AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಣಿಸಿಕೊಂಡ ರಾಷ್ಟ್ರೀಯ ಪ್ರಾಣಿ; ವಿಡಿಯೋ ವೈರಲ್

ರಾಷ್ಟ್ರೀಯ ಪಾಣಿ ಹುಲಿಯೊಂದು ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡಿರುವ ಕಿರು ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಣಿಸಿಕೊಂಡ ರಾಷ್ಟ್ರೀಯ ಪ್ರಾಣಿ; ವಿಡಿಯೋ ವೈರಲ್
ಹುಲಿ
TV9 Web
| Edited By: |

Updated on: Feb 02, 2022 | 11:14 AM

Share

viral video; ರಾಷ್ಟ್ರೀಯ ಪಾಣಿ ಹುಲಿಯೊಂದು ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡಿರುವ ಕಿರು ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಗಮನ ಸೆಳೆಯುವುದರ ಜತೆಗೆ ನೋಡುಗರು ವಾವ್ ಎನ್ನುವಂತೆ ಮಾಡಿದೆ. 15 ಸೆಕೆಂಡ್‌ಗಳಿರುವ ಈ ಕಿರು ಕ್ಲಿಪ್‌ನಲ್ಲಿ, ಹುಲಿ ರಾಷ್ಟ್ರೀಯ ಹೆದ್ದಾರಿಯೊಂದರಲ್ಲಿ ರಾಜಗಂಭೀರವಾಗಿ ಯಾವುದೇ ಅಳುಕ್ಕಿಲ್ಲದೇ ಸುತ್ತಾಡಿ, ನಂತರ ನಾಜೂಕಾಗಿ ಕಾಡಿನೊಳಗೆ  ಹೋಗುವುದನ್ನು ಕಾಣಬಹುದಾಗಿದೆ. ಇನ್ನೂ ಈ ವಿಡಿಯೋವನ್ನು ತಮಿಳುನಾಡಿನವರಾದ ಛಾಯಾಗ್ರಾಹಕ ರಾಜ್ ಮೋಹನ್ ಎನ್ನುವವರು ತಮ್ಮ ಕ್ಯಾಮರಾದಲ್ಲಿ ಸೆರೆಹಿಡಿದಿದ್ದು, ಅದನ್ನು ಭಾರತೀಯ ಅರಣ್ಯ ಸೇನಾ ಅಧಿಕಾರಿ ಸುಶಾಂತ ನಂದಾ ಅವರು ಟ್ವೀಟರ್​ನಲ್ಲಿ ಹಂಚಿಕೊಂಡಿದ್ದಾರೆ. “ಭಾರತದಲ್ಲಿ ಮತ್ತೊಂದು ದಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾಷ್ಟ್ರೀಯ ಪ್ರಾಣಿ ಎಂದು ಅವರು ಬರೆದುಕೊಂಡಿದ್ದಾರೆ.

ಈ ವಿಡಿಯೋವನ್ನು ಸೆರೆಹಿಡಿದಿರುವ ತಮಿಳುನಾಡಿನವರಾದ ಛಾಯಾಗ್ರಾಹಕ ರಾಜ್ ಮೋಹನ್ ಅವರು ಈ ವಿಡಿಯೋವನ್ನು ಟ್ವೀಟ್​ ಮಾಡಿದ್ದು, ಈ ವಿಡಿಯೋ ಹಿಂದೆ ಒಂದು ನಂಬಲಾಗದ ಕಥೆ ಇದೆ ಎಂದಿದ್ದಾರೆ. ವಾಲ್ಪರೈನ ಎನ್ನುವಲ್ಲಿ ಇ ಹುಲಿ ಕಾಣಿಸಿಕೊಂಡಿದ್ದು, ನನ್ನ ಹೆಂಡತಿ ಈ ಹುಲಿ ನೋಡಿ ಎಚ್ಚರಗೊಂಡಿದ್ದಳೆ. ನಾನು ಗಾಢ ನಿದ್ದೆಯಲ್ಲಿದ್ದಾಗ ಹುಲಿ ಹುಲಿ ಎಂದು ನನ್ನ ಹೆಂಡತಿ ಕೂಗಿದ್ದಾಳೆ ಎಂದು ಅವರು ಬರೆದುಕೊಂಡಿದ್ದಾರೆ.

ಭಾರತೀಯ ಅರಣ್ಯ ಸೇನಾ ಅಧಿಕಾರಿ ಸುಶಾಂತ ನಂದಾ ಅವರು ಈ ವಿಡಿಯೋ ಹಂಚಿಕೊಂಡ 24 ಗಂಟೆಯ ಒಳಗೆ 38 ಸಾವಿರಕ್ಕೂ ಹೆಚ್ಚು ಜನ ವೀಕ್ಷಣೆ ಮಾಡಿದ್ದಾರೆ. ಜತೆಗೆ ಸಾಮಾಜಿಕ ಮಾದ್ಯಮದಲ್ಲಿ ಸಾಕಷ್ಟು ಕಮೆಂಟ್ಸ್ ಕೂಡ ಬರುತ್ತಿವೆ.

ಇದನ್ನೂ ಓದಿ;

Viral Video: 300 ಹಾವುಗಳನ್ನು ಗೋಣಿಚೀಲದಲ್ಲಿ ತುಂಬಿ ಕಾಡಲ್ಲಿ ಸುರಿದ ವ್ಯಕ್ತಿ; ಈ ವಿಡಿಯೋ ನೋಡಿ ಶಾಕ್ ಆಗಬೇಡಿ!

ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ