AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: ಬೆಂಗಳೂರು ಟ್ರಾಫಿಕ್​​ನಲ್ಲಿ ಸಿಲುಕಿ ಬೈಕ್​​​ನಲ್ಲಿಯೇ ಕುಳಿತು ಆಫೀಸ್ ಮೀಟಿಂಗ್​​​ಗೆ ಹಾಜರಾದ ವ್ಯಕ್ತಿ

ಬೆಂಗಳೂರಿನ ಟ್ರಾಫಿಕ್ ನಡುವೆ ಸಿಳುಕಿಕೊಂಡಿದ್ದ ದ್ವಿಚಕ್ರ ವಾಹನ ಸವಾರರೊಬ್ಬರು, ಟ್ರಾಫಿಕ್ ಮಧ್ಯೆಯೇ ತಮ್ಮ ಮೊಬೈಲ್ ಫೋನ್ ಮುಖಾಂತರ ಆನ್ಲೈನ್ ಕಾನ್ಫರೆನ್ಸ್ ಮೀಟಿಂಗ್​​​ಗೆ ಹಾಜರಾಗಿದ್ದಾರೆ. ಸದ್ಯಕ್ಕೆ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ.

Viral Post: ಬೆಂಗಳೂರು ಟ್ರಾಫಿಕ್​​ನಲ್ಲಿ ಸಿಲುಕಿ ಬೈಕ್​​​ನಲ್ಲಿಯೇ ಕುಳಿತು ಆಫೀಸ್ ಮೀಟಿಂಗ್​​​ಗೆ ಹಾಜರಾದ ವ್ಯಕ್ತಿ
ವೈರಲ್ ಫೋಟೋ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Jun 13, 2023 | 11:56 AM

ಬೆಂಗಳೂರು, ಮುಂಬೈನಂತಹ ಮಹಾನಗರಗಳಲ್ಲಿ ಟ್ರಾಫಿಕ್ ತಲೆನೋವು ಇದ್ದೇ ಇರುತ್ತದೆ. ಟ್ರಾಫಿಕ್​​ನಲ್ಲಿ ಸಿಲುಕಿಕೊಂಡಿದ್ದು ಆಫೀಸ್​​​ಗೆ ತಡವಾಗಿ ಹೋಗಲು ಅಥವಾ ಮೀಟಿಂಗ್​​​ಗಳಿಗೆ ತಡವಾಗಿ ಬರಲು ಸಾಧ್ಯವಿಲ್ಲ. ಹೇಗಾದರೂ ಸರಿ ಕೆಲಸ ಕಾರ್ಯಗಳನ್ನು ಸಮಯಕ್ಕೆ ಸರಿಯಾಗಿ ಮಾಡಲೇಬೇಕು. ಇನ್ನು ಸುದೀರ್ಘ ಸಮಯ ಟ್ರಾಫಿಕ್ ಜಾಮ್ ನಡುವೆ ಸಿಲುಕಿಕೊಂಡಿರುವಾಗ ಅನೇಕ ಜನರು ಸಮಯವನ್ನು ವ್ಯರ್ಥ ಮಾಡಲು ಬಯಸದೆ ಟ್ರಾಫಿಕ್​​ನಲ್ಲಿಯೇ ತಮ್ಮ ಲ್ಯಾಪ್ ಟಾಪ್, ಸ್ಮಾರ್ಟ್ ಫೋನ್​​ಗಳನ್ನು ಹೊರತೆಗೆದು ಆನ್ಲೈನ್​​ನಲ್ಲಿಯೇ ಕೆಲಸವನ್ನು ಮಾಡುತ್ತಾರೆ. ಅದೇ ರೀತಿ ಬೆಂಗಳೂರಿನ ಟ್ರಾಫಿಕ್​​​ನಲ್ಲಿ ಸಿಲುಕಿಕೊಂಡ ವ್ಯಕ್ತಿಯೊಬ್ಬರು ತಮ್ಮ ಸ್ಮಾರ್ಟ್ ಫೋನ್ ಮೂಲಕ ಆಫೀಸಿನ ಮೀಟಿಂಗ್​​ಗೆ ಹಾಜರಾಗಿದ್ದಾರೆ. ಅದೂ ಕೂಡಾ ತಮ್ಮ ದ್ವಿಚಕ್ರ ವಾಹನದ ಮೇಲೆ ಮೊಬೈಲ್ ಹೋಲ್ಡರ್ ಇಟ್ಟು ಅದರ ಮೇಲೆ ತಮ್ಮ ಮೊಬೈಲ್ ಇಟ್ಟು ಮೀಟಿಂಗ್​​ಗೆ ಹಾಜರಾಗಿದ್ದಾರೆ. ಈ ವೈರಲ್ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ವೈಭವ್ (@vaishah01) ಎಂಬವರು ವ್ಯಕ್ತಿಯೊಬ್ಬರು ಟ್ರಾಫಿಕ್ ತಲೆಬಿಸಿ ಮಧ್ಯೆ ಮೀಟಿಂಗ್​​​ಗೆ ಹಾಜರಾಗಿರುವ ಫೋಟೋವನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ವೈರಲ್ ಫೋಟೋದಲ್ಲಿ ಬೈಕ್​​​ನಲ್ಲಿ ಕುಳಿತಿದ್ದ ವ್ಯಕ್ತಿ ಬೈಕ್ ಕನ್ನಡಿಯ ಪಕ್ಕ ಮೊಬೈಲ್ ಹೋಲ್ಡರ್ ಇಟ್ಟು ಅದರ ಮೇಲೆ ತನ್ನ ಸ್ಮಾರ್ಟ್ ಫೋನ್ ಇಟ್ಟು ಆಫೀಸಿನ ಕಾನ್ಫರೆನ್ಸ್ ಮೀಟಿಂಗ್​​​ನಲ್ಲಿ ನಿರತವಾಗಿರುವುದನ್ನು ಕಾಣಬಹುದು.

ಇದನ್ನೂ ಓದಿ:Viral News: ವಿಶ್ವ ದಾಖಲೆ ಮಾಡಿದ ಸಾಮೂಹಿಕ ವಿವಾಹ, ದಾಂಪತ್ಯ ಜೀವನಕ್ಕೆ ಕಾಲಿಟ್ಟ 2,143 ಜೋಡಿಗಳು

ಜೂನ್ 9ರಂದು ಟ್ವಿಟರ್​​​ನಲ್ಲಿ ಹಂಚಿಕೊಳ್ಳಲಾದ ಈ ಫೋಟೋ ಹಲವು ವೀಕ್ಷಣೆಗಳನ್ನು ಹಾಗೂ ಲೈಕ್ಸ್​​ಗಳನ್ನು ಗಳಿಸಿದೆ. ಟ್ರಾಫಿಕ್ ದಟ್ಟಣೆಯ ನಗರಗಳಲ್ಲಂತೂ ಈ ತಲೆನೋವು ತಪ್ಪಿದ್ದಲ್ಲ ಎನ್ನುತ್ತಿದ್ದಾರೆ ನೆಟ್ಟಿಗರು.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ