AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ದ್ವಾಪರ ಯುಗವನ್ನು ನೆನಪಿಸುವಂತಿದೆ ಈ ದೃಶ್ಯ, ಗೋವಿನ ಮುಂದೆ ಗರಿ ಬಿಚ್ಚಿ ಕುಣಿದ ಮಯೂರಿ

ಸೋಷಿಯಲ್‌ ಮೀಡಿಯಾದಲ್ಲಿ ಪ್ರತಿನಿತ್ಯ ಪ್ರಾಣಿ ಹಾಗೂ ಪಕ್ಷಿ ಸಾಮ್ರಾಜ್ಯಕ್ಕೆ ಸಂಬಂಧಿಸಿದ ಇಂಟರೆಸ್ಟಿಂಗ್‌ ವಿಡಿಯೋಗಳು ಹರಿದಾಡುತ್ತಿರುತ್ತವೆ. ಇವುಗಳಲ್ಲಿ ಕೆಲವೊಂದು ದೃಶ್ಯಗಳು ಮನಸ್ಸಿಗೆ ತುಂಬಾ ಖುಷಿಯನ್ನು ನೀಡುತ್ತವೆ. ಸದ್ಯ ಅಂತಹದೊಂದು ವಿಡಿಯೋ ಇದೀಗ ವೈರಲ್‌ ಆಗಿದ್ದು, ಗೋವುಗಳ ಮುಂದೆ ನವಿಲೊಂದು ಗರಿ ಬಿಚ್ಚಿ ನಿಂತಿರುವ ದೃಶ್ಯವನ್ನು ಕಂಡು ನಿಜವಾಗಿಯೂ ಈ ದೃಶ್ಯ ದ್ವಾಪರ ಯುಗವನ್ನು ನೆನಪಿಸುವಂತಿದೆ ಎಂದು ನೆಟ್ಟಿಗರು ಹೇಳಿದ್ದಾರೆ.

Viral Video: ದ್ವಾಪರ ಯುಗವನ್ನು ನೆನಪಿಸುವಂತಿದೆ ಈ ದೃಶ್ಯ, ಗೋವಿನ ಮುಂದೆ ಗರಿ ಬಿಚ್ಚಿ ಕುಣಿದ ಮಯೂರಿ
ವೈರಲ್​​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Jul 17, 2024 | 4:19 PM

Share

ಹಳ್ಳಿ ಜೀವನವೇ ಬಲು ಸೊಗಸು. ಹಚ್ಚ ಹಸಿರಿನ ವಾತಾವರಣ, ನೀಲಿ ಅಕಾಶ, ಸ್ವಚ್ಛಂದವಾಗಿ ಹಾರಾಡುವ ಹಕ್ಕಿಗಳು, ಅಲ್ಲಲ್ಲಿ ಓಡಾಡುವ ದನ ಕರು, ಜಾನುವಾರುಗಳು ಹಳ್ಳಿ ಜೀವನದ ಈ ಎಲ್ಲಾ ಸುಂದರ ದೃಶ್ಯಗಳು ಮನಸ್ಸಿಗೆ ತುಂಬಾ ಸಂತೋಷವನ್ನು ನೀಡುತ್ತದೆ. ಹಳ್ಳಿಯೆಂದರೆ ಸ್ವರ್ಗಕ್ಕೆ ಸಮಾನವಾದುದು ಅಂತಾನೇ ಹೇಳಬಹುದು. ಇದಕ್ಕೆ ಸೂಕ್ತ ನಿದರ್ಶನದಂತಿರುವ ವಿಡಿಯೋವೊಂದು ಇದೀಗ ವೈರಲ್‌ ಆಗಿದ್ದು, ಸುಂದರ ಹಳ್ಳಿಯೊಂದರಲ್ಲಿ ಗೋವುಗಳ ಮುಂದೆ ನವಿಲೊಂದು ಸಂತೋಷದಿಂದ ಗರಿ ಬಿಚ್ಚಿ ಕುಣಿದ ಈ ದೃಶ್ಯವನ್ನು ಕಂಡು ನೆಟ್ಟಿಗರು ಮೂಕವಿಸ್ಮಿತರಾಗಿದ್ದಾರೆ.

ಈ ಕುರಿತ ಪೋಸ್ಟ್‌ ಒಂದನ್ನು cowsblike ಹೆಸರಿನ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವೈರಲ್‌ ವಿಡಿಯೋದಲ್ಲಿ ಬಲು ಸುಂದರವಾದ ಹಳ್ಳಿಯೊಂದರಲ್ಲಿ ಗೋವುಗಳೆರಡು ಮೇಯುತ್ತಾ ನಿಂತಿರುವ ದೃಶ್ಯವನ್ನು ಕಾಣಬಹುದು. ಅಲ್ಲಿಗೆ ಬಂದಂತಹ ಗಂಡು ನವಿಲೊಂದು ಬಹಳ ಖುಷಿಯಿಂದ ಗೋವುಗಳ ಮುಂದೆ ಗರಿ ಬಿಚ್ಚಿ ಕುಣಿದಿದೆ.

ಇದನ್ನೂ ಓದಿ: ಕಾಲುವೆಗೆ ಬಿದ್ದ ಯುವಕನ ಪ್ರಾಣ ರಕ್ಷಿಸಿದ ನೌಕಾಪಡೆಯ ನಿವೃತ್ತ ಅಧಿಕಾರಿ

ವೈರಲ್​​​ ವಿಡಿಯೋ ಇಲ್ಲಿದೆ ನೋಡಿ:

View this post on Instagram

A post shared by Cowsblike (@cowsblike)

ಕೆಲ ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 14.2 ಮಿಲಿಯನ್‌ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಈ ಮನಮೋಹಕ ದೃಶ್ಯವನ್ನು ಕಂಡು ನಿಜಕ್ಕೂ ಒಂದು ಬಾರಿ ದ್ವಾಪರ ಯುಗಕ್ಕೆ ಹೋಗಿ ಬಂದಂತಾಯಿತುʼ ಎಂದು ಕಾಮೆಂಟ್‌ ಮಾಡಿದ್ದಾರೆ. ಇನ್ನೊಬ್ಬ ಬಳಕೆದಾರರು ʼಅರರೇ ಎಂತಹ ಸುಂದರ ದೃಶ್ಯವಿದುʼ ಎಂದು ಹೇಳಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು