AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಪುಟಾಣಿ ಆನೆಗೆ ಸೊಂಡಿಲಿನಿಂದ ನೀರು ಕುಡಿಯಲು ಕಲಿಸಿಕೊಟ್ಟ ತಾಯಾನೆ

ಮೂಕ ಪ್ರಾಣಿಗಳು ತನ್ನ ಕಂದಮ್ಮಗಳ ಮೇಲೆ ಪ್ರೀತಿ, ಕಾಳಜಿಯ ದೃಶ್ಯಗಳನ್ನು ನೀವು ನೋಡಿರುತ್ತೀರಿ. ಇದೀಗ ತಾಯಾನೆ ತನ್ನ ಕಂದಮ್ಮನಿಗೆ ಸೊಂಡಿಲಿನಿಂದ ನೀರು ಕುಡಿಯುವುದು ಹೇಗೆಂದು ಹೇಳಿ ಕೊಟ್ಟಿದೆ. ಮರಿಯಾನೆ ತಾಯಾನೆ ಹೇಳಿದ್ದಂತೆ ನೀರು ಕುಡಿದಿದ್ದು, ಈ ದೃಶ್ಯ ನೆಟ್ಟಿಗರ ಹೃದಯ ಗೆದ್ದಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಪುಟಾಣಿ ಆನೆಗೆ ಸೊಂಡಿಲಿನಿಂದ ನೀರು ಕುಡಿಯಲು ಕಲಿಸಿಕೊಟ್ಟ ತಾಯಾನೆ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Aug 21, 2026 | 1:24 PM

Share

ತಾಯಿ ಪ್ರೀತಿಯೇ ಹಾಗೆ, ಅದನ್ನು ಪದಗಳಲ್ಲಿ ವಿವರಿಸಲು ಸಾಧ್ಯವಿಲ್ಲ. ಇದೀಗ ತಾಯಾನೆಯೊಂದು (mother elephant) ತನ್ನ ಕಂದಮ್ಮನ ಮೇಲೆ ತೋರಿದ ಪ್ರೀತಿ ಇಂಟರ್ನೆಟ್‌ನಲ್ಲಿ ಎಲ್ಲರ ಗಮನ ಸೆಳೆದಿದೆ. ತಾಯಾನೆ ಸೊಂಡಿಲಿನಲ್ಲಿ ನೀರು ಕುಡಿಯುವುದು ಹೇಗೆಂದು ಮರಿಯಾನೆಗೆ ಕಲಿಸಿಕೊಟ್ಟಿದೆ. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಮೀವಾಯ್ಸ್‌ಆಫ್‌ಭಾರತ್‌.ಇನ್‌ (mevoiceofbharat.in) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ತಾಯಿ – ಕಂದಮ್ಮನ ಬಾಂಧವ್ಯ ಸಾರುವ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್‌ನಲ್ಲಿ ತಾಯಾನೆಯೊಂದು ಬಕೆಟ್ ನಲ್ಲಿಟ್ಟ ನೀರು ಕುಡಿಯುತ್ತಿದೆ. ಮರಿಯಾನೆಯು ತನ್ನ ಅಮ್ಮನ ಬಳಿಗೆ ಬಂದು ನೀರು ಬೇಕು ಎನ್ನುವಂತೆ ಸನ್ನೆ ಮಾಡಿದೆ. ಇದನ್ನರಿತ ತಾಯಾನೆ ತನ್ನ ಕಂದಮ್ಮನಿಗೆ ಸೊಂಡಿಲಿನಿಂದ ನೀರು ಹೇಗೆ ಕುಡಿಯಬೇಕೆಂದು ಕಲಿಸಿ ಕೊಟ್ಟಿದೆ. ತದನಂತರದಲ್ಲಿ ಮರಿಯಾನೆ ತನ್ನ ಪುಟಾಣಿ ಸೊಂಡಿಲಿನಿಂದ ನೀರು ಕುಡಿಯುವುದನ್ನು ನೋಡಬಹುದು.

ವೈರಲ್‌ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಮರದ ಕಡ್ಡಿ ಬಳಸಿ ಕಿವಿ ಸ್ವಚ್ಛಗೊಳಿಸಿದ ಗಜರಾಜ

ಈ ವಿಡಿಯೋ ಇದುವರೆಗೆ ಮೂವತ್ತೇಳು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ತುಂಬಾ ಮುದ್ದಾಗಿದೆ ಎಂದಿದ್ದಾರೆ. ಇನ್ನೊಬ್ಬರು, ತಾಯಿ ಪ್ರೀತಿಗೆ ಬೇರೆ ಹೋಲಿಕೆ ಇಲ್ಲ ಎಂದು ಹೇಳಿದ್ದಾರೆ. ಮತ್ತೊಬ್ಬರು, ಮೂಕ ಪ್ರಾಣಿಗಳ ಕಾಳಜಿ ನೋಡಿ ಕಣ್ಣಲ್ಲಿ ನೀರು ಬಂತು ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ