AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಬ್ಬರಿಗೂ ಹಸಿವು, ದೇವರಂತೆ ಬಂದು ಅಜ್ಜಿ, ಗೋವಿನ ಹಸಿವು ನೀಗಿಸಿದ ವ್ಯಕ್ತಿ

ಕೆಲವರು ಏನು ಪ್ರತಿಫಲ ಅಪೇಕ್ಷಿಸದೇ ಇನ್ನೊಬ್ಬರಿಗೆ ಸಹಾಯ ಮಾಡುತ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಇಂತಹ ಕೆಲವು ವಿಡಿಯೋಗಳು ಮನಸ್ಸಿಗೆ ತುಂಬಾನೇ ಹತ್ತಿರವಾಗುತ್ತದೆ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ವ್ಯಕ್ತಿಯೊಬ್ಬನು ದುಡಿಯುವ ಕೈಗೆ ಆಸರೆಯಾಗದ್ದು, ಹಸಿದ ಗೋವಿಗೆ ಅನ್ನದಾತನಾಗಿದ್ದು, ಅದರಲ್ಲೇ ಸಂತೋಷ ಕಂಡುಕೊಂಡಿದ್ದಾನೆ. ಈ ವಿಡಿಯೋವೊಂದು ವೈರಲ್ ಆಗುತ್ತಿದ್ದಂತೆ ಬಳಕೆದಾರರು ಈ ವ್ಯಕ್ತಿಯ ಹೃದಯಶ್ರೀಮಂತಿಕೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇಬ್ಬರಿಗೂ ಹಸಿವು, ದೇವರಂತೆ ಬಂದು ಅಜ್ಜಿ, ಗೋವಿನ ಹಸಿವು ನೀಗಿಸಿದ ವ್ಯಕ್ತಿ
ವೈರಲ್ ವಿಡಿಯೋImage Credit source: Instagram
ಸಾಯಿನಂದಾ
|

Updated on: May 01, 2025 | 3:14 PM

Share

ಈಗಿನ ಕಾಲದಲ್ಲಿ ಮಾನವೀಯತೆ (humanity) ಹಾಗೂ ಇನ್ನೊಬ್ಬರ ಕಷ್ಟಕ್ಕೆ ಮಿಡಿಯುವ ವ್ಯಕ್ತಿಗಳನ್ನು ನೋಡುವುದೇ ಕಷ್ಟ. ಒಬ್ಬರ ಹಸಿವನ್ನು ನೀಗಿಸುವುದು ಹಾಗೂ ಮುಖದಲ್ಲಿ ನಗು ತರಿಸುವುದು ಅಷ್ಟು ಸುಲಭವಲ್ಲ. ಈಗಿನ ಕಾಲದಲ್ಲಿ ಎಲ್ಲರಿಗೂ ಇಂತಹ ಮನಸ್ಸು ಇರುವುದಿಲ್ಲ. ಆದರೆ ಕಷ್ಟಕ್ಕೆ ಮರುಗುವ, ಇನ್ನೊಬ್ಬರಿಗೆ ಸಾಹಸ ಮಾಡುವ ವ್ಯಕ್ತಿಗಳನ್ನು ಕಂಡಾಗ ನಿಜಕ್ಕೂ ಖುಷಿಯಾಗುತ್ತದೆ. ಇದಕ್ಕೆ ಉದಾಹರಣೆ ಎನ್ನುವಂತಹ ವಿಡಿಯೋವೊಂದು ಸೋಶಿಯಲ್ ಮೀಡಿಯಾ (social media) ದಲ್ಲಿ ವೈರಲ್ ಆಗಿದ್ದು ಇಲ್ಲೊಬ್ಬ ಮಹಾನುಭಾವ ಗೋವಿ (cow) ನ ಹಸಿವನ್ನು ನೀಗಿಸಿ, ಹಿರಿ ಜೀವಕ್ಕೆ ಆಸರೆಯಾಗುವ ಮೂಲಕ ಅಜ್ಜಿಯ ಮುಖದಲ್ಲಿ ನಗುವನ್ನು ಮೂಡಿಸಿದ್ದಾನೆ. ಈ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಬಳಕೆದಾರರು ಈ ವ್ಯಕ್ತಿಯೂ ಗುಣವನ್ನು ಕೊಂಡಾಡಿದ್ದಾರೆ.

iamhussainmansuri ಹೆಸರಿನ ಖಾತೆಯಲ್ಲಿ ವಿಡಿಯೋವನ್ನು ಶೇರ್ ಮಾಡಿಕೊಳ್ಳಲಾಗಿದ್ದು, ಈ ವಿಡಿಯೋದಲ್ಲಿ ವ್ಯಕ್ತಿಯೊಬ್ಬನು ಕ್ಯಾರೆಟ್ ತಿನ್ನುತ್ತಾ ನಿಂತಿರುವುದನ್ನು ನೋಡಬಹುದು. ಆ ಬಳಿಕ ಗೋವೊಂದು ಈತನ ಬಳಿ ಬಂದು ಕೈಯಲ್ಲಿದ್ದ ಕ್ಯಾರೆಟ್ ತಿಂದಿದೆ. ತದನಂತರದಲ್ಲಿ ರಸ್ತೆಯ ಬಳಿ ಕ್ಯಾರೆಟ್ ಮಾರಾಟ ಮಾಡುತ್ತಿದ್ದ ಅಜ್ಜಿಯ ಬಳಿ ಹೋಗಿದ್ದು ಆಕೆಯ ಬಳಿಯಿದ್ದ ಎಲ್ಲಾ ಕ್ಯಾರೆಟನ್ನು ತಾನೇ ಖರೀದಿಸಿದ್ದಾನೆ. ಅಜ್ಜಿಯ ಕೈಗೆ ಒಂದಿಷ್ಟು ಹಣವನ್ನು ಇಟ್ಟು ಅಲ್ಲಿಂದ ಹೊರಟಿದ್ದಾನೆ. ತದನಂತರದಲ್ಲಿ ತಾನು ಖರೀದಿಸಿರುವ ಕ್ಯಾರೆಟ್ ಎಲ್ಲವನ್ನು ಅಲ್ಲೇ ಇದ್ದ ಹಸುಗಳಿಗೆ ತಿನ್ನಲು ಇಟ್ಟು ಅವುಗಳ ಹಸಿವನ್ನು ನೀಗಿಸಿರುವುದನ್ನು ನೀವಿಲ್ಲಿ ನೋಡಬಹುದು.

ಇದನ್ನೂ ಓದಿ
Image
ವಿಶ್ವದಲ್ಲೇ ಈ ವಿಮಾನ ನಿಲ್ದಾಣವು ದುಬಾರಿಯಾಗಲು ಕಾರಣಗಳು ಇವೆ ನೋಡಿ
Image
ಹೆಂಡತಿ-ಮಕ್ಕಳನ್ನು ಹೆಗಲ ಮೇಲೆ ಹೊತ್ತುಕೊಂಡು ಅಪಾಯಕಾರಿ ಸ್ಟಂಟ್
Image
ಚಲಿಸುತ್ತಿದ್ದ ಬೈಕ್ ನಲ್ಲಿ ಸ್ಟಂಟ್‌ ಮಾಡಲು ಹೋಗಿ ರಸ್ತೆಗೆ ಬಿದ್ದ ಯುವಕ
Image
ಮಾಲ್​​​ನಲ್ಲಿ ಅಗ್ನಿಅವಘಡ, ಜೀವ ಉಳಿಸಿಕೊಳ್ಳಲು ಕಿಟಕಿಯಲ್ಲಿ ನೇತಾಡಿದ ಜನ

ಇದನ್ನೂ ಓದಿ :ಹೀಗೂ ಉಂಟೇ! ಗಂಡ ಗಡ್ಡ ಶೇವ್​ ಮಾಡಿಲ್ಲ ಎಂದು ಮೈದುನನ ಜತೆ ಓಡಿ ಹೋದ ಮಹಿಳೆ

ವೈರಲ್ ವಿಡಿಯೋ ಇಲ್ಲಿದೆ ನೋಡಿ

ಈ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಐದು ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದುಕೊಂಡಿದೆ. ಬಳಕೆದಾರರು ಈತನ ಮಾಡಿದ ಒಳ್ಳೆಯ ಕೆಲಸಕ್ಕೆ ಮೆಚ್ಚುಗೆಯ ಸುರಿಮಳೆಗೈದಿದ್ದಾರೆ. ಬಳಕೆದಾರರೊಬ್ಬರು, ‘ಪ್ರಾಣಿಗಳು ಒಳ್ಳೆಯ ವ್ಯಕ್ತಿಗಳನ್ನು ಬಹುಬೇಗನೇ ಗುರುತಿಸುತ್ತವೆ’ ಎಂದಿದ್ದಾರೆ. ಇನ್ನೊಬ್ಬರು, ‘ಇಂತಹ ವ್ಯಕ್ತಿಗಳನ್ನು ನೋಡಿದಾಗ ನಿಜಕ್ಕೂ ಖುಷಿಯಾಗುತ್ತದೆ. ಸ್ವಾರ್ಥಿಗಳ ಪ್ರಪಂಚದಲ್ಲಿ ಈ ವ್ಯಕ್ತಿ ಮಾಡುವ ಕೆಲಸಗಳು ಎಲ್ಲರಿಗೂ ಮಾದರಿ’ ಎಂದು ಕಾಮೆಂಟ್ ನಲ್ಲಿ ಬರೆದುಕೊಂಡಿದ್ದಾರೆ. ಮತ್ತೊರ್ವ ಬಳಕೆದಾರರು, ‘ಈ ಜಗತ್ತಿನ ಎಲ್ಲಾ ಗೌರವವು ನಿಮ್ಮಂತಹ ವ್ಯಕ್ತಿಗೆ ಸಿಗಬೇಕು’ ಎಂದಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಫೈನಲ್​ನಲ್ಲಿ ಸಿಎಸ್​​ಕೆ ದಾಖಲೆ ಮುರಿದ ಆರ್​ಸಿಬಿ
ಫೈನಲ್​ನಲ್ಲಿ ಸಿಎಸ್​​ಕೆ ದಾಖಲೆ ಮುರಿದ ಆರ್​ಸಿಬಿ
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ