AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಗಾಂಜಾ ವ್ಯಸನಿ ಪುತ್ರನನ್ನು ಕಂಬಕ್ಕೆ ಕಟ್ಟಿಹಾಕಿ, ಕಣ್ಣಿಗೆ ಖಾರದ ಪುಡಿ ಹಾಕಿದ ತಾಯಿ

ತೆಲಂಗಾಣದ ಗ್ರಾಮಾಂತರದಲ್ಲಿ ಮಕ್ಕಳನ್ನು ಶಿಕ್ಷಿಸಲು ಪೋಷಕರು ಮಕ್ಕಳ ಕಣ್ಣಿಗೆ ಮೆಣಸಿನ ಪುಡಿ ಉಜ್ಜುವುದು ಹೊಸದೇನಲ್ಲ. ಈ ವಿಡಿಯೋ ಈ ಹಳೆಯ ವಿಧಾನವು ಉಪಯುಕ್ತವಾಗಿದೆಯೇ ಎಂದು ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಆಗುತ್ತಿದೆ.

Viral Video: ಗಾಂಜಾ ವ್ಯಸನಿ ಪುತ್ರನನ್ನು ಕಂಬಕ್ಕೆ ಕಟ್ಟಿಹಾಕಿ, ಕಣ್ಣಿಗೆ ಖಾರದ ಪುಡಿ ಹಾಕಿದ ತಾಯಿ
ಮಗನ ಕಣ್ಣಿಗೆ ಖಾರದ ಪುಡಿ ಹಾಕುತ್ತಿರುವ ತಾಯಿ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Apr 05, 2022 | 12:31 PM

Share

ಹೈದರಾಬಾದ್: ತನ್ನ 15 ವರ್ಷದ ಮಗನ ಗಾಂಜಾ (ಗಾಂಜಾ) ವ್ಯಸನದ (Cannabis Addiction) ಬಗ್ಗೆ ಸಿಟ್ಟಿಗೆದ್ದ ತಾಯಿ ಮಗನನ್ನು ಕಂಬಕ್ಕೆ ಕಟ್ಟಿ, ಕಣ್ಣಿಗೆ ಖಾರದ ಪುಡಿ ಹಾಕಿ ಥಳಿಸಿರುವಂತಹ ಘಟನೆ ತೆಲಂಗಾಣದ ಸೂರ್ಯಪೇಟ್ ಜಿಲ್ಲೆಯ ಕೊಡಾಡ್ ಎಂಬಲ್ಲಿ ನಡೆದಿದೆ. ಸದ್ಯ ಈ ಘಟನೆಯ ವಿಡಿಯೋ ಸೋಮವಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತನ್ನ 15 ವರ್ಷದ ಮಗ ಗಾಂಜಾ ವ್ಯಸನಿಯಾಗುತ್ತಿರುವ ಬಗ್ಗೆ ಆತಂಕಗೊಂಡ ತಾಯಿ ಆತನನ್ನು ಕಂಬಕ್ಕೆ ಕಟ್ಟಿ ಹಾಕಿದ್ದಾಳೆ ಎಂದು ಇಂಡಿಯಾ.ಕಾಮ್ ವರದಿ ಮಾಡಿದೆ. ಅಷ್ಟಕ್ಕೇ ಸುಮ್ಮನಾಗದ ಮತ್ತೊಬ್ಬ ಮಹಿಳೆ ಆತನ ಕೈ ಹಿಡಿದು ಆತನ ಕಣ್ಣಿಗೆ ಮೆಣಸಿನ ಪುಡಿ ಉಜ್ಜಿದ್ದಾಳೆ. ಉರಿಯಿಂದಾಗಿ ಯುವಕರು ಹುಚ್ಚುಚ್ಚರಾಗಿ ಕಿರುಚುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಕೆಲವು ನೆರೆಹೊರೆಯವರು  ಬಾಲಕನ ತಾಯಿಗೆ ನೀರು ಹಾಕುವಂತೆ ಸಲಹೆ ನೀಡುವುದನ್ನು ಸಹ ಕೇಳಬಹುದು. ಗಾಂಜಾ ಸೇದುವ ಅಭ್ಯಾಸವನ್ನು ಬಿಡುವುದಾಗಿ ಭರವಸೆ ನೀಡಿದ ನಂತರವೇ ತಾಯಿ ತನ್ನ ಮಗನನ್ನು ಬಿಟ್ಟಿದ್ದಾಳೆ ಎನ್ನಲಾಗುತ್ತಿದೆ.

ತೆಲಂಗಾಣದ ಗ್ರಾಮಾಂತರದಲ್ಲಿ ಮಕ್ಕಳನ್ನು ಶಿಕ್ಷಿಸಲು ಪೋಷಕರು ಮಕ್ಕಳ ಕಣ್ಣಿಗೆ ಮೆಣಸಿನ ಪುಡಿ ಉಜ್ಜುವುದು ಹೊಸದೇನಲ್ಲ. ಈ ವಿಡಿಯೋ ಈ ಹಳೆಯ ವಿಧಾನವು ಉಪಯುಕ್ತವಾಗಿದೆಯೇ ಎಂದು ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಆಗುತ್ತಿದೆ. ಯುವಕರಲ್ಲಿ ಹೆಚ್ಚುತ್ತಿರುವ ಮಾದಕ ವ್ಯಸನದ ನಡುವೆ ಈ ಘಟನೆ ಸಂಭವಿಸಿದೆ. ಇತ್ತೀಚೆಗಷ್ಟೇ ಹೈದರಾಬಾದ್‌ನಲ್ಲಿ ಇಂಜಿನಿಯರಿಂಗ್ ಪದವೀಧರನೊಬ್ಬ ಡ್ರಗ್ಸ್ ಸೇವನೆಯಿಂದ ಮೃತಪಟ್ಟಿರುವುದು ಅಧಿಕಾರಿಗಳನ್ನು ಕಂಗಾಲಾಗಿಸಿತ್ತು. ಸ್ನೇಹಿತರು ಮತ್ತು ಡ್ರಗ್ ದಂಧೆಕೋರರೊಂದಿಗೆ ಗೋವಾಗೆ ಭೇಟಿ ನೀಡಿದಾಗ ಮಾದಕ ವ್ಯಸನಿಯಾಗಿದ್ದ ಈತ ಮಾದಕ ದ್ರವ್ಯಗಳ ಕಾಕ್‌ಟೈಲ್ ಸೇವಿಸಲು ಆರಂಭಿಸಿದ್ದ ಎಂಬುದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ. ಪೊಲೀಸರು ಮತ್ತು ಹೊಸದಾಗಿ ರಚಿಸಲಾದ ಹೈದರಾಬಾದ್ ನಾರ್ಕೋಟಿಕ್ಸ್ ಎನ್‌ಫೋರ್ಸ್‌ಮೆಂಟ್ ವಿಂಗ್ (H-NEW) ಪೆಡ್ಲರ್‌ಗಳ ವಿರುದ್ಧ ಕಠಿಣವಾಗಿ ವರ್ತಿಸುವುದು ಮಾತ್ರವಲ್ಲದೆ ಡ್ರಗ್ಸ್ ಸೇವಿಸುತ್ತಿರುವವರ ವಿರುದ್ಧ ಕೇಸ್‌ಗಳನ್ನು ಬುಕ್ ಮಾಡುತ್ತಿದೆ.

ಪೊಲೀಸರ ಪ್ರಕಾರ, ಇತ್ತೀಚಿನ ದಿನಗಳಲ್ಲಿ ಹಲವಾರು ಯುವಕರು ಮತ್ತು ವಿದ್ಯಾರ್ಥಿಗಳು ಮಾದಕ ವ್ಯಸನಿಗಳಾಗಿದ್ದಾರೆ. ಅವರು ಅಪರಾಧ ಮತ್ತು ಇತರ ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ. ಯುವಕರು ಮತ್ತು ವಿದ್ಯಾರ್ಥಿಗಳು ಮಾದಕ ವ್ಯಸನಕ್ಕೆ ಬಲಿಯಾಗದಂತೆ ಪೊಲೀಸರು ಮನವಿ ಮಾಡಿದ್ದು, ಪೋಷಕರು ತಮ್ಮ ಮಕ್ಕಳ ಚಟುವಟಿಕೆಗಳ ಮೇಲೆ ನಿಗಾ ಇಡಬೇಕು ಮತ್ತು ಇಂತಹ ಸಮಾಜ ವಿರೋಧಿ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಪೊಲೀಸರನ್ನು ಸಂಪರ್ಕಿಸಲು ಅಥವಾ ಪೊಲೀಸರಿಗೆ ಮಾಹಿತಿ ನೀಡಲು ಹಿಂಜರಿಯಬಾರದು ಎಂದಿದ್ದಾರೆ.

ಇದನ್ನೂ ಓದಿ:

ಟೀನಾ ಡಾಬಿ ಮದುವೆ ಘೋಷಣೆಯ ಬೆನ್ನಲ್ಲೇ ಮತ್ತೋರ್ವ ಐಎಎಸ್ ಅಧಿಕಾರಿಯ ಮದುವೆ; ಇಲ್ಲಿದೆ ಪತ್ರಕರ್ತ ಮತ್ತು ಐಎಎಸ್ ಅಧಿಕಾರಿಯ ಸುಂದರ ಪ್ರೇಮಕಥೆ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?