AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಅತ್ತೆ- ಸೊಸೆ ಜಗಳ; ಮದುವೆಯಾದ ಒಂದೇ ವಾರಕ್ಕೆ ಪತಿಯನ್ನು ತೊರೆದ ಪತ್ನಿ

ಮದುವೆಯಾಗಿ ಗಂಡನ ಮನೆಗೆ ಬಂದು ವಾರ ಕಳೆದಿದೆ ಅಷ್ಟೇ. ಅತ್ತೆ ಸೊಸೆ ನಡುವೆ ಮನಸ್ತಾಪಗಳು ಪ್ರಾರಂಭವಾಗಿವೆ. ಮೊಬೈಲ್​​ ವಿಚಾರಕ್ಕೆ ಪ್ರಾರಂಭವಾದ ಸಂಘರ್ಷದಲ್ಲಿ ನವ ವಧು ತನ್ನ ಪತಿ ಹಾಗೂ ಪತಿ ಮನೆಯವರನ್ನು ತೊರೆದು ಹೋಗಿದ್ದಾಳೆ.

Viral News: ಅತ್ತೆ- ಸೊಸೆ ಜಗಳ; ಮದುವೆಯಾದ ಒಂದೇ ವಾರಕ್ಕೆ ಪತಿಯನ್ನು ತೊರೆದ ಪತ್ನಿ
ಸಾಂದರ್ಭಿಕ ಚಿತ್ರImage Credit source: Odisha Bytes
ಅಕ್ಷತಾ ವರ್ಕಾಡಿ
|

Updated on:Jun 01, 2023 | 1:15 PM

Share

ಬಿಹಾರ: ಮದುವೆಯಾಗಿ ಗಂಡನ ಮನೆಗೆ ಬಂದು ವಾರ ಕಳೆದಿದೆ ಅಷ್ಟೇ. ಅತ್ತೆ ಸೊಸೆ ನಡುವೆ ಮನಸ್ತಾಪಗಳು ಪ್ರಾರಂಭವಾಗಿವೆ. ಮೊಬೈಲ್​​ ವಿಚಾರಕ್ಕೆ ಪ್ರಾರಂಭವಾದ ಸಂಘರ್ಷದಲ್ಲಿ ನವ ವಧು ತನ್ನ ಪತಿ ಹಾಗೂ ಪತಿ ಮನೆಯವರನ್ನು ತೊರೆದು ಹೋಗಿದ್ದಾಳೆ. ಬಿಹಾರದ ಹಾಜಿಪುರದಲ್ಲಿ ಈ ಘಟನೆ ನಡೆದಿದ್ದು, ಇದೀಗಾ ಎಲ್ಲೆಡೆ ವೈರಲ್​​ ಆಗಿದೆ. ಸೊಸೆ ಅತಿಯಾಗಿ ಫೋನ್​​ ಬಳಸುತ್ತಿರುವುದನ್ನು ಕಂಡು ಅತ್ತೆ ಮೊಬೈಲ್​​ ಬಳಸದಂತೆ ಹೇಳಿದ್ದು, ಇವರಿಬ್ಬರ ನಡುವೆ ಸಂಘರ್ಷ ಪ್ರಾರಂಭವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ದಿನವಿಡೀ ಸಮಯ ಕಳೆಯುತ್ತಿದ್ದಳು ಎಂದು ಅತ್ತೆ ಪೊಲೀಸ್​​ ದೂರಿನಲ್ಲಿ ತಿಳಿಸಿದ್ದಾರೆ.

ಸಬಾ ಖಾತೂನ್ ಎಂದು ಗುರುತಿಸಲಾದ ಮಹಿಳೆ, ಸುಮಾರು ಹದಿನೈದು ದಿನಗಳ ಹಿಂದೆ ಇಲಿಯಾಸ್ ಎಂಬಾತನನ್ನು ಮದುವೆಯಾಗಿದ್ದಳು. ಘಟನೆಯನ್ನು ಪೊಲೀಸರಿಗೆ ವಿವರಿಸಿದ ಸಾಬಾ ಅವರ ಸಂಬಂಧಿಕರು, ಅವರು ಇನ್‌ಸ್ಟಾಗ್ರಾಮ್ ಮತ್ತು ಫೇಸ್‌ಬುಕ್‌ಗೆ ವ್ಯಸನಿಯಾಗಿದ್ದರು ಮತ್ತು ದಿನವಿಡೀ ಮೊಬೈಲ್ ಫೋನ್ ಬಳಸುತ್ತಿದ್ದರು ಎಂದು ದೂರಿದ್ದಾರೆ. ಘಟನೆಯ ಬಗ್ಗೆ ಸಾಬಾ ತನ್ನ ಪೋಷಕರು ಮತ್ತು ಸಹೋದರನಿಗೆ ದೂರು ನೀಡಿದ್ದು, ಇದು ಜಗಳಕ್ಕೆ ದಾರಿ ಮಾಡಿಕೊಟ್ಟಿದೆ ಎಂದು ಅವರು ಹೇಳಿದರು. ಘರ್ಷಣೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು, ತಮ್ಮೊಂದಿಗೆ ಪೊಲೀಸ್ ಠಾಣೆಗೆ ಬರುವಂತೆ ಕುಟುಂಬವನ್ನು ಕೇಳಿಕೊಂಡಿದ್ದಾರೆ.

ಇದನ್ನೂ ಓದಿ: ಎಲಾನ್​ ಮಸ್ಕ್​ ಭಾರತದ ಅಳಿಯನಾಗಲಿದ್ದಾರೆಯೇ?!

ತನ್ನ ಹೇಳಿಕೆಯಲ್ಲಿ, ಸಬಾ ಅವರ ತಾಯಿ, ರಜಿಯಾ ಖಾನ್, ತನ್ನ ಮಗಳ ಮೊಬೈಲ್ ಫೋನ್ ಅನ್ನು ಆಕೆಯ ಸಂಬಂಧಿಕರು ಕಿತ್ತುಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ, ಅವರು ತಮ್ಮ ಕುಟುಂಬದೊಂದಿಗೆ ಮಾತನಾಡಲು ಅವಕಾಶ ನೀಡಲಿಲ್ಲ ಎಂದು ಪ್ರತಿ ದೂರು ನೀಡಿದ್ದಾರೆ. ಒಟ್ಟಾರೆಯಾಗಿ ಮದುವೆಯಾದ ಒಂದು ವಾರಕ್ಕೆ ಮೊಬೈಲ್​​ ವಿಚಾರಕ್ಕೆ ಪತಿಯ ಮನೆಯನ್ನೇ ಪತ್ನಿ ತೊರೆದಿದ್ದಾಳೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 12:35 pm, Thu, 1 June 23

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್