Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ನಮಗೆ 7-8 ಮಕ್ಕಳು ಇದ್ದಾರೆ ಆದ್ರೆ ಯಾಕೆ ಸರ್ಕಾರ ನಮ್ಗೆ ಕೆಲಸ ಕೊಡ್ತಿಲ್ಲ ಎಂದ ಆಸಾಮಿ; ವಿಡಿಯೋ ವೈರಲ್‌

ಇದೀಗ ಇಲ್ಲೊಂದು ವಿಡಿಯೋ ಸಖತ್‌ ವೈರಲ್‌ ಆಗುತ್ತಿದ್ದು, ನಾವು 8 ಜನ ಅಣ್ಣತಮ್ಮಂದಿರಿದ್ದು, ನಮ್ಗೆ ಒಬ್ಬಬ್ಬರಿಗೆ 7 ರಿಂದ 8 ಮಕ್ಕಳು ಇದ್ದಾರೆ, ಅವರನ್ನು ಸಾಕಲು ತುಂಬಾನೇ ಕಷ್ಟ ಪಡ್ತಿದ್ದೇವೆ. ಇಷ್ಟೊಂದು ಮಕ್ಕಳಿರುವಾಗ ಸರ್ಕಾರ ಯಾಕೆ ನಮ್ಗೆ ಕೆಲಸ ಕೊಡ್ತಿಲ್ಲ ಎಂದು ವ್ಯಕ್ತಿಯೊಬ್ಬ ರಿಪೋರ್ಟರ್‌ ಬಳಿ ತನ್ನ ಅಳಲನ್ನು ತೋಡಿಕೊಂಡಿದ್ದಾನೆ. ಈತನ ಈ ಮಾತನ್ನು ನೆಟ್ಟಿಗರು ತಬ್ಬಿಬ್ಬಾಗಿದ್ದಾರೆ.

Follow us
ಮಾಲಾಶ್ರೀ ಅಂಚನ್​
| Updated By: ಅಕ್ಷತಾ ವರ್ಕಾಡಿ

Updated on: Nov 10, 2024 | 5:23 PM

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುವ ಕೆಲವೊಂದು ವಿಡಿಯೋಗಳು ಚರ್ಚೆಯನ್ನು ಹುಟ್ಟು ಹಾಕುತ್ತವೆ. ಇದೀಗ ಇಲ್ಲೊಂದು ಅಂತಹದ್ದೇ ಚರ್ಚಾಸ್ಪದ ವಿಡಿಯೋವೊಂದು ವೈರಲ್‌ ಆಗಿದ್ದು, ವ್ಯಕ್ತಿಯೊಬ್ಬ ನಾವು 8 ಜನ ಅಣ್ಣ ತಮ್ಮಂದಿರಿದ್ದು, ನಮ್ಗೆ ಒಬ್ಬರಿಗೆ 7 ರಿಂದ 8 ಮಕ್ಕಳಿದ್ದಾರೆ, ಆ ಮಕ್ಳನ್ನು ಸಾಕೋಕೆ ತುಂಬಾನೇ ಕಷ್ಟಪಡ್ತಿದ್ದೇವೆ. ಹೀಗಿರುವಾಗ ಸರ್ಕಾರ ಯಾಕೆ ನಮ್ಗೆ ಕೆಲಸ ಕೊಡ್ತಿಲ್ಲ ಎಂದು ರಿಪೋರ್ಟರ್‌ ಬಳಿ ತನ್ನ ಅಳಲನ್ನು ತೋಡಿಕೊಂಡಿದ್ದಾನೆ. ತರ್ಕವೇ ಇಲ್ಲದ ಈತನ ಮಾತನನ್ನು ಕೇಳಿ ನೆಟ್ಟಿಗರು ಫುಲ್‌ ಶಾಕ್‌ ಆಗಿದ್ದಾರೆ.

ಪತ್ರಕರ್ತೆ ಅದಿತಿ ತ್ಯಾಗಿ ಅವರು ಮುಸ್ಲಿಂ ವ್ಯಕ್ತಿಯೊಬ್ಬನ ಬಳಿ ಮಾತನಾಡುವಾಗ ಆತ ನಾವು 8 ಜನ ಅಣ್ಣ ತಮ್ಮಂದಿರು. ನಮಗೆ ಒಬ್ಬಬ್ಬರಿಗೆ 7 ರಿಂದ 8 ಮಕ್ಕಳಿದ್ದಾರೆ. ನನ್ಗೆ 2 ಹೆಣ್ಣು ಮತ್ತು 5 ಗಂಡು ಮಕ್ಕಳಿದ್ದಾರೆ. ಈ ಮಕ್ಕಳನ್ನು ತುಂಬಾ ಕಷ್ಟಪಟ್ಟು ಸಾಕುತ್ತಿದ್ದೇವೆ ಹೀಗಿರುವಾಗ ಸರ್ಕಾರ ಯಾಕೆ ನಮ್ಗೆ ಯಾಕೆ ಕೆಲಸ ಕೊಡ್ತಿಲ್ಲ ಎಂದು ಪ್ರಶ್ನೆ ಕೇಳಿದ್ದಾನೆ. ಈ ಕುರಿತ ವಿಡಿಯೋವನ್ನು ರಿಶಿ ಬಾಗ್ರೀ (rishibagree) ಎಂಬವರು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದು, “ನಾವು 8 ಸಹೋದರರು ಮತ್ತು ಪ್ರತಿಯೊಬ್ಬ ಸಹೋದರನಿಗೂ 7-8 ಮಕ್ಕಳಿದ್ದಾರೆ. ಸರ್ಕಾರ ಯಾಕೆ ನಮಗೆ ಕೆಲಸ ಕೊಡುತ್ತಿಲ್ಲ???” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ.

ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಪತ್ರಕರ್ತೆ ಅದಿತಿ ತ್ಯಾಗಿ ಅವರು ಕುಟುಂಬವೊಂದರ ಅಣ್ಣ ತಮ್ಮಂದಿರ ಬಳಿ ಮಾತನಾಡುತ್ತಿರುವ ದೃಶ್ಯವನ್ನು ಕಾಣಬಹುದು. ಅದರಲ್ಲಿದ್ದ ವ್ಯಕ್ತಿಯೊಬ್ಬ ನಾವು 8 ಜನ ಅಣ್ಣತಮ್ಮಂದಿರು. ನಮಗೆ ಒಬ್ಬರಿಗೆ 7-8 ಜನ ಮಕ್ಕಳಿದ್ದಾರೆ. ನನಗೆ ದಿನಕ್ಕೆ 300 ರೂ. ಸಂಬಳ, ಈ ಸಂಬಳದಲ್ಲಿ ಏಳು ಮಕ್ಕಳನ್ನು ಸಾಕಲು ಆಗುತ್ತಾ? ಹೀಗಿರುವಾಗ ಸರ್ಕಾರ ಯಾಕೆ ನಮ್ಗೆ ಕೆಲಸ ಕೊಡ್ತಿಲ್ಲ ಎಂದು ಕೇಳಿದ್ದಾನೆ.

ಇದನ್ನೂ ಓದಿ: ನನ್ನ ಬಿಟ್ಟೋಗ್ಬೇಡಾ, ನಾನು ಬರ್ತೀನಿ ಅಮ್ಮಾ… ಮಾಲೀಕರೊಂದಿಗೆ ಬಸ್‌ ಏರಿದ ಶ್ವಾನ

ನವೆಂಬರ್‌ 9 ರಂದು ಹಂಚಿಕೊಳ್ಳಲಾದ ಈ ವಿಡಿಯೋ 5.4 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಮೊದಲು ಅಷ್ಟು ಮಕ್ಕಳನ್ನು ಹೆರುವುದನ್ನು ನಿಲ್ಲಿಸಿʼ ಎಂದು ಹೇಳಿದ್ದಾರೆ. ಮತ್ತೊಬ್ಬ ಬಳಕೆದಾರರು ʼಮಕ್ಕಳನ್ನು ಹೆತ್ತ ಮಾತ್ರಕ್ಕೆ ಕೆಲಸ ಸಿಗುವುದಿಲ್ಲ, ಕೆಲಸ ಮಾಡಲು ಸಮರ್ಥರಾಗಿರುವುದು ಕೂಡಾ ತುಂಬಾನೇ ಮುಖ್ಯʼ ಎಂದಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು