AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಪುಟ್ಟ ಹುಡುಗನ ಮಡಿಲಲ್ಲಿ ಹಾಯಾಗಿ ಮಲಗಿದ ನಾಯಿ ಮರಿ

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಕೆಲ ವಿಡಿಯೋಗಳು ಬಹುಬೇಗನೆ ನೆಟ್ಟಿಗರ ಗಮನ ಸೆಳೆಯುತ್ತವೆ. ಇದೀಗ ಇಂತಹದ್ದೇ ವಿಡಿಯೋ ವೈರಲ್ ಆಗಿದ್ದು, ಪುಟ್ಟ ಹುಡುಗನ ಮಡಿಲಿನಲ್ಲಿ ನಾಯಿಮರಿಯೊಂದು ಹಾಯಾಗಿ ಮಲಗಿದೆ. ಈ ವಿಡಿಯೋ ನೋಡಿ ನೆಟ್ಟಿಗರ ಈ ಪುಟ್ಟ ಹುಡುಗನ ಶ್ವಾನ ಪ್ರೀತಿಗೆ ಕಳೆದೇ ಹೋಗಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಪುಟ್ಟ ಹುಡುಗನ ಮಡಿಲಲ್ಲಿ ಹಾಯಾಗಿ ಮಲಗಿದ ನಾಯಿ ಮರಿ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Jan 05, 2026 | 2:54 PM

Share

ಪುಟಾಣಿಗಳೇ (Little kids) ಹಾಗೆ, ಮನೆಯಲ್ಲಿ ಶ್ವಾನಗಳಿದ್ದರೆ ಅವುಗಳ ಜತೆಗೆ ಹೆಚ್ಚು ಸಮಯ ಕಳೆಯುತ್ತವೆ. ಈ ಮನೆಯ ಮುದ್ದಿನ ಶ್ವಾನಗಳು (dogs) ಪುಟ್ಟ ಮಕ್ಕಳಿಗೆ ಕಾವಲಾಗಿರುವುದನ್ನು ನೀವು ನೋಡಿರುತ್ತೀರಿ. ಆದರೆ ಪುಟ್ಟ ಹುಡುಗನೊಬ್ಬ ನಾಯಿಮರಿಯನ್ನು ಮಡಿಲಿನಲ್ಲಿ ಮಗುವಿನಂತೆ ಮಲಗಿಸಿ  ಮುದ್ದಿಸಿರುವ ದೃಶ್ಯ ನೆಟ್ಟಿಗರ ಕಣ್ಮನ ಸೆಳೆದಿದೆ. ಈ ಮುದ್ದಾದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

ಮಂಜುನಾಥ್ ಲೋಕಪುರ್ (manjunath_lokapur) ಹೆಸರಿನ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಪುಟ್ಟ ಹುಡುಗನ ಮಡಿಲಿನಲ್ಲಿ ಶ್ವಾನದ ಮರಿಯೊಂದು ಮಲಗಿರುವುದನ್ನು ಕಾಣಬಹುದು. ಹೌದು, ಬೀದಿ ಬದಿಯಲ್ಲಿ ಕುಳಿತಿರುವ ಪುಟ್ಟ ಬಾಲಕನು ಚಳಿಯಾಗದಂತೆ ನಾಯಿಮರಿಗೆ ಟವೆಲ್ ಸುತ್ತಿದ್ದಾನೆ. ಈ ನಾಯಿಮರಿಯೂ ಪುಟ್ಟ ಹುಡುಗನ ಮಡಿಲಿನಲ್ಲಿ ಹಾಯಾಗಿ ಮಲಗಿರುವುದನ್ನು ಕಾಣಬಹುದು. ಈ ವೇಳೆ ದಾರಿಹೋಕರೊಬ್ಬರು ಈ ಪುಟ್ಟ ಹುಡುಗನ ಕೈಗೆ ಒಂದಿಷ್ಟು ಕಾಸು ಕೊಟ್ಟು ಮಾತನಾಡಿಸುತ್ತಿರುವುದನ್ನು ನೀವು ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ:ತನ್ನ ಟಿಫಿನ್ ಬಾಕ್ಸ್‌ನಲ್ಲಿದ್ದ ಊಟವನ್ನು ಕೊಟ್ಟು ಬೀದಿನಾಯಿಯ ಹಸಿವು ನೀಗಿಸಿದ ಪುಟ್ಟ ಬಾಲಕಿ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ ತುಂಬಾನೇ ಮುದ್ದಾಗಿದೆ ಎಂದಿದ್ದಾರೆ. ಇನ್ನೊಬ್ಬರು, ಮುಗ್ಧ ಮನಸ್ಸುಗಳು ಎಂದು ಹೇಳಿದರೆ, ಇನ್ನು ಕೆಲವರು ಹಾರ್ಟ್ ಸಿಂಬಲ್ ಕಳುಹಿಸಿ ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು