AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಇಲ್ಲಿ ಕಸ ಹಾಕುವವರಿಗೆ ಬ್ಯಾನರ್​​ ಮೂಲಕ ಹಿಗ್ಗಾಮುಗ್ಗಾ ಜಾಡಿಸಿದ ಗ್ರಾಮಸ್ಥರು

ಸ್ವಚ್ಛತೆಯ ಬಗ್ಗೆ ಎಷ್ಟೇ ಜಾಗೃತಿ ಮೂಡಿಸಿದರೂ, ಕೆಲವೊಂದು ಜನರು ನಮಗೂ ಅದಕ್ಕೂ ಯಾವುದೇ ಸಂಬಂಧವಿಲ್ಲ ಎಂಬಂತೆ ಎಲ್ಲೆಂದರಲ್ಲಿ ಕಸ ಎಸೆದು ಹೋಗುತ್ತಾರೆ. ಇಂತಹ ಲಜ್ಜೆಗೆಟ್ಟ ಜನರಿಗೆ ತಕ್ಕ ಪಾಠ ಕಲಿಸಲು ಇಲ್ಲೊಂದು ಊರಿನ ಜನರು  ಬೀದಿಯಲ್ಲಿ ಕಸ ಎಸೆಯುವಂತಹ ಸ್ಥಳದಲ್ಲಿ ವಿಶಿಷ್ಟ ಬ್ಯಾನರ್ ಒಂದನ್ನು ಹಾಕಿದ್ದು, ಈ ಕುರಿತ ವಿಡಿಯೋವೊಂದು ಇದೀಗ ವೈರಲ್ ಆಗುತ್ತಿದೆ. 

Viral Video: ಇಲ್ಲಿ ಕಸ ಹಾಕುವವರಿಗೆ ಬ್ಯಾನರ್​​ ಮೂಲಕ ಹಿಗ್ಗಾಮುಗ್ಗಾ ಜಾಡಿಸಿದ ಗ್ರಾಮಸ್ಥರು
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​|

Updated on: Apr 09, 2024 | 3:40 PM

Share

ತಮ್ಮ ಮನೆಯ ಕಸವನ್ನು ತಂದು ಎಲ್ಲೆಂದರಲ್ಲಿ ಎಸೆದು ಹೋಗುವ ಲಜ್ಜೆಗೆಟ್ಟ ಜನರಿಗೇನು ನಮ್ಮ ದೇಶದಲ್ಲಿ ಕೊರತೆಯಿಲ್ಲ. ಹೌದು ಸ್ವಚ್ಛತೆಯ ಬಗ್ಗೆ ಎಷ್ಟೇ ಜಾಗೃತಿ ಮೂಡಿಸಿದರೂ ಅದಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ ಎಂಬಂತೆ ಇಂದಿಗೂ ಅದೆಷ್ಟೋ ಜನರು ರಸ್ತೆ ಬದಿ ಸೇರಿದಂತೆ ಎಲ್ಲೆಂದರಲ್ಲಿ ಕಸ ಎಸೆಯುತ್ತಿರುತ್ತಾರೆ. ಇಂತಹವರಿಗೆ ತಕ್ಕ ಪಾಠ ಕಲಿಸಬೇಕು ಇನ್ನು ಮುಂದೆ ಎಲ್ಲೆಂದರಲ್ಲಿ ಕಸ ಎಸೆಯಬಾರದೆಂದು, ದಕ್ಷಿಣ ಕನ್ನಡ ಜಿಲ್ಲೆಯ ತೋಕೂರಿನ ಗ್ರಾಮಸ್ಥರು, ಬೀದಿ ಬದಿಯಲ್ಲಿ  ಎಸೆದು ಹೋಗುವಂತಹ ಸ್ಥಳದಲ್ಲಿ  “ನಿನ್ನ ಚಿತೆಗೆ ಬೆಂಕಿ ಹಚ್ಚಲು ಇಷ್ಟು ಕಸ ಸಾಲದು, ಇನ್ನಷ್ಟು ಕಸವನ್ನು ತಂದು ಇಲ್ಲಿ ಬಿಸಾಕು. ಕಸದ ಜೊತೆಗೆ ನಿನ್ನ ಪಿಂಡವನ್ನು ಕೂಡಾ ಬಿಡುತ್ತೇವೆ” ಎಂಬ ಬರಹವನ್ನು  ಬರೆದಿರುವ ಬ್ಯಾನರ್ ಹಾಕುವ ಮೂಲಕ ಎಲ್ಲೆಂದರಲ್ಲಿ ಕಸ ಎಸೆಯುವವರಿಗೆ ತಕ್ಕ ಪಾಠ ಕಲಿಸಿದ್ದಾರೆ.

ಈ ವೈರಲ್ ವಿಡಿಯೋವನ್ನು ವೀರ ವಸಂತ್ ಕುಮಾರ್ ಕೋಟ್ಯಾನ್ (@veeer_kotian) ಎಂಬವರು ತಮ್ಮ ಇನ್ಸ್ಟಾಗ್ರಾಮ್ ಪೇಜ್ ಒಂದರಲ್ಲಿ ಹಂಚಿಕೊಂಡಿದ್ದಾರೆ.  ವೈರಲ್ ವಿಡಿಯೋದಲ್ಲಿ ಎಲ್ಲೆಂದರಲ್ಲಿ ಕಸ ಎಸೆಯಬಾರದೆಂದು ಬೀದಿ ಬದಿಯಲ್ಲಿ ಒಂದು ಬ್ಯಾನರ್ ಹಾಕಿ ಅದರಲ್ಲಿ ನಿನ್ನ ಚಿತೆಗೆ ಬೆಂಕಿ ಹಚ್ಚಲು ಇಷ್ಟು ಕಸ ಸಾಕಾಗುವುದಿಲ್ಲ, ಇನ್ನಷ್ಟು ಕಸವನ್ನು ತಂದು ಇಲ್ಲಿ ಸುರಿ, ಇಲ್ಲೇ ಈ ಕಸದ ಜೊತೆಗೆ ನಿನ್ನ ಪಿಂಡವನ್ನು ಬಿಡುತ್ತೇವೆ; ಭಾವಪೂರ್ಣ ಶ್ರದ್ಧಾಂಜಲಿ,  ಇದು ಇಲ್ಲಿ ಕಸ ಬಿಸಾಡುವ ದಿವ್ಯ ಆತ್ಮಗಳಿಗೆ ಅರ್ಪಣೆ” ಎಂಬ ಬರಹವನ್ನು ಬರೆದಿರುವುದನ್ನು ಕಾಣಬಹುದು.

ಇದನ್ನೂ ಓದಿ: ಮಗನಿಗಾಗಿ ಉರುಳು ಸೇವೆ ಮೂಲಕ ಚಾಮುಂಡಿ ಬೆಟ್ಟ ಹತ್ತಿದ ವೃದ್ಧ ತಂದೆ

ನಾಲ್ಕು ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 1.9 ಮಿಲಿಯನ್ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಹೌದು ಕಸ ಎಸೆಯುವವರಿಗೆ ಇದೊಂದು ಒಳ್ಳೆಯ ಪಾಠ ಎಂದು ನೆಟ್ಟಿಗರು ಕಾಮೆಂಟ್ ಮಾಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು