೇ ಭಾರತ್ ಟ್ರೈನ್ ಬರುತ್ತಿರುವ ವೇಳೆಯಲ್ಲಿ, ರೈಲ್ವೆ ಹಳಿ ದಾಟಲು ಹೋಗಿ ವ್ಯಕ್ತಿಯೊಬ್ಬರು ಕೂದಲೆಳೆಯುವ ಅಂತರದಲ್ಲಿ ಅಪಘಾತದಿಂದ ಪಾರಾಗುತ್ತಿರುವ ದೃಶ್ಯವನ್ನು ಕಾಣಬಹುದು.

ವೈರಲ್​​ ವಿಡಿಯೋ ಇಲ್ಲಿದೆ:

ವಿಡಿಯೋದಲ್ಲಿ  ತಿರೂರ್ ರೈಲ್ವೆ ಫ್ಲಾಟ್ಫಾರ್ಮ್ಗೆ ವಂದೇ ಭಾರತ್ ಟ್ರೈನ್ ವೇಗವಾಗಿ ಆಗಮಿಸುತ್ತಿರುತ್ತೆ, ಆ ಸಂದರ್ಭದಲ್ಲಿ ಮಧ್ಯವಯಸ್ಸಿನ ವ್ಯಕ್ತಿಯೊಬ್ಬರು ತರಾತುರಿಯಲ್ಲಿ ರೈಲ್ವೆ ಹಳಿಯನ್ನು ದಾಟಿದ್ದಾರೆ, ದೇವರ ದಯೆಯಿಂದ ಕೂದಲೆಳೆಯುವ ಅಂತರದಲ್ಲಿ ಪ್ರಾಣಾಪಾಯದಿಂದ ಆ ವ್ಯಕ್ತಿ ಪಾರಾಗುವ ದೃಶ್ಯವನನು ಕಾಣಬಹುದು.

ಇದನ್ನೂ ಓದಿ: ಕೆಲಸಗಾರರು ಬೇಕಾಗಿದ್ದಾರೆ; ಕಾಫಿ ಕೊಯ್ಲು ಮಾಡುವ ಕಾರ್ಮಿಕರಿಗೆ ಭರ್ಜರಿ ಆಫರ್ ನೀಡಿದ ಕೂಡಗಿನಲ್ಲಿ ಕಾಫಿ ಬೆಳೆಗಾರ

ನವೆಂಬರ್ 12 ರಂದು ಹಂಚಿಕೊಳ್ಳಲಾದ ಈ ವಿಡಿಯೋ  5.9 ಮಿಲಿಯನ್ ವೀಕ್ಷಣೆಗಳನ್ನು ಹಾಗೂ  ನಾಲ್ಕು ಲಕ್ಷಕ್ಕೂ ಅಧಿಕ ಲೈಕ್ಸ್ಗಳನ್ನು ಪಡೆದುಕೊಂಡಿದೆ. ಹಾಗೂ ಹಲವಾರು ಕಮೆಂಟ್ಸ್ಗಳೂ ಹರಿದು ಬಂದಿವೆ. ಅನೇಕರು ಆ ವ್ಯಕ್ತಿಗೆ ಅಷ್ಟು ಅರ್ಜೆಂಟ್ ಆಗಿ ರೈಲ್ವೆ ಹಳಿ ದಾಟುವಂತಹದ್ದು ಏನಿದೆ ಎಂದು ಪ್ರಶ್ನಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ