AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: ಬೆಂಗಳೂರು ಟ್ರಾಫಿಕ್​​ನಲ್ಲಿ ಸಿಲುಕಿ ಬೈಕ್​​​ನಲ್ಲಿಯೇ ಕುಳಿತು ಆಫೀಸ್ ಮೀಟಿಂಗ್​​​ಗೆ ಹಾಜರಾದ ವ್ಯಕ್ತಿ

ಬೆಂಗಳೂರಿನ ಟ್ರಾಫಿಕ್ ನಡುವೆ ಸಿಳುಕಿಕೊಂಡಿದ್ದ ದ್ವಿಚಕ್ರ ವಾಹನ ಸವಾರರೊಬ್ಬರು, ಟ್ರಾಫಿಕ್ ಮಧ್ಯೆಯೇ ತಮ್ಮ ಮೊಬೈಲ್ ಫೋನ್ ಮುಖಾಂತರ ಆನ್ಲೈನ್ ಕಾನ್ಫರೆನ್ಸ್ ಮೀಟಿಂಗ್​​​ಗೆ ಹಾಜರಾಗಿದ್ದಾರೆ. ಸದ್ಯಕ್ಕೆ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ.

Viral Post: ಬೆಂಗಳೂರು ಟ್ರಾಫಿಕ್​​ನಲ್ಲಿ ಸಿಲುಕಿ ಬೈಕ್​​​ನಲ್ಲಿಯೇ ಕುಳಿತು ಆಫೀಸ್ ಮೀಟಿಂಗ್​​​ಗೆ ಹಾಜರಾದ ವ್ಯಕ್ತಿ
ವೈರಲ್ ಫೋಟೋ
ಮಾಲಾಶ್ರೀ ಅಂಚನ್​
| Edited By: |

Updated on: Jun 13, 2023 | 11:56 AM

Share

ಬೆಂಗಳೂರು, ಮುಂಬೈನಂತಹ ಮಹಾನಗರಗಳಲ್ಲಿ ಟ್ರಾಫಿಕ್ ತಲೆನೋವು ಇದ್ದೇ ಇರುತ್ತದೆ. ಟ್ರಾಫಿಕ್​​ನಲ್ಲಿ ಸಿಲುಕಿಕೊಂಡಿದ್ದು ಆಫೀಸ್​​​ಗೆ ತಡವಾಗಿ ಹೋಗಲು ಅಥವಾ ಮೀಟಿಂಗ್​​​ಗಳಿಗೆ ತಡವಾಗಿ ಬರಲು ಸಾಧ್ಯವಿಲ್ಲ. ಹೇಗಾದರೂ ಸರಿ ಕೆಲಸ ಕಾರ್ಯಗಳನ್ನು ಸಮಯಕ್ಕೆ ಸರಿಯಾಗಿ ಮಾಡಲೇಬೇಕು. ಇನ್ನು ಸುದೀರ್ಘ ಸಮಯ ಟ್ರಾಫಿಕ್ ಜಾಮ್ ನಡುವೆ ಸಿಲುಕಿಕೊಂಡಿರುವಾಗ ಅನೇಕ ಜನರು ಸಮಯವನ್ನು ವ್ಯರ್ಥ ಮಾಡಲು ಬಯಸದೆ ಟ್ರಾಫಿಕ್​​ನಲ್ಲಿಯೇ ತಮ್ಮ ಲ್ಯಾಪ್ ಟಾಪ್, ಸ್ಮಾರ್ಟ್ ಫೋನ್​​ಗಳನ್ನು ಹೊರತೆಗೆದು ಆನ್ಲೈನ್​​ನಲ್ಲಿಯೇ ಕೆಲಸವನ್ನು ಮಾಡುತ್ತಾರೆ. ಅದೇ ರೀತಿ ಬೆಂಗಳೂರಿನ ಟ್ರಾಫಿಕ್​​​ನಲ್ಲಿ ಸಿಲುಕಿಕೊಂಡ ವ್ಯಕ್ತಿಯೊಬ್ಬರು ತಮ್ಮ ಸ್ಮಾರ್ಟ್ ಫೋನ್ ಮೂಲಕ ಆಫೀಸಿನ ಮೀಟಿಂಗ್​​ಗೆ ಹಾಜರಾಗಿದ್ದಾರೆ. ಅದೂ ಕೂಡಾ ತಮ್ಮ ದ್ವಿಚಕ್ರ ವಾಹನದ ಮೇಲೆ ಮೊಬೈಲ್ ಹೋಲ್ಡರ್ ಇಟ್ಟು ಅದರ ಮೇಲೆ ತಮ್ಮ ಮೊಬೈಲ್ ಇಟ್ಟು ಮೀಟಿಂಗ್​​ಗೆ ಹಾಜರಾಗಿದ್ದಾರೆ. ಈ ವೈರಲ್ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ವೈಭವ್ (@vaishah01) ಎಂಬವರು ವ್ಯಕ್ತಿಯೊಬ್ಬರು ಟ್ರಾಫಿಕ್ ತಲೆಬಿಸಿ ಮಧ್ಯೆ ಮೀಟಿಂಗ್​​​ಗೆ ಹಾಜರಾಗಿರುವ ಫೋಟೋವನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ವೈರಲ್ ಫೋಟೋದಲ್ಲಿ ಬೈಕ್​​​ನಲ್ಲಿ ಕುಳಿತಿದ್ದ ವ್ಯಕ್ತಿ ಬೈಕ್ ಕನ್ನಡಿಯ ಪಕ್ಕ ಮೊಬೈಲ್ ಹೋಲ್ಡರ್ ಇಟ್ಟು ಅದರ ಮೇಲೆ ತನ್ನ ಸ್ಮಾರ್ಟ್ ಫೋನ್ ಇಟ್ಟು ಆಫೀಸಿನ ಕಾನ್ಫರೆನ್ಸ್ ಮೀಟಿಂಗ್​​​ನಲ್ಲಿ ನಿರತವಾಗಿರುವುದನ್ನು ಕಾಣಬಹುದು.

ಇದನ್ನೂ ಓದಿ:Viral News: ವಿಶ್ವ ದಾಖಲೆ ಮಾಡಿದ ಸಾಮೂಹಿಕ ವಿವಾಹ, ದಾಂಪತ್ಯ ಜೀವನಕ್ಕೆ ಕಾಲಿಟ್ಟ 2,143 ಜೋಡಿಗಳು

ಜೂನ್ 9ರಂದು ಟ್ವಿಟರ್​​​ನಲ್ಲಿ ಹಂಚಿಕೊಳ್ಳಲಾದ ಈ ಫೋಟೋ ಹಲವು ವೀಕ್ಷಣೆಗಳನ್ನು ಹಾಗೂ ಲೈಕ್ಸ್​​ಗಳನ್ನು ಗಳಿಸಿದೆ. ಟ್ರಾಫಿಕ್ ದಟ್ಟಣೆಯ ನಗರಗಳಲ್ಲಂತೂ ಈ ತಲೆನೋವು ತಪ್ಪಿದ್ದಲ್ಲ ಎನ್ನುತ್ತಿದ್ದಾರೆ ನೆಟ್ಟಿಗರು.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!