AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಣಿಸಿಕೊಂಡ ರಾಷ್ಟ್ರೀಯ ಪ್ರಾಣಿ; ವಿಡಿಯೋ ವೈರಲ್

ರಾಷ್ಟ್ರೀಯ ಪಾಣಿ ಹುಲಿಯೊಂದು ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡಿರುವ ಕಿರು ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಣಿಸಿಕೊಂಡ ರಾಷ್ಟ್ರೀಯ ಪ್ರಾಣಿ; ವಿಡಿಯೋ ವೈರಲ್
ಹುಲಿ
TV9 Web
| Edited By: |

Updated on: Feb 02, 2022 | 11:14 AM

Share

viral video; ರಾಷ್ಟ್ರೀಯ ಪಾಣಿ ಹುಲಿಯೊಂದು ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡಿರುವ ಕಿರು ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಗಮನ ಸೆಳೆಯುವುದರ ಜತೆಗೆ ನೋಡುಗರು ವಾವ್ ಎನ್ನುವಂತೆ ಮಾಡಿದೆ. 15 ಸೆಕೆಂಡ್‌ಗಳಿರುವ ಈ ಕಿರು ಕ್ಲಿಪ್‌ನಲ್ಲಿ, ಹುಲಿ ರಾಷ್ಟ್ರೀಯ ಹೆದ್ದಾರಿಯೊಂದರಲ್ಲಿ ರಾಜಗಂಭೀರವಾಗಿ ಯಾವುದೇ ಅಳುಕ್ಕಿಲ್ಲದೇ ಸುತ್ತಾಡಿ, ನಂತರ ನಾಜೂಕಾಗಿ ಕಾಡಿನೊಳಗೆ  ಹೋಗುವುದನ್ನು ಕಾಣಬಹುದಾಗಿದೆ. ಇನ್ನೂ ಈ ವಿಡಿಯೋವನ್ನು ತಮಿಳುನಾಡಿನವರಾದ ಛಾಯಾಗ್ರಾಹಕ ರಾಜ್ ಮೋಹನ್ ಎನ್ನುವವರು ತಮ್ಮ ಕ್ಯಾಮರಾದಲ್ಲಿ ಸೆರೆಹಿಡಿದಿದ್ದು, ಅದನ್ನು ಭಾರತೀಯ ಅರಣ್ಯ ಸೇನಾ ಅಧಿಕಾರಿ ಸುಶಾಂತ ನಂದಾ ಅವರು ಟ್ವೀಟರ್​ನಲ್ಲಿ ಹಂಚಿಕೊಂಡಿದ್ದಾರೆ. “ಭಾರತದಲ್ಲಿ ಮತ್ತೊಂದು ದಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾಷ್ಟ್ರೀಯ ಪ್ರಾಣಿ ಎಂದು ಅವರು ಬರೆದುಕೊಂಡಿದ್ದಾರೆ.

ಈ ವಿಡಿಯೋವನ್ನು ಸೆರೆಹಿಡಿದಿರುವ ತಮಿಳುನಾಡಿನವರಾದ ಛಾಯಾಗ್ರಾಹಕ ರಾಜ್ ಮೋಹನ್ ಅವರು ಈ ವಿಡಿಯೋವನ್ನು ಟ್ವೀಟ್​ ಮಾಡಿದ್ದು, ಈ ವಿಡಿಯೋ ಹಿಂದೆ ಒಂದು ನಂಬಲಾಗದ ಕಥೆ ಇದೆ ಎಂದಿದ್ದಾರೆ. ವಾಲ್ಪರೈನ ಎನ್ನುವಲ್ಲಿ ಇ ಹುಲಿ ಕಾಣಿಸಿಕೊಂಡಿದ್ದು, ನನ್ನ ಹೆಂಡತಿ ಈ ಹುಲಿ ನೋಡಿ ಎಚ್ಚರಗೊಂಡಿದ್ದಳೆ. ನಾನು ಗಾಢ ನಿದ್ದೆಯಲ್ಲಿದ್ದಾಗ ಹುಲಿ ಹುಲಿ ಎಂದು ನನ್ನ ಹೆಂಡತಿ ಕೂಗಿದ್ದಾಳೆ ಎಂದು ಅವರು ಬರೆದುಕೊಂಡಿದ್ದಾರೆ.

ಭಾರತೀಯ ಅರಣ್ಯ ಸೇನಾ ಅಧಿಕಾರಿ ಸುಶಾಂತ ನಂದಾ ಅವರು ಈ ವಿಡಿಯೋ ಹಂಚಿಕೊಂಡ 24 ಗಂಟೆಯ ಒಳಗೆ 38 ಸಾವಿರಕ್ಕೂ ಹೆಚ್ಚು ಜನ ವೀಕ್ಷಣೆ ಮಾಡಿದ್ದಾರೆ. ಜತೆಗೆ ಸಾಮಾಜಿಕ ಮಾದ್ಯಮದಲ್ಲಿ ಸಾಕಷ್ಟು ಕಮೆಂಟ್ಸ್ ಕೂಡ ಬರುತ್ತಿವೆ.

ಇದನ್ನೂ ಓದಿ;

Viral Video: 300 ಹಾವುಗಳನ್ನು ಗೋಣಿಚೀಲದಲ್ಲಿ ತುಂಬಿ ಕಾಡಲ್ಲಿ ಸುರಿದ ವ್ಯಕ್ತಿ; ಈ ವಿಡಿಯೋ ನೋಡಿ ಶಾಕ್ ಆಗಬೇಡಿ!

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!