Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ವಂದೇ ಭಾರತ್ ಎಕ್ಸ್​​ಪ್ರೆಸ್​ ಟ್ರೈನ್ ಬರುವ ವೇಳೆ ಹಳಿ ದಾಟಿದ ವ್ಯಕ್ತಿ, ಮುಂದೆನಾಯ್ತು ನೋಡಿ? 

ರೈಲು ಇನ್ನೇನೂ ಬರುತ್ತಿದೆ ಎನ್ನುವ ಸಂದರ್ಭದಲ್ಲಿ  ಆ ಸ್ಥಳದಲ್ಲಿ ರೈಲ್ವೆ ಹಳಿಯನ್ನು ದಾಟುವುದು ದೊಡ್ಡ ಅಪಾಯ ಅಂತಾನೇ ಹೇಳ್ಬಹುದು. ಏಕೆಂದ್ರೆ ರೈಲು ತುಂಬಾನೇ ವೇಗವಾಗಿ ಬರುತ್ತಿರುತ್ತೆ,  ಹೀಗೆ ರೈಲು ಅಲ್ಲೆಲ್ಲೋ ದೂರದಲ್ಲಿ ಬರುತ್ತಿರೋದಲ್ವಾ, ಆ ಕಡೆ ದಾಟಿದ್ರೆ ಏನು ಆಗಲ್ಲ ಅಂತ ಹೇಳಿ, ರೈಲು ಬರುವ ಸಂದರ್ಭದಲ್ಲಿ ರೈಲ್ವೆ ಹಳಿಯನ್ನು ದಾಟಲು ಹೋಗಿ ಅದೆಷ್ಟೋ ಜನರು ಪ್ರಾಣವನ್ನು ಕಳೆದುಕೊಂಡಿದ್ದಾರೆ. ಅದೇ ರೀತಿ ಇಲ್ಲೊಬ್ರು  ವ್ಯಕ್ತಿ ವಂದೇ ಭಾರತ್ ಟ್ರೈನ್ ವೇಗವಾಗಿ ಬರುತ್ತಿರುವ  ಸಂದರ್ಭದಲ್ಲಿ  ಭಂಡ ಧೈರ್ಯದಿಂದ ರೈಲ್ವೆ ಹಳಿ ದಾಟಲು ಹೋಗಿ, ಕೂದಲೆಳೆಯುವ ಅಂತರದಲ್ಲಿ  ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Viral Video: ವಂದೇ ಭಾರತ್ ಎಕ್ಸ್​​ಪ್ರೆಸ್​ ಟ್ರೈನ್ ಬರುವ ವೇಳೆ ಹಳಿ ದಾಟಿದ ವ್ಯಕ್ತಿ, ಮುಂದೆನಾಯ್ತು ನೋಡಿ? 
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Jan 05, 2024 | 2:40 PM

ರೈಲ್ವೆ ಹಳಿಯನ್ನು ದಾಟುವಾಗ ಎಷ್ಟು ಎಚ್ಚರಿಕೆ ವಹಿಸಿದ್ರೂ ಕಮ್ಮೀನೆ, ಯಾಕೆಂದ್ರೆ ಕೆಲವೊಮ್ಮೆ ಅಲ್ಲೆಲ್ಲೋ ದೂರದಲ್ಲಿ ರೈಲು ಬರ್ತಿರೋದು ಅಲ್ವಾ, ಧಾರಾಳವಾಗಿ ಈಗ ರೈಲ್ವೆ ಹಳಿ ದಾಟಬಹುದು ಅಂತ ಭಾವಿಸಿ ರೈಲ್ವೆ ಹಳಿ ದಾಟುವಷ್ಟರಲ್ಲಿ, ರೈಲು ಅವರ ಮುಂದೆ ಪಾಸ್ ಆಗಿರುತ್ತೆ, ಇದೇ ರೀತಿ ತರಾತುರಿಯಲ್ಲಿ  ರೈಲು ವೇಗವಾಗಿ ಬರುತ್ತಿರುವ ವೇಳೆಯಲ್ಲಿ ರೈಲ್ವೇ ಹಳಿ ದಾಟಲು ಹೋಗಿ ಅದೆಷ್ಟೋ ಜನರು ಪ್ರಾಣವನ್ನು ಕಳೆದುಕೊಂಡಿದ್ದಾರೆ. ಅದೇ ರೀತಿ ಇಲ್ಲೊಬ್ಬ ವ್ಯಕ್ತಿ ವಂದೇ ಭಾರತ್ ಟ್ರೈನ್ ಬರುತ್ತಿರುವ ವೇಳೆಯಲ್ಲಿ ರಸ್ತೆ ದಾಟಲು ಹೋಗಿ, ಕೂದಲೆಳೆಯುವ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈ ಘಟನೆ ನಡೆದಿರುವುದು, ಕೇರಳದ ತಿರೂರ್ ಎಂಬಲ್ಲಿ. ತಿರೂರು ರೈಲ್ವೆ ಸ್ಟೇಷನ್​​ನಲ್ಲಿ ಮಧ್ಯ ವಯಸ್ಸಿನ  ವ್ಯಕ್ತಿಯೊಬ್ಬ್ರು ಸರಿಸುಮಾರು ಸಂಜೆ 5 ಗಂಟೆಯ ವೇಳೆಯಲ್ಲಿ, ರೈಲು ಬರುವಂತಹ ಸಂದರ್ಭದಲ್ಲಿ ರೈಲ್ವೆ ಹಳಿ ದಾಟುವಂತಹ ಸಾಹಸಕ್ಕೆ ಕೈ ಹಾಕಿದ್ದಾರೆ. ಈ ಘಟನೆಯ ಕುರಿತ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ.

ಪ್ರವೀಶ್ ಶೊರನೂರ್ (@praveeshshoranurphotography) ಎಂಬವರು ಈ ವಿಡಿಯೋನ್ನು ತಮ್ಮ  ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದು, ವಂದೇ ಭಾರತ್ ಟ್ರೈನ್ ಬರುತ್ತಿರುವ ವೇಳೆಯಲ್ಲಿ, ರೈಲ್ವೆ ಹಳಿ ದಾಟಲು ಹೋಗಿ ವ್ಯಕ್ತಿಯೊಬ್ಬರು ಕೂದಲೆಳೆಯುವ ಅಂತರದಲ್ಲಿ ಅಪಘಾತದಿಂದ ಪಾರಾಗುತ್ತಿರುವ ದೃಶ್ಯವನ್ನು ಕಾಣಬಹುದು.

ವೈರಲ್​​ ವಿಡಿಯೋ ಇಲ್ಲಿದೆ:

ವಿಡಿಯೋದಲ್ಲಿ  ತಿರೂರ್ ರೈಲ್ವೆ ಫ್ಲಾಟ್ಫಾರ್ಮ್ಗೆ ವಂದೇ ಭಾರತ್ ಟ್ರೈನ್ ವೇಗವಾಗಿ ಆಗಮಿಸುತ್ತಿರುತ್ತೆ, ಆ ಸಂದರ್ಭದಲ್ಲಿ ಮಧ್ಯವಯಸ್ಸಿನ ವ್ಯಕ್ತಿಯೊಬ್ಬರು ತರಾತುರಿಯಲ್ಲಿ ರೈಲ್ವೆ ಹಳಿಯನ್ನು ದಾಟಿದ್ದಾರೆ, ದೇವರ ದಯೆಯಿಂದ ಕೂದಲೆಳೆಯುವ ಅಂತರದಲ್ಲಿ ಪ್ರಾಣಾಪಾಯದಿಂದ ಆ ವ್ಯಕ್ತಿ ಪಾರಾಗುವ ದೃಶ್ಯವನನು ಕಾಣಬಹುದು.

ಇದನ್ನೂ ಓದಿ: ಕೆಲಸಗಾರರು ಬೇಕಾಗಿದ್ದಾರೆ; ಕಾಫಿ ಕೊಯ್ಲು ಮಾಡುವ ಕಾರ್ಮಿಕರಿಗೆ ಭರ್ಜರಿ ಆಫರ್ ನೀಡಿದ ಕೂಡಗಿನಲ್ಲಿ ಕಾಫಿ ಬೆಳೆಗಾರ

ನವೆಂಬರ್ 12 ರಂದು ಹಂಚಿಕೊಳ್ಳಲಾದ ಈ ವಿಡಿಯೋ  5.9 ಮಿಲಿಯನ್ ವೀಕ್ಷಣೆಗಳನ್ನು ಹಾಗೂ  ನಾಲ್ಕು ಲಕ್ಷಕ್ಕೂ ಅಧಿಕ ಲೈಕ್ಸ್ಗಳನ್ನು ಪಡೆದುಕೊಂಡಿದೆ. ಹಾಗೂ ಹಲವಾರು ಕಮೆಂಟ್ಸ್ಗಳೂ ಹರಿದು ಬಂದಿವೆ. ಅನೇಕರು ಆ ವ್ಯಕ್ತಿಗೆ ಅಷ್ಟು ಅರ್ಜೆಂಟ್ ಆಗಿ ರೈಲ್ವೆ ಹಳಿ ದಾಟುವಂತಹದ್ದು ಏನಿದೆ ಎಂದು ಪ್ರಶ್ನಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ