AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಎದ್ದು ನಿಲ್ಲಲು ಕಷ್ಟ ಪಡುತ್ತಿದ್ದ ಮರಿಯಾನೆಗೆ ಸಾಥ್ ನೀಡಿದ ತಾಯಾನೆ

ಮನುಷ್ಯರೇ ಇರಲಿ, ಪ್ರಾಣಿಗಳೇ ಇರಲಿ, ತಾಯಿ ಪ್ರೀತಿ ಮಾತ್ರ ಬದಲಾಗಲ್ಲ. ಇದಕ್ಕೆ ಸಾಕ್ಷಿಯಾಗಿದೆ ಈ ದೃಶ್ಯ. ಮರಿಯಾನೆಯೊಂದು ಎದ್ದು ನಿಲ್ಲಲು ಕಷ್ಟ ಪಡುತ್ತಿದ್ದ ತಾಯಾನೆಯೊಂದು ಬೀಳದಂತೆ ತಡೆದಿದೆ. ಈ ಹೃದಯಸ್ಪರ್ಶಿ ವಿಡಿಯೋ ವೈರಲ್ ಆಗಿದ್ದು ನೆಟ್ಟಿಗರ ಹೃದಯ ಗೆದ್ದಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಎದ್ದು ನಿಲ್ಲಲು ಕಷ್ಟ ಪಡುತ್ತಿದ್ದ ಮರಿಯಾನೆಗೆ ಸಾಥ್ ನೀಡಿದ ತಾಯಾನೆ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on:Sep 18, 2026 | 5:48 PM

Share

ತಾಯಿ ಪ್ರೀತಿ (mother love) ಎಂದು ಬಂದಾಗ ಪ್ರಾಣಿಗಳು ಕೂಡ ತನ್ನ ಕಂದಮ್ಮಗಳ ಮೇಲೆ ಕಾಳಜಿ ವಹಿಸುತ್ತವೆ, ರಕ್ಷಣೆಗೆ ನಿಲ್ಲುತ್ತವೆ. ಇದೀಗ ಎದ್ದು ನಿಲ್ಲಲು ಕಷ್ಟ ಪಡುತ್ತಿದ್ದ ಮರಿಯಾನೆಗೆ ತಾಯಾನೆ ಆಸರೆಯಾಗಿ ನಿಂತಿದೆ. ಹೌದು, ತನ್ನ ಸೊಂಡಿಲನ್ನು ಬಳಸಿ ತನ್ನ ಕಂದಮ್ಮ ಬೀಳದಂತೆ ಜೋಪಾನವಾಗಿ ಹಿಡಿದುಕೊಂಡಿದೆ. ತಾಯಿ ಪ್ರೀತಿ ಕಾಳಜಿ ಸಾರುವ ಈ ವಿಡಿಯೋ ನೆಟ್ಟಿಗರ ಹೃದಯ ಗೆದ್ದಿದೆ.

ಎದ್ದು ನಿಲ್ಲಲು ಕಷ್ಟ ಪಡುತ್ತಿದ್ದ ಕಂದಮ್ಮನಿಗೆ ತಾಯಾನೆಯ ಸಾಥ್

ಫ್ಯೂಚರ್ ಫಾರ್ ಎಲಿಫೆಂಟ್ಸ್ (Future for elephants) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶುದ್ಧ ಪ್ರೀತಿಯನ್ನು ಸಾರುವ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್‌ನಲ್ಲಿ ಪುಟಾಣಿ ಆನೆಯೊಂದು ನಿಧಾನವಾಗಿ ಎದ್ದು ನಿಲ್ಲಲು ಪ್ರಯತ್ನಿಸಿದೆ. ಇದೇ ವೇಳೆ ತಾಯಾನೆ ತನ್ನ ಕಂದಮ್ಮ ಬೀಳದಂತೆ ಸೊಂಡಿಲಿನಿಂದ ಹಿಡಿದುಕೊಂಡಿರುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಸೊಂಡಿಲನ್ನು ಗಿರಗಿರನೆ ತಿರುಗಿಸಿದ ಮರಿಯಾನೆ, ವೈರಲ್‌ ಆಯ್ತು ದೃಶ್ಯ

ಈ ವಿಡಿಯೋ ಇದುವರೆಗೆ 2.4 ಮಿಲಿಯನ್ ಗೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ತನ್ನ ತಾಯಿಯ ಸಹಾಯದಿಂದ ಎದ್ದು ನಿಲ್ಲುವ ಕಂದಮ್ಮನದ್ದು ಎಂತಹ ಸಾಧನೆ ಎಂದಿದ್ದಾರೆ. ಇನ್ನೊಬ್ಬರು, ಕಂದಮ್ಮನಿಗೆ ತಾಯಿಯ ಪ್ರೀತಿ ಆರೈಕೆ ಬೇಕು ಎಂದು ಹೇಳಿದ್ದಾರೆ. ಮತ್ತೊಬ್ಬರು, ಅಮ್ಮನಿಗೆ ಏನು ಮಾಡ್ಬೇಕು ಅನ್ನೋದು ಗೊತ್ತು ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:46 pm, Fri, 18 September 26

Follow Us
ತುಳು ರಾಜ್ಯದ 2ನೇ ಭಾಷೆ:ಮಂಗಳೂರಿನಲ್ಲಿ ಮುಗಿಲು ಮುಟ್ಟಿದ ಸಂಭ್ರಮ
ತುಳು ರಾಜ್ಯದ 2ನೇ ಭಾಷೆ:ಮಂಗಳೂರಿನಲ್ಲಿ ಮುಗಿಲು ಮುಟ್ಟಿದ ಸಂಭ್ರಮ
ಉಪೇಂದ್ರ ಹುಟ್ಟುಹಬ್ಬದ ಸಂಭ್ರಮ; ಹೊಸ ಸಿನಿಮಾ ಪೋಸ್ಟರ್ ಬಿಡುಗಡೆ
ಉಪೇಂದ್ರ ಹುಟ್ಟುಹಬ್ಬದ ಸಂಭ್ರಮ; ಹೊಸ ಸಿನಿಮಾ ಪೋಸ್ಟರ್ ಬಿಡುಗಡೆ
ಸಚಿವ ಸಂಪುಟ ಸಭೆ ಅಂತ್ಯ: ಸಿಎಂ ಡಿಕೆ ಶಿವಕುಮಾರ್ ಸುದ್ದಿಗೋಷ್ಠಿ ನೇರಪ್ರಸಾರ
ಸಚಿವ ಸಂಪುಟ ಸಭೆ ಅಂತ್ಯ: ಸಿಎಂ ಡಿಕೆ ಶಿವಕುಮಾರ್ ಸುದ್ದಿಗೋಷ್ಠಿ ನೇರಪ್ರಸಾರ
ಮೋಸ ಮಾಡಿ ರೆಡ್ ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಗಗನ್ ಚಿನ್ನಪ್ಪ
ಮೋಸ ಮಾಡಿ ರೆಡ್ ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಗಗನ್ ಚಿನ್ನಪ್ಪ
ಲೂಟಿ ಹಣದಲ್ಲಿ ಗೆಳತಿಗ ಲಕ್ಷಾಂತರ ರೂ. ಚಿನ್ನಾಭರಣ ಕೊಡಿಸಿದ್ದ ಜ್ಞಾನೇಂದ್ರ!
ಲೂಟಿ ಹಣದಲ್ಲಿ ಗೆಳತಿಗ ಲಕ್ಷಾಂತರ ರೂ. ಚಿನ್ನಾಭರಣ ಕೊಡಿಸಿದ್ದ ಜ್ಞಾನೇಂದ್ರ!
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್​ವೇ ಫ್ಲೈಓವರ್‌‌ನಿಂದ ಕೆಳಗೆ ಬಿದ್ದ ಕಾರು
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್​ವೇ ಫ್ಲೈಓವರ್‌‌ನಿಂದ ಕೆಳಗೆ ಬಿದ್ದ ಕಾರು
ಪ್ರತಿ ಲೀಟರ್‌ ಹಾಲಿನ ದರ ₹8 ಹೆಚ್ಚಳಕ್ಕೆ ಹಾಲು ಒಕ್ಕೂಟಗಳ ಆಗ್ರಹ
ಪ್ರತಿ ಲೀಟರ್‌ ಹಾಲಿನ ದರ ₹8 ಹೆಚ್ಚಳಕ್ಕೆ ಹಾಲು ಒಕ್ಕೂಟಗಳ ಆಗ್ರಹ
ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ
ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ
ಟಿ ನರಸೀಪುರದಲ್ಲಿ ಬಿಗಿ ಭದ್ರತೆ: 600ಕ್ಕೂ ಹೆಚ್ಚು ಪೊಲೀಸರ ನಿಯೋಜನೆ
ಟಿ ನರಸೀಪುರದಲ್ಲಿ ಬಿಗಿ ಭದ್ರತೆ: 600ಕ್ಕೂ ಹೆಚ್ಚು ಪೊಲೀಸರ ನಿಯೋಜನೆ
ಗಗ್ಗರ ಮನರಂಜನೆ ವಸ್ತುವಲ್ಲ, ಚಪ್ಪಲಿ ಹಾಕಿ ವೀಕ್ಷಣೆ ಸಲ್ಲ: ಬಿಜೆಪಿ ಕಿಡಿ
ಗಗ್ಗರ ಮನರಂಜನೆ ವಸ್ತುವಲ್ಲ, ಚಪ್ಪಲಿ ಹಾಕಿ ವೀಕ್ಷಣೆ ಸಲ್ಲ: ಬಿಜೆಪಿ ಕಿಡಿ