AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಪುಟ್ಟ ಹುಡುಗನ ಮಡಿಲಲ್ಲಿ ಹಾಯಾಗಿ ಮಲಗಿದ ನಾಯಿ ಮರಿ

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಕೆಲ ವಿಡಿಯೋಗಳು ಬಹುಬೇಗನೆ ನೆಟ್ಟಿಗರ ಗಮನ ಸೆಳೆಯುತ್ತವೆ. ಇದೀಗ ಇಂತಹದ್ದೇ ವಿಡಿಯೋ ವೈರಲ್ ಆಗಿದ್ದು, ಪುಟ್ಟ ಹುಡುಗನ ಮಡಿಲಿನಲ್ಲಿ ನಾಯಿಮರಿಯೊಂದು ಹಾಯಾಗಿ ಮಲಗಿದೆ. ಈ ವಿಡಿಯೋ ನೋಡಿ ನೆಟ್ಟಿಗರ ಈ ಪುಟ್ಟ ಹುಡುಗನ ಶ್ವಾನ ಪ್ರೀತಿಗೆ ಕಳೆದೇ ಹೋಗಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಪುಟ್ಟ ಹುಡುಗನ ಮಡಿಲಲ್ಲಿ ಹಾಯಾಗಿ ಮಲಗಿದ ನಾಯಿ ಮರಿ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Jan 05, 2026 | 2:54 PM

Share

ಪುಟಾಣಿಗಳೇ (Little kids) ಹಾಗೆ, ಮನೆಯಲ್ಲಿ ಶ್ವಾನಗಳಿದ್ದರೆ ಅವುಗಳ ಜತೆಗೆ ಹೆಚ್ಚು ಸಮಯ ಕಳೆಯುತ್ತವೆ. ಈ ಮನೆಯ ಮುದ್ದಿನ ಶ್ವಾನಗಳು (dogs) ಪುಟ್ಟ ಮಕ್ಕಳಿಗೆ ಕಾವಲಾಗಿರುವುದನ್ನು ನೀವು ನೋಡಿರುತ್ತೀರಿ. ಆದರೆ ಪುಟ್ಟ ಹುಡುಗನೊಬ್ಬ ನಾಯಿಮರಿಯನ್ನು ಮಡಿಲಿನಲ್ಲಿ ಮಗುವಿನಂತೆ ಮಲಗಿಸಿ  ಮುದ್ದಿಸಿರುವ ದೃಶ್ಯ ನೆಟ್ಟಿಗರ ಕಣ್ಮನ ಸೆಳೆದಿದೆ. ಈ ಮುದ್ದಾದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

ಮಂಜುನಾಥ್ ಲೋಕಪುರ್ (manjunath_lokapur) ಹೆಸರಿನ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಪುಟ್ಟ ಹುಡುಗನ ಮಡಿಲಿನಲ್ಲಿ ಶ್ವಾನದ ಮರಿಯೊಂದು ಮಲಗಿರುವುದನ್ನು ಕಾಣಬಹುದು. ಹೌದು, ಬೀದಿ ಬದಿಯಲ್ಲಿ ಕುಳಿತಿರುವ ಪುಟ್ಟ ಬಾಲಕನು ಚಳಿಯಾಗದಂತೆ ನಾಯಿಮರಿಗೆ ಟವೆಲ್ ಸುತ್ತಿದ್ದಾನೆ. ಈ ನಾಯಿಮರಿಯೂ ಪುಟ್ಟ ಹುಡುಗನ ಮಡಿಲಿನಲ್ಲಿ ಹಾಯಾಗಿ ಮಲಗಿರುವುದನ್ನು ಕಾಣಬಹುದು. ಈ ವೇಳೆ ದಾರಿಹೋಕರೊಬ್ಬರು ಈ ಪುಟ್ಟ ಹುಡುಗನ ಕೈಗೆ ಒಂದಿಷ್ಟು ಕಾಸು ಕೊಟ್ಟು ಮಾತನಾಡಿಸುತ್ತಿರುವುದನ್ನು ನೀವು ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ:ತನ್ನ ಟಿಫಿನ್ ಬಾಕ್ಸ್‌ನಲ್ಲಿದ್ದ ಊಟವನ್ನು ಕೊಟ್ಟು ಬೀದಿನಾಯಿಯ ಹಸಿವು ನೀಗಿಸಿದ ಪುಟ್ಟ ಬಾಲಕಿ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ ತುಂಬಾನೇ ಮುದ್ದಾಗಿದೆ ಎಂದಿದ್ದಾರೆ. ಇನ್ನೊಬ್ಬರು, ಮುಗ್ಧ ಮನಸ್ಸುಗಳು ಎಂದು ಹೇಳಿದರೆ, ಇನ್ನು ಕೆಲವರು ಹಾರ್ಟ್ ಸಿಂಬಲ್ ಕಳುಹಿಸಿ ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್