AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಇದು ಕಾರ್ಪೋರೆಟ್ ಜಗತ್ತು; ಟ್ರಾಫಿಕ್ ಜಾಮ್‌ ನಡುವೆಯೇ ಬೈಕ್‌ನಲ್ಲಿ ಲ್ಯಾಪ್ ಟಾಪ್ ತೆರೆದು ಕೆಲಸ ಮಾಡಿದ ವ್ಯಕ್ತಿ

ದುಡಿಯೋದು ಅನಿವಾರ್ಯ, ಹೀಗಾಗಿ ಕೆಲವರು ಹಗಲು ರಾತ್ರಿ ಎನ್ನದೇ ದುಡಿಯುತ್ತಾರೆ. ಈ ಕಾರ್ಪೋರೇಟ್ ಜಗತ್ತಿನಲ್ಲಿ ಒತ್ತಡ ಹೆಚ್ಚು. ಇಲ್ಲೊಬ್ಬ ಉದ್ಯೋಗಿಯದ್ದು ಅದೇ ಕಥೆ. ಟ್ರಾಫಿಕ್ ನಲ್ಲಿ ಸಿಲುಕಿಕೊಂಡ ವ್ಯಕ್ತಿಯೊಬ್ಬ ತನ್ನ ಬೈಕ್ ಮೇಲೆ ಲ್ಯಾಪ್ ಟಾಪ್ ಹಿಡಿದು ಕೆಲಸ ಮಾಡಲು ಶುರು ಮಾಡಿದ್ದಾನೆ. ಇದು ಭಾರತೀಯ ಕೆಲಸದ ಸಂಸ್ಕೃತಿಯ ಕುರಿತು ವ್ಯಾಪಕ ಚರ್ಚೆಗೆ ಕಾರಣವಾಗಿದೆ.

Video:  ಇದು ಕಾರ್ಪೋರೆಟ್ ಜಗತ್ತು; ಟ್ರಾಫಿಕ್ ಜಾಮ್‌ ನಡುವೆಯೇ ಬೈಕ್‌ನಲ್ಲಿ ಲ್ಯಾಪ್ ಟಾಪ್ ತೆರೆದು ಕೆಲಸ ಮಾಡಿದ ವ್ಯಕ್ತಿ
ವೈರಲ್‌ ಪೋಸ್ಟ್‌Image Credit source: Twitter
ಸಾಯಿನಂದಾ
|

Updated on: Jul 23, 2026 | 11:00 AM

Share

ಕಾರ್ಪೊರೇಟ್ (Corporate) ಜಗತ್ತೇ ಹಾಗೆ, ಕೈ ತುಂಬಾ ಸಂಬಳ ಸಿಕ್ಕಿದ್ರು ಒತ್ತಡ ಮಾತ್ರ ಹೆಚ್ಚೇ ಆಗುತ್ತದೆ ಹೊರತು ಕಡಿಮೆಯಾಗಲ್ಲ. ಈ ಉದ್ಯೋಗಿಯದ್ದು ಅದೇ ಪಾಡಾಗಿದೆ. ಹೌದು, ಟ್ರಾಫಿಕ್‌ನಲ್ಲಿ ಸಿಲುಕಿಕೊಂಡ ವ್ಯಕ್ತಿಯೊಬ್ಬ ಬೈಕ್‌ನಲ್ಲಿ ತನ್ನ ಲ್ಯಾಪ್ ಟಾಪ್ ತೆರೆದು ಕುಳಿತು ಕೆಲಸ ಮಾಡುವ ಮೂಲಕ ಎಲ್ಲರನ್ನೂ ಅಚ್ಚರಿಗೊಳಿಸಿದ್ದಾನೆ. ಈ ವಿಡಿಯೋ ಈ ವ್ಯಕ್ತಿಗೆ ಕೆಲಸದ ಒತ್ತಡ ಎಷ್ಟಿದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ. ಈ ಕ್ಲಿಪಿಂಗ್ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಕಾರ್ಪೊರೇಟ್ ಕೆಲಸದ ಸಂಸ್ಕೃತಿಯನ್ನು ಟೀಕಿಸಿದ್ದಾರೆ.

ಸಾಫ್ಫ್ರೆಂನ್ ಚಾರ್ಜರ್ಸ್ (Saffron Chargers) ಹೆಸರಿನ ಎಕ್ಸ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್‌ಗೆ ಸಿಗ್ನಲ್ ನಲ್ಲಿ 5 ನಿಮಿಷಗಳ ಟ್ರಾಫಿಕ್ ಜಾಮ್. ಆದರೆ ಈ ವ್ಯಕ್ತಿ ಬೈಕ್ ಮೇಲೆ ಕುಳಿತು, ತನ್ನ ಲ್ಯಾಪ್‌ಟಾಪ್ ತೆಗೆದು ಕೆಲಸ ಮಾಡಲು ಪ್ರಾರಂಭಿಸಿದ್ದಾನೆ. 8 ಗಂಟೆಗಳ ಕೆಲಸದ ಬಳಿಕವು ಅವನು ಮನೆಗೆ ಹೋಗುವ ದಾರಿಯಲ್ಲಿ ಕೆಲಸ ಮಾಡಬೇಕಾಗಿದೆ. ಮನೆ ತಲುಪಿದ ಬಳಿಕ ಈ ಕೆಲಸವು ಮುಂದುವರೆಯುತ್ತದೆ. ಭಾರತದಲ್ಲಿ ಜನರು ನಿಧಾನವಾಗಿ ಯಂತ್ರಗಳಾಗಿ ಬದಲಾಗಿದ್ದಾರೆ ಎಂದು ಶೀರ್ಷಿಕೆ ನೀಡಲಾಗಿದೆ.

ವೈರಲ್‌ ಪೋಸ್ಟ್‌ ಇಲ್ಲಿದೆ

ಈ ವಿಡಿಯೋದಲ್ಲಿ ವ್ಯಕ್ತಿಯೊಬ್ಬ 5 ನಿಮಿಷದ ಸಿಗ್ನಲ್ ನನ್ನು ಬಳಸಿಕೊಂಡಿದ್ದಾನೆ. ವ್ಯಕ್ತಿಯೊಬ್ಬ ಟ್ರಾಫಿಕ್ ಜಾಮ್ ನಡುವೆ ಬೈಕ್ ಮೇಲೆ ತನ್ನ ಲ್ಯಾಪ್ ಟಾಪ್ ತೆರೆದು ಕೆಲಸ ಮಾಡಲು ಕುಳಿತುಕೊಂಡಿರುವ ದೃಶ್ಯ ಕಾಣಬಹುದು.

ಇದನ್ನೂ ಓದಿ: ಓವರ್ ಟೈಮ್ ಡ್ಯೂಟಿ ಮಾಡಿದ್ರೂ ಸಂಬಳ ಹೆಚ್ಚು ಕೊಡಲ್ಲ; ಮ್ಯಾನೇಜರ್ ವರ್ತನೆಗೆ ಬೇಸತ್ತು ಜಾಬ್ ರಿಸೈನ್ ಮಾಡಿದ ಉದ್ಯೋಗಿ

ಈ ವಿಡಿಯೋ ಐದು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ತಂತ್ರಜ್ಞಾನ ಅವಕಾಶಗಳನ್ನು ಸೃಷ್ಟಿಸುತ್ತಿದೆ, ಆದರೆ ವೈಯುಕ್ತಿಕ ಸಮಯವನ್ನು ಕಸಿದುಕೊಳ್ಳುತ್ತಿದೆ ಎಂದಿದ್ದಾರೆ. ಇನ್ನೊಬ್ಬರು, ನನ್ನ ಪರಿಸ್ಥಿತಿ ಕೂಡ ಹೀಗೆಯೇ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಕಾರ್ಪೊರೇಟ್ ಜಗತ್ತು ಉದ್ಯೋಗಿಗಳನ್ನು ಶೋಷಿಸುತ್ತಿದೆ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್