AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: ಬೆಂಗಳೂರು ಟ್ರಾಫಿಕ್​​ನಲ್ಲಿ ಸಿಲುಕಿ ಬೈಕ್​​​ನಲ್ಲಿಯೇ ಕುಳಿತು ಆಫೀಸ್ ಮೀಟಿಂಗ್​​​ಗೆ ಹಾಜರಾದ ವ್ಯಕ್ತಿ

ಬೆಂಗಳೂರಿನ ಟ್ರಾಫಿಕ್ ನಡುವೆ ಸಿಳುಕಿಕೊಂಡಿದ್ದ ದ್ವಿಚಕ್ರ ವಾಹನ ಸವಾರರೊಬ್ಬರು, ಟ್ರಾಫಿಕ್ ಮಧ್ಯೆಯೇ ತಮ್ಮ ಮೊಬೈಲ್ ಫೋನ್ ಮುಖಾಂತರ ಆನ್ಲೈನ್ ಕಾನ್ಫರೆನ್ಸ್ ಮೀಟಿಂಗ್​​​ಗೆ ಹಾಜರಾಗಿದ್ದಾರೆ. ಸದ್ಯಕ್ಕೆ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ.

Viral Post: ಬೆಂಗಳೂರು ಟ್ರಾಫಿಕ್​​ನಲ್ಲಿ ಸಿಲುಕಿ ಬೈಕ್​​​ನಲ್ಲಿಯೇ ಕುಳಿತು ಆಫೀಸ್ ಮೀಟಿಂಗ್​​​ಗೆ ಹಾಜರಾದ ವ್ಯಕ್ತಿ
ವೈರಲ್ ಫೋಟೋ
ಮಾಲಾಶ್ರೀ ಅಂಚನ್​
| Edited By: |

Updated on: Jun 13, 2023 | 11:56 AM

Share

ಬೆಂಗಳೂರು, ಮುಂಬೈನಂತಹ ಮಹಾನಗರಗಳಲ್ಲಿ ಟ್ರಾಫಿಕ್ ತಲೆನೋವು ಇದ್ದೇ ಇರುತ್ತದೆ. ಟ್ರಾಫಿಕ್​​ನಲ್ಲಿ ಸಿಲುಕಿಕೊಂಡಿದ್ದು ಆಫೀಸ್​​​ಗೆ ತಡವಾಗಿ ಹೋಗಲು ಅಥವಾ ಮೀಟಿಂಗ್​​​ಗಳಿಗೆ ತಡವಾಗಿ ಬರಲು ಸಾಧ್ಯವಿಲ್ಲ. ಹೇಗಾದರೂ ಸರಿ ಕೆಲಸ ಕಾರ್ಯಗಳನ್ನು ಸಮಯಕ್ಕೆ ಸರಿಯಾಗಿ ಮಾಡಲೇಬೇಕು. ಇನ್ನು ಸುದೀರ್ಘ ಸಮಯ ಟ್ರಾಫಿಕ್ ಜಾಮ್ ನಡುವೆ ಸಿಲುಕಿಕೊಂಡಿರುವಾಗ ಅನೇಕ ಜನರು ಸಮಯವನ್ನು ವ್ಯರ್ಥ ಮಾಡಲು ಬಯಸದೆ ಟ್ರಾಫಿಕ್​​ನಲ್ಲಿಯೇ ತಮ್ಮ ಲ್ಯಾಪ್ ಟಾಪ್, ಸ್ಮಾರ್ಟ್ ಫೋನ್​​ಗಳನ್ನು ಹೊರತೆಗೆದು ಆನ್ಲೈನ್​​ನಲ್ಲಿಯೇ ಕೆಲಸವನ್ನು ಮಾಡುತ್ತಾರೆ. ಅದೇ ರೀತಿ ಬೆಂಗಳೂರಿನ ಟ್ರಾಫಿಕ್​​​ನಲ್ಲಿ ಸಿಲುಕಿಕೊಂಡ ವ್ಯಕ್ತಿಯೊಬ್ಬರು ತಮ್ಮ ಸ್ಮಾರ್ಟ್ ಫೋನ್ ಮೂಲಕ ಆಫೀಸಿನ ಮೀಟಿಂಗ್​​ಗೆ ಹಾಜರಾಗಿದ್ದಾರೆ. ಅದೂ ಕೂಡಾ ತಮ್ಮ ದ್ವಿಚಕ್ರ ವಾಹನದ ಮೇಲೆ ಮೊಬೈಲ್ ಹೋಲ್ಡರ್ ಇಟ್ಟು ಅದರ ಮೇಲೆ ತಮ್ಮ ಮೊಬೈಲ್ ಇಟ್ಟು ಮೀಟಿಂಗ್​​ಗೆ ಹಾಜರಾಗಿದ್ದಾರೆ. ಈ ವೈರಲ್ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ವೈಭವ್ (@vaishah01) ಎಂಬವರು ವ್ಯಕ್ತಿಯೊಬ್ಬರು ಟ್ರಾಫಿಕ್ ತಲೆಬಿಸಿ ಮಧ್ಯೆ ಮೀಟಿಂಗ್​​​ಗೆ ಹಾಜರಾಗಿರುವ ಫೋಟೋವನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ವೈರಲ್ ಫೋಟೋದಲ್ಲಿ ಬೈಕ್​​​ನಲ್ಲಿ ಕುಳಿತಿದ್ದ ವ್ಯಕ್ತಿ ಬೈಕ್ ಕನ್ನಡಿಯ ಪಕ್ಕ ಮೊಬೈಲ್ ಹೋಲ್ಡರ್ ಇಟ್ಟು ಅದರ ಮೇಲೆ ತನ್ನ ಸ್ಮಾರ್ಟ್ ಫೋನ್ ಇಟ್ಟು ಆಫೀಸಿನ ಕಾನ್ಫರೆನ್ಸ್ ಮೀಟಿಂಗ್​​​ನಲ್ಲಿ ನಿರತವಾಗಿರುವುದನ್ನು ಕಾಣಬಹುದು.

ಇದನ್ನೂ ಓದಿ:Viral News: ವಿಶ್ವ ದಾಖಲೆ ಮಾಡಿದ ಸಾಮೂಹಿಕ ವಿವಾಹ, ದಾಂಪತ್ಯ ಜೀವನಕ್ಕೆ ಕಾಲಿಟ್ಟ 2,143 ಜೋಡಿಗಳು

ಜೂನ್ 9ರಂದು ಟ್ವಿಟರ್​​​ನಲ್ಲಿ ಹಂಚಿಕೊಳ್ಳಲಾದ ಈ ಫೋಟೋ ಹಲವು ವೀಕ್ಷಣೆಗಳನ್ನು ಹಾಗೂ ಲೈಕ್ಸ್​​ಗಳನ್ನು ಗಳಿಸಿದೆ. ಟ್ರಾಫಿಕ್ ದಟ್ಟಣೆಯ ನಗರಗಳಲ್ಲಂತೂ ಈ ತಲೆನೋವು ತಪ್ಪಿದ್ದಲ್ಲ ಎನ್ನುತ್ತಿದ್ದಾರೆ ನೆಟ್ಟಿಗರು.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಜಿಬಿಎ ಚುನಾವಣೆಗೆ ಕಾಲಾವಕಾಶ ವಿಸ್ತರಣೆಗೆ ಮನವಿ: ಸುಪ್ರೀಂ​ಗೆ ಸರ್ಕಾರ ಅರ್ಜಿ
ಜಿಬಿಎ ಚುನಾವಣೆಗೆ ಕಾಲಾವಕಾಶ ವಿಸ್ತರಣೆಗೆ ಮನವಿ: ಸುಪ್ರೀಂ​ಗೆ ಸರ್ಕಾರ ಅರ್ಜಿ
ಡಿಕೆಶಿ ಸಿಟಿ ರೌಂಡ್ಸ್: ಫುಟ್​ಪಾತ್ ತೆರವು ವೀಕ್ಷಿಸಿ ಹೇಳಿದ್ದೇನು ನೋಡಿ
ಡಿಕೆಶಿ ಸಿಟಿ ರೌಂಡ್ಸ್: ಫುಟ್​ಪಾತ್ ತೆರವು ವೀಕ್ಷಿಸಿ ಹೇಳಿದ್ದೇನು ನೋಡಿ
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ