AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಚಲಿಸುತ್ತಿರುವ ರೈಲಿನಿಂದ ಸ್ಪೈಡರ್​ಮ್ಯಾನ್ ಶೈಲಿಯಲ್ಲಿ ಮೊಬೈಲ್ ಕದ್ದ ಖದೀಮ

ಚಲಿಸುತ್ತಿರುವ ರೈಲಿನಲ್ಲಿ ಕಳ್ಳನೊಬ್ಬ ಸೇತುವೆಯ ಮೇಲೆ ಸ್ಪೈಡರ್​ಮ್ಯಾನ್ ರೀತಿ ನಿಂತುಕೊಂಡು ಪ್ರಯಾಣಿಕರ ಕೈಯಿಂದ ಮೊಬೈಲ್ ಕಸಿದುಕೊಂಡ ಘಟನೆಯೊಂದು ನಡೆದಿದೆ. ಇದರ ವಿಡಿಯೋ ವೈರಲ್ ಆಗಿದ್ದು, ಕಳ್ಳನನ್ನು ಸ್ಪೈಡರ್​ಮ್ಯಾನ್​ಗೆ ಹೋಲಿಸಲಾಗಿದೆ.

Viral Video: ಚಲಿಸುತ್ತಿರುವ ರೈಲಿನಿಂದ ಸ್ಪೈಡರ್​ಮ್ಯಾನ್ ಶೈಲಿಯಲ್ಲಿ ಮೊಬೈಲ್ ಕದ್ದ ಖದೀಮ
ಮೊಬೈಲ್ ಕಳ್ಳತನ
TV9 Web
| Updated By: Rakesh Nayak Manchi|

Updated on:Jun 10, 2022 | 9:29 AM

Share

ಈ ಪ್ರಪಂಚದಲ್ಲಿ ಎಂತೆಂಥ ಕತರ್ನಾಕ್ ಕಳ್ಳರಿದ್ದಾರೆ ಎಂದರೆ ಪೊಲೀಸರೂ ಊಹಿಸಲಾಗದಂಥ ಶೈಲಿಯಲ್ಲಿ ಕಳ್ಳತನ ಮಾಡುತ್ತಾರೆ. ಅದರಂತೆ ಚಲಿಸುತ್ತಿರುವ ರೈಲಿನಲ್ಲಿ ಕಳ್ಳನೊಬ್ಬ ಸೇತುವೆಯ ಮೇಲೆ ಸ್ಪೈಡರ್​ಮ್ಯಾನ್ ರೀತಿ ನಿಂತುಕೊಂಡು ಪ್ರಯಾಣಿಕರ ಕೈಯಿಂದ ಮೊಬೈಲ್ ಕಸಿದುಕೊಂಡ (Mobile snatch) ಘಟನೆಯೊಂದು ನಡೆದಿದೆ. ಇದರ ವಿಡಿಯೋ ಸೆರೆಹಿಡಿಯಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ (Video Viral) ಆಗುತ್ತಿದೆ. ಅಷ್ಟೇ ಅಲ್ಲದೆ ಈ ಹಗಲು ದರೋಡೆಕೋರನನ್ನು ಸ್ಪೈಡರ್ ಮ್ಯಾನ್‌ಗೆ ಹೋಲಿಸಲಾಗಿದೆ.

ಇದನ್ನೂ ಓದಿ: Viral Video : ಕ್ಲಿನಿಕ್ ಹೊಕ್ಕ ತಾಯಿಕೋತಿ, ಚಿಕಿತ್ಸೆ ನೀಡಿದ ಡಾ. ಅಹಮ್ಮದ್

ಆನ್‌ಲೈನ್‌ನಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ, ಬಿಹಾರದ ನದಿಯ ಮೇಲಿನ ಸೇತುವೆಯ ಮೇಲೆ ಇಬ್ಬರು ರೈಲಿನಲ್ಲಿ ಚಲಿಸುತ್ತಿರುವುದನ್ನು ಕಾಣಬಹುದು. ಈ ವೇಳೆ ಪ್ರಯಾಣಿಕರು ನದಿಯ ವಿಡಿಯೋ ಚಿತ್ರೀಕರಿಸಲು ಮುಂದಾಗಿದ್ದಾರೆ. ಹೀಗೇ ಮುಂದಕ್ಕೆ ರೈಲು ಚಲಿಸುತ್ತಿದ್ದಂತೆ ಸೇತುವೆ ಕಂಬವನ್ನು ಹಿಡಿದು ನೇತಾಡಿಕೊಂಡಿದ್ದ ಖದೀಮ ವಿಡಿಯೋ ಚಿತ್ರೀಕರಿಸುತ್ತಿದ್ದ ಮೊಬೈಲ್​ ಅನ್ನು ಕಸಿದುಕೊಂಡಿದ್ದಾನೆ. ಕಳ್ಳನ ಕೈಚಳಕಕ್ಕೆ ಪ್ರಯಾಣಿಕರು ಕಣ್ಣು ಮಿಟುಕಿಸುವಂತೆ ಮಾಡಿದೆ.

ವಿಡಿಯೋ ವೀಕ್ಷಿಸಿ:

ಮೊಬೈಲ್ ಕಳೆದುಕೊಂಡವನನ್ನು ಮೊಹಮ್ಮದ್ ಸಮೀರ್ ಎಂದು ಇಂಡಿಯಾ ಟಿವಿ ನ್ಯೂಸ್ ಗುರುತಿಸಿದೆ. ಜೂನ್ 4 ರಂದು ನಡೆದ ಕಳ್ಳತನಕ್ಕೆ ಸಂಬಂಧಿಸಿದಂತೆ ಸಮೀರ್ ಪೊಲೀಸರಿಗೆ ದೂರು ನೀಡಿದ್ದಾರೆ. ಕತಿಹಾರ್-ಬರೌನಿ ರೈಲು ಮಾರ್ಗದಲ್ಲಿ ಇದೇ ರೀತಿಯ ದರೋಡೆಗಳ ಸರಣಿಯನ್ನು ‘ಝಪ್ತಾ ಗ್ಯಾಂಗ್’ ಎಂದು ಪೊಲೀಸರು ವರದಿ ಮಾಡಿದ್ದಾರೆ.

ಇದನ್ನೂ ಓದಿ: Viral Video: ಬೋರ್​ವೆಲ್​ಗೆ ಬಿದ್ದ 18 ತಿಂಗಳ ಮಗುವನ್ನು ಕಾಪಾಡಿದ ಸೈನಿಕರು; ವಿಡಿಯೋ ವೈರಲ್

ಗ್ಯಾಂಗ್‌ನ ಕೈಚಳಕದ ಬಗ್ಗೆ ಇಂಡಿಯಾ ಟಿವಿ ನ್ಯೂಸ್‌ ಜೊತೆ ಮಾತನಾಡಿದ ಕತಿಹಾರ್ ರೈಲ್ವೆ ಎಸ್‌ಪಿ ಡಾ.ಸಂಜಯ್ ಭಾರ್ತಿ, “ಯಾರಾದರು ಮೊಬೈಲ್​ನಲ್ಲಿ ಮಾತನಾಡುತ್ತಿದ್ದರೆ ಕಳ್ಳರು ದೊಣ್ಣೆಯಿಂದ ಹೊಡೆದು ಮೊಬೈಲ್ ಅನ್ನು ಬೀಳಿಸುತ್ತಾರೆ. ನಂತರ ಅದನ್ನು ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು. ಅಲ್ಲದೆ ಆ ಪ್ರದೇಶದಲ್ಲಿ ಈಗಾಗಲೇ ಪೊಲೀಸರು ಬೀಡುಬಿಟ್ಟಿದ್ದಾರೆ. ಇಂತಹ ಪ್ರಕರಣಗಳಲ್ಲಿ ಅನೇಕರು ಜೈಲಿಗೆ ಹೋಗಿದ್ದಾರೆ. ಈ ವಿಚಾರದಲ್ಲಿ ಹೆಚ್ಚಿನ ಜನರನ್ನು ಗುರುತಿಸಲಾಗುತ್ತಿದ್ದು, ಕ್ರಮ ಕೈಗೊಳ್ಳಲಾಗುವುದು” ಎಂದಿದ್ದಾರೆ.

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:29 am, Fri, 10 June 22

ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ