AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಪುಟ್ಟ ಹುಡುಗನ ಮಡಿಲಲ್ಲಿ ಹಾಯಾಗಿ ಮಲಗಿದ ನಾಯಿ ಮರಿ

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಕೆಲ ವಿಡಿಯೋಗಳು ಬಹುಬೇಗನೆ ನೆಟ್ಟಿಗರ ಗಮನ ಸೆಳೆಯುತ್ತವೆ. ಇದೀಗ ಇಂತಹದ್ದೇ ವಿಡಿಯೋ ವೈರಲ್ ಆಗಿದ್ದು, ಪುಟ್ಟ ಹುಡುಗನ ಮಡಿಲಿನಲ್ಲಿ ನಾಯಿಮರಿಯೊಂದು ಹಾಯಾಗಿ ಮಲಗಿದೆ. ಈ ವಿಡಿಯೋ ನೋಡಿ ನೆಟ್ಟಿಗರ ಈ ಪುಟ್ಟ ಹುಡುಗನ ಶ್ವಾನ ಪ್ರೀತಿಗೆ ಕಳೆದೇ ಹೋಗಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಪುಟ್ಟ ಹುಡುಗನ ಮಡಿಲಲ್ಲಿ ಹಾಯಾಗಿ ಮಲಗಿದ ನಾಯಿ ಮರಿ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Jan 05, 2026 | 2:54 PM

Share

ಪುಟಾಣಿಗಳೇ (Little kids) ಹಾಗೆ, ಮನೆಯಲ್ಲಿ ಶ್ವಾನಗಳಿದ್ದರೆ ಅವುಗಳ ಜತೆಗೆ ಹೆಚ್ಚು ಸಮಯ ಕಳೆಯುತ್ತವೆ. ಈ ಮನೆಯ ಮುದ್ದಿನ ಶ್ವಾನಗಳು (dogs) ಪುಟ್ಟ ಮಕ್ಕಳಿಗೆ ಕಾವಲಾಗಿರುವುದನ್ನು ನೀವು ನೋಡಿರುತ್ತೀರಿ. ಆದರೆ ಪುಟ್ಟ ಹುಡುಗನೊಬ್ಬ ನಾಯಿಮರಿಯನ್ನು ಮಡಿಲಿನಲ್ಲಿ ಮಗುವಿನಂತೆ ಮಲಗಿಸಿ  ಮುದ್ದಿಸಿರುವ ದೃಶ್ಯ ನೆಟ್ಟಿಗರ ಕಣ್ಮನ ಸೆಳೆದಿದೆ. ಈ ಮುದ್ದಾದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

ಮಂಜುನಾಥ್ ಲೋಕಪುರ್ (manjunath_lokapur) ಹೆಸರಿನ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಪುಟ್ಟ ಹುಡುಗನ ಮಡಿಲಿನಲ್ಲಿ ಶ್ವಾನದ ಮರಿಯೊಂದು ಮಲಗಿರುವುದನ್ನು ಕಾಣಬಹುದು. ಹೌದು, ಬೀದಿ ಬದಿಯಲ್ಲಿ ಕುಳಿತಿರುವ ಪುಟ್ಟ ಬಾಲಕನು ಚಳಿಯಾಗದಂತೆ ನಾಯಿಮರಿಗೆ ಟವೆಲ್ ಸುತ್ತಿದ್ದಾನೆ. ಈ ನಾಯಿಮರಿಯೂ ಪುಟ್ಟ ಹುಡುಗನ ಮಡಿಲಿನಲ್ಲಿ ಹಾಯಾಗಿ ಮಲಗಿರುವುದನ್ನು ಕಾಣಬಹುದು. ಈ ವೇಳೆ ದಾರಿಹೋಕರೊಬ್ಬರು ಈ ಪುಟ್ಟ ಹುಡುಗನ ಕೈಗೆ ಒಂದಿಷ್ಟು ಕಾಸು ಕೊಟ್ಟು ಮಾತನಾಡಿಸುತ್ತಿರುವುದನ್ನು ನೀವು ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ:ತನ್ನ ಟಿಫಿನ್ ಬಾಕ್ಸ್‌ನಲ್ಲಿದ್ದ ಊಟವನ್ನು ಕೊಟ್ಟು ಬೀದಿನಾಯಿಯ ಹಸಿವು ನೀಗಿಸಿದ ಪುಟ್ಟ ಬಾಲಕಿ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ ತುಂಬಾನೇ ಮುದ್ದಾಗಿದೆ ಎಂದಿದ್ದಾರೆ. ಇನ್ನೊಬ್ಬರು, ಮುಗ್ಧ ಮನಸ್ಸುಗಳು ಎಂದು ಹೇಳಿದರೆ, ಇನ್ನು ಕೆಲವರು ಹಾರ್ಟ್ ಸಿಂಬಲ್ ಕಳುಹಿಸಿ ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು