AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಇಲ್ಲಿ ಕಸ ಹಾಕುವವರಿಗೆ ಬ್ಯಾನರ್​​ ಮೂಲಕ ಹಿಗ್ಗಾಮುಗ್ಗಾ ಜಾಡಿಸಿದ ಗ್ರಾಮಸ್ಥರು

ಸ್ವಚ್ಛತೆಯ ಬಗ್ಗೆ ಎಷ್ಟೇ ಜಾಗೃತಿ ಮೂಡಿಸಿದರೂ, ಕೆಲವೊಂದು ಜನರು ನಮಗೂ ಅದಕ್ಕೂ ಯಾವುದೇ ಸಂಬಂಧವಿಲ್ಲ ಎಂಬಂತೆ ಎಲ್ಲೆಂದರಲ್ಲಿ ಕಸ ಎಸೆದು ಹೋಗುತ್ತಾರೆ. ಇಂತಹ ಲಜ್ಜೆಗೆಟ್ಟ ಜನರಿಗೆ ತಕ್ಕ ಪಾಠ ಕಲಿಸಲು ಇಲ್ಲೊಂದು ಊರಿನ ಜನರು  ಬೀದಿಯಲ್ಲಿ ಕಸ ಎಸೆಯುವಂತಹ ಸ್ಥಳದಲ್ಲಿ ವಿಶಿಷ್ಟ ಬ್ಯಾನರ್ ಒಂದನ್ನು ಹಾಕಿದ್ದು, ಈ ಕುರಿತ ವಿಡಿಯೋವೊಂದು ಇದೀಗ ವೈರಲ್ ಆಗುತ್ತಿದೆ. 

Viral Video: ಇಲ್ಲಿ ಕಸ ಹಾಕುವವರಿಗೆ ಬ್ಯಾನರ್​​ ಮೂಲಕ ಹಿಗ್ಗಾಮುಗ್ಗಾ ಜಾಡಿಸಿದ ಗ್ರಾಮಸ್ಥರು
ಸಾಂದರ್ಭಿಕ ಚಿತ್ರ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Apr 09, 2024 | 3:40 PM

ತಮ್ಮ ಮನೆಯ ಕಸವನ್ನು ತಂದು ಎಲ್ಲೆಂದರಲ್ಲಿ ಎಸೆದು ಹೋಗುವ ಲಜ್ಜೆಗೆಟ್ಟ ಜನರಿಗೇನು ನಮ್ಮ ದೇಶದಲ್ಲಿ ಕೊರತೆಯಿಲ್ಲ. ಹೌದು ಸ್ವಚ್ಛತೆಯ ಬಗ್ಗೆ ಎಷ್ಟೇ ಜಾಗೃತಿ ಮೂಡಿಸಿದರೂ ಅದಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ ಎಂಬಂತೆ ಇಂದಿಗೂ ಅದೆಷ್ಟೋ ಜನರು ರಸ್ತೆ ಬದಿ ಸೇರಿದಂತೆ ಎಲ್ಲೆಂದರಲ್ಲಿ ಕಸ ಎಸೆಯುತ್ತಿರುತ್ತಾರೆ. ಇಂತಹವರಿಗೆ ತಕ್ಕ ಪಾಠ ಕಲಿಸಬೇಕು ಇನ್ನು ಮುಂದೆ ಎಲ್ಲೆಂದರಲ್ಲಿ ಕಸ ಎಸೆಯಬಾರದೆಂದು, ದಕ್ಷಿಣ ಕನ್ನಡ ಜಿಲ್ಲೆಯ ತೋಕೂರಿನ ಗ್ರಾಮಸ್ಥರು, ಬೀದಿ ಬದಿಯಲ್ಲಿ  ಎಸೆದು ಹೋಗುವಂತಹ ಸ್ಥಳದಲ್ಲಿ  “ನಿನ್ನ ಚಿತೆಗೆ ಬೆಂಕಿ ಹಚ್ಚಲು ಇಷ್ಟು ಕಸ ಸಾಲದು, ಇನ್ನಷ್ಟು ಕಸವನ್ನು ತಂದು ಇಲ್ಲಿ ಬಿಸಾಕು. ಕಸದ ಜೊತೆಗೆ ನಿನ್ನ ಪಿಂಡವನ್ನು ಕೂಡಾ ಬಿಡುತ್ತೇವೆ” ಎಂಬ ಬರಹವನ್ನು  ಬರೆದಿರುವ ಬ್ಯಾನರ್ ಹಾಕುವ ಮೂಲಕ ಎಲ್ಲೆಂದರಲ್ಲಿ ಕಸ ಎಸೆಯುವವರಿಗೆ ತಕ್ಕ ಪಾಠ ಕಲಿಸಿದ್ದಾರೆ.

ಈ ವೈರಲ್ ವಿಡಿಯೋವನ್ನು ವೀರ ವಸಂತ್ ಕುಮಾರ್ ಕೋಟ್ಯಾನ್ (@veeer_kotian) ಎಂಬವರು ತಮ್ಮ ಇನ್ಸ್ಟಾಗ್ರಾಮ್ ಪೇಜ್ ಒಂದರಲ್ಲಿ ಹಂಚಿಕೊಂಡಿದ್ದಾರೆ.  ವೈರಲ್ ವಿಡಿಯೋದಲ್ಲಿ ಎಲ್ಲೆಂದರಲ್ಲಿ ಕಸ ಎಸೆಯಬಾರದೆಂದು ಬೀದಿ ಬದಿಯಲ್ಲಿ ಒಂದು ಬ್ಯಾನರ್ ಹಾಕಿ ಅದರಲ್ಲಿ ನಿನ್ನ ಚಿತೆಗೆ ಬೆಂಕಿ ಹಚ್ಚಲು ಇಷ್ಟು ಕಸ ಸಾಕಾಗುವುದಿಲ್ಲ, ಇನ್ನಷ್ಟು ಕಸವನ್ನು ತಂದು ಇಲ್ಲಿ ಸುರಿ, ಇಲ್ಲೇ ಈ ಕಸದ ಜೊತೆಗೆ ನಿನ್ನ ಪಿಂಡವನ್ನು ಬಿಡುತ್ತೇವೆ; ಭಾವಪೂರ್ಣ ಶ್ರದ್ಧಾಂಜಲಿ,  ಇದು ಇಲ್ಲಿ ಕಸ ಬಿಸಾಡುವ ದಿವ್ಯ ಆತ್ಮಗಳಿಗೆ ಅರ್ಪಣೆ” ಎಂಬ ಬರಹವನ್ನು ಬರೆದಿರುವುದನ್ನು ಕಾಣಬಹುದು.

ಇದನ್ನೂ ಓದಿ: ಮಗನಿಗಾಗಿ ಉರುಳು ಸೇವೆ ಮೂಲಕ ಚಾಮುಂಡಿ ಬೆಟ್ಟ ಹತ್ತಿದ ವೃದ್ಧ ತಂದೆ

ನಾಲ್ಕು ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 1.9 ಮಿಲಿಯನ್ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಹೌದು ಕಸ ಎಸೆಯುವವರಿಗೆ ಇದೊಂದು ಒಳ್ಳೆಯ ಪಾಠ ಎಂದು ನೆಟ್ಟಿಗರು ಕಾಮೆಂಟ್ ಮಾಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಗೋಲ್ಡ್ ಸುರೇಶ್ ವಿರುದ್ಧ ಲಕ್ಷ ಲಕ್ಷ ವಂಚನೆ ಮಾಡಿದ ಆರೋಪ
ಗೋಲ್ಡ್ ಸುರೇಶ್ ವಿರುದ್ಧ ಲಕ್ಷ ಲಕ್ಷ ವಂಚನೆ ಮಾಡಿದ ಆರೋಪ
ರಾಮೋಜಿ ಫಿಲ್ಮ್​ಸಿಟಿಯಲ್ಲಿ 16 ಮಹಾನಟಿಯರ ಭರ್ಜರಿ ಫೋಟೋಶೂಟ್
ರಾಮೋಜಿ ಫಿಲ್ಮ್​ಸಿಟಿಯಲ್ಲಿ 16 ಮಹಾನಟಿಯರ ಭರ್ಜರಿ ಫೋಟೋಶೂಟ್
ಸಕಲೇಶಪುರ: ರಸ್ತೆಯಲ್ಲೇ ಕಾಡಾನೆಗಳ ಪರೇಡ್! ಬೆಚ್ಚಿಬಿದ್ದ ಗ್ರಾಮಸ್ಥರು
ಸಕಲೇಶಪುರ: ರಸ್ತೆಯಲ್ಲೇ ಕಾಡಾನೆಗಳ ಪರೇಡ್! ಬೆಚ್ಚಿಬಿದ್ದ ಗ್ರಾಮಸ್ಥರು
ಸಚಿವ ಶಿವರಾಜ್ ತಂಗಡಗಿ ಬೆಂಗಾವಲು ಪಡೆ ವಾಹನ ಅಪಘಾತ, ಇಬ್ಬರಿಗೆ ಗಾಯ
ಸಚಿವ ಶಿವರಾಜ್ ತಂಗಡಗಿ ಬೆಂಗಾವಲು ಪಡೆ ವಾಹನ ಅಪಘಾತ, ಇಬ್ಬರಿಗೆ ಗಾಯ
Daily Devotional: ಈ 5 ವಿಷಯಗಳನ್ನ ಯಾರಿಗೂ ಹೇಳಬಾರದು
Daily Devotional: ಈ 5 ವಿಷಯಗಳನ್ನ ಯಾರಿಗೂ ಹೇಳಬಾರದು
ಸೂರ್ಯ ಮಿಥುನ ರಾಶಿಯಲ್ಲಿ, ಇಂದು ಯಾರಿಗೆಲ್ಲಾ ಶುಭ ದಿನ ತಿಳಿಯಿರಿ
ಸೂರ್ಯ ಮಿಥುನ ರಾಶಿಯಲ್ಲಿ, ಇಂದು ಯಾರಿಗೆಲ್ಲಾ ಶುಭ ದಿನ ತಿಳಿಯಿರಿ
ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಚಲನಚಿತ್ರ ವಾಣಿಜ್ಯ ಮಂಡಳಿ?
ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಚಲನಚಿತ್ರ ವಾಣಿಜ್ಯ ಮಂಡಳಿ?
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು