AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: ಬೆಂಗಳೂರು ಟ್ರಾಫಿಕ್​​ನಲ್ಲಿ ಸಿಲುಕಿ ಬೈಕ್​​​ನಲ್ಲಿಯೇ ಕುಳಿತು ಆಫೀಸ್ ಮೀಟಿಂಗ್​​​ಗೆ ಹಾಜರಾದ ವ್ಯಕ್ತಿ

ಬೆಂಗಳೂರಿನ ಟ್ರಾಫಿಕ್ ನಡುವೆ ಸಿಳುಕಿಕೊಂಡಿದ್ದ ದ್ವಿಚಕ್ರ ವಾಹನ ಸವಾರರೊಬ್ಬರು, ಟ್ರಾಫಿಕ್ ಮಧ್ಯೆಯೇ ತಮ್ಮ ಮೊಬೈಲ್ ಫೋನ್ ಮುಖಾಂತರ ಆನ್ಲೈನ್ ಕಾನ್ಫರೆನ್ಸ್ ಮೀಟಿಂಗ್​​​ಗೆ ಹಾಜರಾಗಿದ್ದಾರೆ. ಸದ್ಯಕ್ಕೆ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ.

Viral Post: ಬೆಂಗಳೂರು ಟ್ರಾಫಿಕ್​​ನಲ್ಲಿ ಸಿಲುಕಿ ಬೈಕ್​​​ನಲ್ಲಿಯೇ ಕುಳಿತು ಆಫೀಸ್ ಮೀಟಿಂಗ್​​​ಗೆ ಹಾಜರಾದ ವ್ಯಕ್ತಿ
ವೈರಲ್ ಫೋಟೋ
ಮಾಲಾಶ್ರೀ ಅಂಚನ್​
| Edited By: |

Updated on: Jun 13, 2023 | 11:56 AM

Share

ಬೆಂಗಳೂರು, ಮುಂಬೈನಂತಹ ಮಹಾನಗರಗಳಲ್ಲಿ ಟ್ರಾಫಿಕ್ ತಲೆನೋವು ಇದ್ದೇ ಇರುತ್ತದೆ. ಟ್ರಾಫಿಕ್​​ನಲ್ಲಿ ಸಿಲುಕಿಕೊಂಡಿದ್ದು ಆಫೀಸ್​​​ಗೆ ತಡವಾಗಿ ಹೋಗಲು ಅಥವಾ ಮೀಟಿಂಗ್​​​ಗಳಿಗೆ ತಡವಾಗಿ ಬರಲು ಸಾಧ್ಯವಿಲ್ಲ. ಹೇಗಾದರೂ ಸರಿ ಕೆಲಸ ಕಾರ್ಯಗಳನ್ನು ಸಮಯಕ್ಕೆ ಸರಿಯಾಗಿ ಮಾಡಲೇಬೇಕು. ಇನ್ನು ಸುದೀರ್ಘ ಸಮಯ ಟ್ರಾಫಿಕ್ ಜಾಮ್ ನಡುವೆ ಸಿಲುಕಿಕೊಂಡಿರುವಾಗ ಅನೇಕ ಜನರು ಸಮಯವನ್ನು ವ್ಯರ್ಥ ಮಾಡಲು ಬಯಸದೆ ಟ್ರಾಫಿಕ್​​ನಲ್ಲಿಯೇ ತಮ್ಮ ಲ್ಯಾಪ್ ಟಾಪ್, ಸ್ಮಾರ್ಟ್ ಫೋನ್​​ಗಳನ್ನು ಹೊರತೆಗೆದು ಆನ್ಲೈನ್​​ನಲ್ಲಿಯೇ ಕೆಲಸವನ್ನು ಮಾಡುತ್ತಾರೆ. ಅದೇ ರೀತಿ ಬೆಂಗಳೂರಿನ ಟ್ರಾಫಿಕ್​​​ನಲ್ಲಿ ಸಿಲುಕಿಕೊಂಡ ವ್ಯಕ್ತಿಯೊಬ್ಬರು ತಮ್ಮ ಸ್ಮಾರ್ಟ್ ಫೋನ್ ಮೂಲಕ ಆಫೀಸಿನ ಮೀಟಿಂಗ್​​ಗೆ ಹಾಜರಾಗಿದ್ದಾರೆ. ಅದೂ ಕೂಡಾ ತಮ್ಮ ದ್ವಿಚಕ್ರ ವಾಹನದ ಮೇಲೆ ಮೊಬೈಲ್ ಹೋಲ್ಡರ್ ಇಟ್ಟು ಅದರ ಮೇಲೆ ತಮ್ಮ ಮೊಬೈಲ್ ಇಟ್ಟು ಮೀಟಿಂಗ್​​ಗೆ ಹಾಜರಾಗಿದ್ದಾರೆ. ಈ ವೈರಲ್ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ವೈಭವ್ (@vaishah01) ಎಂಬವರು ವ್ಯಕ್ತಿಯೊಬ್ಬರು ಟ್ರಾಫಿಕ್ ತಲೆಬಿಸಿ ಮಧ್ಯೆ ಮೀಟಿಂಗ್​​​ಗೆ ಹಾಜರಾಗಿರುವ ಫೋಟೋವನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ವೈರಲ್ ಫೋಟೋದಲ್ಲಿ ಬೈಕ್​​​ನಲ್ಲಿ ಕುಳಿತಿದ್ದ ವ್ಯಕ್ತಿ ಬೈಕ್ ಕನ್ನಡಿಯ ಪಕ್ಕ ಮೊಬೈಲ್ ಹೋಲ್ಡರ್ ಇಟ್ಟು ಅದರ ಮೇಲೆ ತನ್ನ ಸ್ಮಾರ್ಟ್ ಫೋನ್ ಇಟ್ಟು ಆಫೀಸಿನ ಕಾನ್ಫರೆನ್ಸ್ ಮೀಟಿಂಗ್​​​ನಲ್ಲಿ ನಿರತವಾಗಿರುವುದನ್ನು ಕಾಣಬಹುದು.

ಇದನ್ನೂ ಓದಿ:Viral News: ವಿಶ್ವ ದಾಖಲೆ ಮಾಡಿದ ಸಾಮೂಹಿಕ ವಿವಾಹ, ದಾಂಪತ್ಯ ಜೀವನಕ್ಕೆ ಕಾಲಿಟ್ಟ 2,143 ಜೋಡಿಗಳು

ಜೂನ್ 9ರಂದು ಟ್ವಿಟರ್​​​ನಲ್ಲಿ ಹಂಚಿಕೊಳ್ಳಲಾದ ಈ ಫೋಟೋ ಹಲವು ವೀಕ್ಷಣೆಗಳನ್ನು ಹಾಗೂ ಲೈಕ್ಸ್​​ಗಳನ್ನು ಗಳಿಸಿದೆ. ಟ್ರಾಫಿಕ್ ದಟ್ಟಣೆಯ ನಗರಗಳಲ್ಲಂತೂ ಈ ತಲೆನೋವು ತಪ್ಪಿದ್ದಲ್ಲ ಎನ್ನುತ್ತಿದ್ದಾರೆ ನೆಟ್ಟಿಗರು.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್