AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: ಬೆಂಗಳೂರು ಟ್ರಾಫಿಕ್​​ನಲ್ಲಿ ಸಿಲುಕಿ ಬೈಕ್​​​ನಲ್ಲಿಯೇ ಕುಳಿತು ಆಫೀಸ್ ಮೀಟಿಂಗ್​​​ಗೆ ಹಾಜರಾದ ವ್ಯಕ್ತಿ

ಬೆಂಗಳೂರಿನ ಟ್ರಾಫಿಕ್ ನಡುವೆ ಸಿಳುಕಿಕೊಂಡಿದ್ದ ದ್ವಿಚಕ್ರ ವಾಹನ ಸವಾರರೊಬ್ಬರು, ಟ್ರಾಫಿಕ್ ಮಧ್ಯೆಯೇ ತಮ್ಮ ಮೊಬೈಲ್ ಫೋನ್ ಮುಖಾಂತರ ಆನ್ಲೈನ್ ಕಾನ್ಫರೆನ್ಸ್ ಮೀಟಿಂಗ್​​​ಗೆ ಹಾಜರಾಗಿದ್ದಾರೆ. ಸದ್ಯಕ್ಕೆ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ.

Viral Post: ಬೆಂಗಳೂರು ಟ್ರಾಫಿಕ್​​ನಲ್ಲಿ ಸಿಲುಕಿ ಬೈಕ್​​​ನಲ್ಲಿಯೇ ಕುಳಿತು ಆಫೀಸ್ ಮೀಟಿಂಗ್​​​ಗೆ ಹಾಜರಾದ ವ್ಯಕ್ತಿ
ವೈರಲ್ ಫೋಟೋ
ಮಾಲಾಶ್ರೀ ಅಂಚನ್​
| Edited By: |

Updated on: Jun 13, 2023 | 11:56 AM

Share

ಬೆಂಗಳೂರು, ಮುಂಬೈನಂತಹ ಮಹಾನಗರಗಳಲ್ಲಿ ಟ್ರಾಫಿಕ್ ತಲೆನೋವು ಇದ್ದೇ ಇರುತ್ತದೆ. ಟ್ರಾಫಿಕ್​​ನಲ್ಲಿ ಸಿಲುಕಿಕೊಂಡಿದ್ದು ಆಫೀಸ್​​​ಗೆ ತಡವಾಗಿ ಹೋಗಲು ಅಥವಾ ಮೀಟಿಂಗ್​​​ಗಳಿಗೆ ತಡವಾಗಿ ಬರಲು ಸಾಧ್ಯವಿಲ್ಲ. ಹೇಗಾದರೂ ಸರಿ ಕೆಲಸ ಕಾರ್ಯಗಳನ್ನು ಸಮಯಕ್ಕೆ ಸರಿಯಾಗಿ ಮಾಡಲೇಬೇಕು. ಇನ್ನು ಸುದೀರ್ಘ ಸಮಯ ಟ್ರಾಫಿಕ್ ಜಾಮ್ ನಡುವೆ ಸಿಲುಕಿಕೊಂಡಿರುವಾಗ ಅನೇಕ ಜನರು ಸಮಯವನ್ನು ವ್ಯರ್ಥ ಮಾಡಲು ಬಯಸದೆ ಟ್ರಾಫಿಕ್​​ನಲ್ಲಿಯೇ ತಮ್ಮ ಲ್ಯಾಪ್ ಟಾಪ್, ಸ್ಮಾರ್ಟ್ ಫೋನ್​​ಗಳನ್ನು ಹೊರತೆಗೆದು ಆನ್ಲೈನ್​​ನಲ್ಲಿಯೇ ಕೆಲಸವನ್ನು ಮಾಡುತ್ತಾರೆ. ಅದೇ ರೀತಿ ಬೆಂಗಳೂರಿನ ಟ್ರಾಫಿಕ್​​​ನಲ್ಲಿ ಸಿಲುಕಿಕೊಂಡ ವ್ಯಕ್ತಿಯೊಬ್ಬರು ತಮ್ಮ ಸ್ಮಾರ್ಟ್ ಫೋನ್ ಮೂಲಕ ಆಫೀಸಿನ ಮೀಟಿಂಗ್​​ಗೆ ಹಾಜರಾಗಿದ್ದಾರೆ. ಅದೂ ಕೂಡಾ ತಮ್ಮ ದ್ವಿಚಕ್ರ ವಾಹನದ ಮೇಲೆ ಮೊಬೈಲ್ ಹೋಲ್ಡರ್ ಇಟ್ಟು ಅದರ ಮೇಲೆ ತಮ್ಮ ಮೊಬೈಲ್ ಇಟ್ಟು ಮೀಟಿಂಗ್​​ಗೆ ಹಾಜರಾಗಿದ್ದಾರೆ. ಈ ವೈರಲ್ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ವೈಭವ್ (@vaishah01) ಎಂಬವರು ವ್ಯಕ್ತಿಯೊಬ್ಬರು ಟ್ರಾಫಿಕ್ ತಲೆಬಿಸಿ ಮಧ್ಯೆ ಮೀಟಿಂಗ್​​​ಗೆ ಹಾಜರಾಗಿರುವ ಫೋಟೋವನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ವೈರಲ್ ಫೋಟೋದಲ್ಲಿ ಬೈಕ್​​​ನಲ್ಲಿ ಕುಳಿತಿದ್ದ ವ್ಯಕ್ತಿ ಬೈಕ್ ಕನ್ನಡಿಯ ಪಕ್ಕ ಮೊಬೈಲ್ ಹೋಲ್ಡರ್ ಇಟ್ಟು ಅದರ ಮೇಲೆ ತನ್ನ ಸ್ಮಾರ್ಟ್ ಫೋನ್ ಇಟ್ಟು ಆಫೀಸಿನ ಕಾನ್ಫರೆನ್ಸ್ ಮೀಟಿಂಗ್​​​ನಲ್ಲಿ ನಿರತವಾಗಿರುವುದನ್ನು ಕಾಣಬಹುದು.

ಇದನ್ನೂ ಓದಿ:Viral News: ವಿಶ್ವ ದಾಖಲೆ ಮಾಡಿದ ಸಾಮೂಹಿಕ ವಿವಾಹ, ದಾಂಪತ್ಯ ಜೀವನಕ್ಕೆ ಕಾಲಿಟ್ಟ 2,143 ಜೋಡಿಗಳು

ಜೂನ್ 9ರಂದು ಟ್ವಿಟರ್​​​ನಲ್ಲಿ ಹಂಚಿಕೊಳ್ಳಲಾದ ಈ ಫೋಟೋ ಹಲವು ವೀಕ್ಷಣೆಗಳನ್ನು ಹಾಗೂ ಲೈಕ್ಸ್​​ಗಳನ್ನು ಗಳಿಸಿದೆ. ಟ್ರಾಫಿಕ್ ದಟ್ಟಣೆಯ ನಗರಗಳಲ್ಲಂತೂ ಈ ತಲೆನೋವು ತಪ್ಪಿದ್ದಲ್ಲ ಎನ್ನುತ್ತಿದ್ದಾರೆ ನೆಟ್ಟಿಗರು.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ