AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಜೀವನಕ್ಕಾಗಿ ಆಟೋನೇ ಆಧಾರ; ಇದು ದೈಹಿಕ ನ್ಯೂನತೆ ಮೆಟ್ಟಿನಿಂತ ವ್ಯಕ್ತಿಯ ಕಥೆ

ಎಲ್ಲಾ ಸರಿಯಿದ್ದು ದುಡಿದು ತಿನ್ನದವರ ನಡುವೆ ದೈಹಿಕ ನ್ಯೂನತೆಯನ್ನು ಬದಿಗಿಟ್ಟು, ಕಷ್ಟ ಪಟ್ಟು ದುಡಿಯುವ ಈ ವ್ಯಕ್ತಿಗಳು ಎಲ್ಲರಿಗೂ ಮಾದರಿ. ಹೌದು, ದೈಹಿಕವಾಗಿ ಎಲ್ಲರಂತೆ ಇರದಿದ್ದರೂ ಆಟೋ ಓಡಿಸಿ ಜೀವನ ನಡೆಸುತ್ತಿರುವ ವ್ಯಕ್ತಿಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವ್ಯಕ್ತಿಯ ಛಲವನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ.

Video: ಜೀವನಕ್ಕಾಗಿ ಆಟೋನೇ ಆಧಾರ; ಇದು ದೈಹಿಕ ನ್ಯೂನತೆ ಮೆಟ್ಟಿನಿಂತ ವ್ಯಕ್ತಿಯ ಕಥೆ
ಆಟೋ ಚಾಲಕ ಪ್ರಕಾಶ್Image Credit source: Instagram
ಸಾಯಿನಂದಾ
|

Updated on: Dec 11, 2025 | 1:14 PM

Share

ಬದುಕು (life) ಹೊಡೆತಗಳ ಮೇಲೆ ಹೊಡೆತಗಳನ್ನು ನೀಡಬಲ್ಲದು. ಎದ್ದು ನಿಲ್ಲದಂತೆ ಮಾಡಿ ಬಿಡಬಹುದು. ಆದರೆ ಇದೆಲ್ಲದರ ನಡುವೆ ತಮ್ಮ ಬದುಕನ್ನು ತಾವೇ ಕಟ್ಟಿಕೊಳ್ಳುವುದಕ್ಕೂ ಧೈರ್ಯ ಬೇಕು. ಇದಕ್ಕೆ ಉದಾಹರಣೆಯಂತಿದ್ದಾರೆ ಈ ವ್ಯಕ್ತಿ. ತನ್ನ ಎರಡು ಕಾಲುಗಳು ಸ್ವಾಧೀನ ಕಳೆದುಕೊಂಡು ದೈಹಿಕ ನ್ಯೂನತೆಯನ್ನು ಎದುರಿಸುತ್ತಿರುವ ಈ ವ್ಯಕ್ತಿಯ ಹೆಸರು ಪ್ರಕಾಶ್ (Prakash). ಆದರೆ ತನ್ನೆಲ್ಲಾ ನ್ಯೂನತೆಯನ್ನು ಬದಿಗಿಟ್ಟು ಜೀವನಕ್ಕಾಗಿ ಅವಲಂಬಿಸಿಕೊಂಡಿದ್ದು ಆಟೋ ಓಡಿಸುವ ಕಾಯಕ. ಕಾಯಕದಲ್ಲಿ ಶ್ರದ್ಧೆ, ನಗುವಿನಿಂದಲೇ ಎಲ್ಲವನ್ನು ಗೆಲ್ಲುವ ಛಲ ಹೊಂದಿರುವ ಈ ಆಟೋ ಚಾಲಕನ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಕಲಾವತಿ ಬಸವರಾಜ್(Kalavati basavaraj) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ದೈಹಿಕ ನ್ಯೂನತೆಯನ್ನು ಮೆಟ್ಟಿ ನಿಂತು ಜೀವನ ನಿರ್ವಹಣೆಗಾಗಿ ಆಟೋ ಓಡಿಸುತ್ತಿರುವ ವ್ಯಕ್ತಿಯನ್ನು ಕಾಣಬಹುದು. ಈ ವ್ಯಕ್ತಿಯ ಆತ್ಮವಿಶ್ವಾಸ, ಮುಖದಲ್ಲಿನ ನಗುವು ಬದುಕಿನಲ್ಲಿ ಗೆದ್ದೇ ಗೆಲ್ಲುವೆ ಎನ್ನುವುದನ್ನು ಸಾರಿ ಹೇಳುವಂತಿದೆ.

ವೈರಲ್ ವಿಡಿಯೋ ಇಲ್ಲಿದೆ ನೋಡಿ

ಇದನ್ನೂ ಓದಿ:ಅಜ್ಜಿಯ ಸಣ್ಣ ವ್ಯಾಪಾರಕ್ಕೆ ನೆರವಾಗಿ ಮೊಗದಲ್ಲಿ ನಗು ಮೂಡಿಸಿದ ಯುವಕ

ಈ ವಿಡಿಯೋ ಐವತ್ತು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ನಿಮಗೆ ನಮ್ಮದೊಂದು ಸಲಾಂ ಎಂದಿದ್ದಾರೆ. ಮತ್ತೊಬ್ಬರು, ದೇವರು ಒಳ್ಳೇದು ಮಾಡಲಿ ಎಂದು ಹೇಳಿದ್ದಾರೆ. ಇನ್ನೊಬ್ಬರು, ಯುವಪೀಳಿಗೆಗೆ ಮಾದರಿ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ