AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಕರುವಿನ ಮೈ ಮೇಲಿನ ಉಣ್ಣೆಗಳನ್ನು ಹೆಕ್ಕಿ ತೆಗೆದ ಸಾಕು ನಾಯಿ

ಮನೆಯ ಮುದ್ದಿನ ಸಾಕು ಪ್ರಾಣಿಗಳ ನಡುವಿನ ಒಡನಾಟದ ವಿಡಿಯೋಗಳು ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಈ ದೃಶ್ಯ ನೋಡಿದ ಮೇಲೆ ನಿಮಗೂ ಹಾಗೆಯೇ ಅನಿಸದೇ ಇರದು. ಸಾಕುನಾಯಿಯೊಂದು ಕರುವಿನ ಮೈ ಮೇಲಿನ ಉಣ್ಣೆಗಳನ್ನು ಹೆಕ್ಕಿ ತೆಗೆಯುತ್ತಿರುವ ವಿಡಿಯೋ ಇದಾಗಿದೆ. ಪ್ರಾಣಿಗಳ ಶುದ್ಧ ಪ್ರೀತಿ ಕಂಡು ನೆಟ್ಟಿಗರು ಶಾಕ್ ಆಗಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಕರುವಿನ ಮೈ ಮೇಲಿನ ಉಣ್ಣೆಗಳನ್ನು ಹೆಕ್ಕಿ ತೆಗೆದ ಸಾಕು ನಾಯಿ
ವೈರಲ್‌ ವಿಡಿಯೋImage Credit source: Facebook
ಸಾಯಿನಂದಾ
|

Updated on:Feb 12, 2026 | 7:38 PM

Share

ಈ ಪ್ರಾಣಿಗಳಿಗೆ (animals) ಇರುವ ಬುದ್ಧಿ ಮನುಷ್ಯರಿಗಿಲ್ಲ. ಮನುಷ್ಯರಿಗಿಂತ ಈ ಪ್ರಾಣಿಗಳೇ ಲೇಸು ಎನ್ನುವುದಕ್ಕೆ ಸಾಕ್ಷಿಯಾಗಿದೆ ಈ ದೃಶ್ಯ. ಸಾಕು ನಾಯಿಯೊಂದು (pet dog) ಕರುವಿನ ಮೈ ಮೇಲಿರುವ ಉಣ್ಣೆಗಳನ್ನು ನಾಲಿಗೆಯಲ್ಲಿ ನೆಕ್ಕಿ, ಹೆಕ್ಕಿ ತೆಗೆಯುತ್ತಿರುವ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ಈ ಮುಗ್ಧ ಜೀವಿಗಳ ಬಾಂಧವ್ಯಕ್ಕೆ ಮನಸೋತಿದ್ದಾರೆ.

ಯುವರಾಜ್ ಹೆಗಡೆ ಮೇಗರವಳ್ಳಿ (Yuvraj Hegade Megarvalli) ಹೆಸರಿನ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋದ ಶೀರ್ಷಿಕೆಯಲ್ಲಿ ಶಿರುಪತಿ ಗ್ರಾಮದ ಚೇತನ್ ಮನೆಗೆ ಚಿಕಿತ್ಸೆಗೆ ಹೋದಾಗ ಕಂಡ ದೃಶ್ಯವಿದು. ಒಮ್ಮೆಲೇ ನೋಡಿದರೆ ನಾಯಿಯೊಂದು ಕರುವಿಗೆ ಕಚ್ಚುತ್ತಿರುವಂತೆ ಭಾಸವಾದರೂ, ಗಮನಿಸಿ ನೋಡಿದಾಗ ವಿಷಯ ಬೇರೆಯದೇ ಇದೆ. ಅವರ ಮನೆಯ ಸಾಕುನಾಯಿ, ಕರುವಿನ ಮೈಮೇಲಿನ ಉಣ್ಣೆಗಳನ್ನು ಹೆಕ್ಕಿ ತೆಗೆಯುತ್ತಿದೆ. ಕರುವಿಗೂ ಆ ನಾಯಿಯ ಮೇಲೆ ವಿಶ್ವಾಸ ಇದೆ.

ವೈರಲ್ ವಿಡಿಯೋ ಇಲ್ಲಿದೆ

ತನ್ನ ಮುಖ, ಕುತ್ತಿಗೆಯನ್ನು ಚಾಚಿ, ತನ್ನ ಮೈಮೇಲಿನ ಉಣ್ಣೆ/ಒಣಗು ಹೊರಪರಾವಲಂಬಿಗಳನ್ನು ತೆಗೆಸಿಕೊಳ್ಳುತ್ತಿದೆ. ಇದು ಕರುವಿಗೆ ಮಾತ್ರ ಸೀಮಿತವಲ್ಲ. ಅವರ ಮನೆಯ ಎಲ್ಲಾ ಜಾನುವಾರುಗಳಿಗೂ ಮನೆಯ ನಾಯಿಗಳು ಪ್ರತಿ ದಿನವೂ ಇದೇ ರೀತಿ ಉಣ್ಣೆ ತೆಗೆದು ಕಳಿಸುವುದು ದೈನಂದಿನ ದಿನಚರಿಯಂತೆ ಎಂದು ಬರೆಯಲಾಗಿದೆ. ಈ ವಿಡಿಯೋದಲ್ಲಿ ಸಾಕುನಾಯಿಯೂ ಮನೆಯ ಕರುವಿನ ಮೈ ಮೇಲಿನ ಉಣ್ಣೆಗಳನ್ನು ನಾಲಿಗೆಯಲ್ಲಿ ನೆಕ್ಕಿ ತೆಗೆಯುತ್ತಿರುವುದನ್ನು ಕಾಣಬಹುದು.

ಇದನ್ನೂ ಓದಿ: ಕಾಡುಕೋಣ ಹೇಗೆ ಘೀಳಿಡುತ್ತಿದೆ ಗೊತ್ತಾ? ಈ ವಿಡಿಯೋ ನೋಡಿ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಕಂಡಿದ್ದು, ಒಬ್ಬ ಬಳಕೆದಾರ, ಆ ಮೂಕ ಪ್ರಾಣಿಗಳು ಅದು ಹೇಗೆ ಮಾಹಿತಿ ವಿನಿಮಯ ಮಾಡಿಕೊಳ್ತಾವೇ? ಆಶ್ಚರ್ಯ! ಎಂದು ಹೇಳಿದ್ದಾರೆ. ಮತ್ತೊಬ್ಬರು, ನಮ್ಮ ಮನೆಯಲ್ಲೂ ಹೀಗೇನೆ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:34 pm, Thu, 12 February 26

Follow Us
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ