AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್ಡರ್ ಮಾಡಿದ್ದು ಚಿಕನ್ನಲ್ಲ, ಪನ್ನೀರ್​ ಸ್ಯಾಂಡ್‌ವಿಚ್; 50 ಲಕ್ಷ ರೂ ಪರಿಹಾರಕ್ಕಾಗಿ ಕೋರ್ಟ್​ ಮೆಟ್ಟಿಲೇರಿದ ಮಹಿಳೆ

ಸ್ಯಾಂಡ್ವಿಚ್ ಡೆಲಿವರಿ ಆದ ಕೂಡಲೇ ತಿನ್ನಲು ಪ್ರಾರಂಭಿಸಿದಳು. ಅರ್ಥ ತಿಂದ ಬಳಿಕ, ಪನೀರ್‌ನ ವಿನ್ಯಾಸವು ಸಾಮಾನ್ಯಕ್ಕಿಂತ ಗಟ್ಟಿಯಾಗಿದೆ ಎಂದು ಅನುಮಾನಗೊಂಡು ಪರೀಕ್ಷಿಸಿದಾಗ ಚಿಕನ್​​ ಸ್ಯಾಂಡ್‌ವಿಚ್ ತಿಂದಿರುವುದಾಗಿ ತಿಳಿದುಬಂದಿದೆ. ಎಂದೂ ಮಾಂಸಾಹಾರ ಸೇವಿಸದ ನಿರಾಲಿ, ರೆಸ್ಟೋರೆಂಟ್​ ವಿರುದ್ಧ ದೂರು ದಾಖಲಿಸಿದ್ದಾರೆ.

ಆರ್ಡರ್ ಮಾಡಿದ್ದು ಚಿಕನ್ನಲ್ಲ, ಪನ್ನೀರ್​ ಸ್ಯಾಂಡ್‌ವಿಚ್; 50 ಲಕ್ಷ ರೂ ಪರಿಹಾರಕ್ಕಾಗಿ ಕೋರ್ಟ್​ ಮೆಟ್ಟಿಲೇರಿದ ಮಹಿಳೆ
ಅಕ್ಷತಾ ವರ್ಕಾಡಿ
|

Updated on: May 09, 2024 | 4:08 PM

Share

ಶುದ್ಧ ಸಸ್ಯಾಹಾರಿ ಮಹಿಳೆಯೊಬ್ಬರು ಆನ್ಲೈನ್​ನಲ್ಲಿ ಫುಡ್​​ ಡೆಲಿವರಿ ಆ್ಯಪ್​ ಬಳಸಿ ಗುಜರಾತ್‌ನ ಅಹಮದಾಬಾದ್‌ನಲ್ಲಿರುವ ‘ಪಿಕ್ ಅಪ್ ಮೀಲ್ಸ್ ಬೈ ಟೆರ್ರಾ’ ನಿಂದ ಪನೀರ್ ಟಿಕ್ಕಾ ಸ್ಯಾಂಡ್‌ವಿಚ್ ಅನ್ನು ಆರ್ಡರ್ ಮಾಡಿದ್ದಾರೆ. ಆದರೆ, ರೆಸ್ಟೋರೆಂಟ್ ಪನ್ನೀರ್​​ ಬದಲಿಗೆ ಚಿಕನ್ ಸ್ಯಾಂಡ್‌ವಿಚ್ ಡೆಲಿವರಿ ಮಾಡಿದ್ದು, ಇದರಿಂದ ಕೋಪಗೊಂಡ ಮಹಿಳೆ ಗ್ರಾಹಕರ ನ್ಯಾಯಾಲಯದಲ್ಲಿ 50 ಲಕ್ಷ ರೂ ಪರಿಹಾರಕ್ಕಾಗಿ ಆನ್ಲೈನ್​ನಲ್ಲಿ ಫುಡ್​​ ಡೆಲಿವರಿ ಆ್ಯಪ್ ಮತ್ತು ರೆಸ್ಟೋರೆಂಟ್​ ವಿರುದ್ದ ದೂರು ದಾಖಲಿಸಿದ್ದಾರೆ.

ಮೇ 3 ರಂದು, ನಿರಾಲಿ ಎಂಬ ಮಹಿಳೆ ಅಹಮದಾಬಾದ್‌ನ ಸೈನ್ಸ್ ಸಿಟಿಯಲ್ಲಿರುವ ತನ್ನ ಕಚೇರಿಯಿಂದ ಆರ್ಡರ್ ಮಾಡಿದ್ದಾಳೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಕುತೂಹಲಕಾರಿಯಾಗಿ, ಸ್ಯಾಂಡ್ವಿಚ್ ಡೆಲಿವರಿ ಆದ ಕೂಡಲೇ ತಿನ್ನಲು ಪ್ರಾರಂಭಿಸಿದಳು. ಅರ್ಥ ತಿಂದ ಬಳಿಕ, ಪನೀರ್‌ನ ವಿನ್ಯಾಸವು ಸಾಮಾನ್ಯಕ್ಕಿಂತ ಗಟ್ಟಿಯಾಗಿದೆ ಎಂದು ಅನುಮಾನಗೊಂಡು ಪರೀಕ್ಷಿಸಿದಾಗ ಚಿಕನ್​​ ಸ್ಯಾಂಡ್‌ವಿಚ್ ತಿಂದಿರುವುದಾಗಿ ತಿಳಿದುಬಂದಿದೆ. ಎಂದೂ ಮಾಂಸಾಹಾರ ಸೇವಿಸದ ನಿರಾಲಿ, ರೆಸ್ಟೋರೆಂಟ್​ ವಿರುದ್ಧ ದೂರು ದಾಖಲಿಸಿದ್ದಾರೆ. ಇದಲ್ಲದೇ ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಶನ್‌ನ ಉಪ ಆರೋಗ್ಯ ಅಧಿಕಾರಿಗೆ ಪತ್ರ ಬರೆದಿದ್ದಾರೆ.

View this post on Instagram

A post shared by @thesocialbait

ಇದನ್ನೂ ಓದಿ: ವಿದ್ಯಾರ್ಥಿಗೆ ಪರೀಕ್ಷೆಯಲ್ಲಿ 200ಕ್ಕೆ 212 ಅಂಕ, ಇದು ಹೇಗೆ ಸಾಧ್ಯ?

ಗ್ರಾಹಕರ ನ್ಯಾಯಾಲಯದಿಂದ ನ್ಯಾಯ ಪಡೆದು 50 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದು ನಿರಾಲಿ ಹೇಳಿದ್ದಾರೆ. ಕಳೆದ ವರ್ಷ ಇದೇ ರೀತಿಯ ಘಟನೆಯಲ್ಲಿ, ಜೋಧ್‌ಪುರದ ಜಿಲ್ಲಾ ಗ್ರಾಹಕ ವಿವಾದ ಪರಿಹಾರ ವೇದಿಕೆಯಿಂದ ಆನ್‌ಲೈನ್ ಆಹಾರ ಆರ್ಡರ್ ಮತ್ತು ಡೆಲಿವರಿ ಪ್ಲಾಟ್‌ಫಾರ್ಮ್ ಜೊಮಾಟೊ ಮತ್ತು ರೆಸ್ಟೋರೆಂಟ್ ಪಾಲುದಾರ ಮೆಕ್‌ಡೊನಾಲ್ಡ್‌ಗೆ 1 ಲಕ್ಷ ರೂಪಾಯಿ ದಂಡ ವಿಧಿಸಲಾಗಿತ್ತು. ಇದೀಗ ಸಸ್ಯಾಹಾರಿ ಆಹಾರದ ಬದಲಿಗೆ ಮಾಂಸಾಹಾರವನ್ನು ತಪ್ಪಾಗಿ ವಿತರಿಸಿದ ಆರೋಪದ ಮೇಲೆ ದಂಡ ವಿಧಿಸಲಾಗಿದೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ