AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ತಲೆ ಕೆಳಗಾಗಿ ನಡೆಯುತ್ತಾ ಪ್ರಭು ಶ್ರೀರಾಮನ ದರ್ಶನಕ್ಕೆ ಅಯೋಧ್ಯೆಗೆ ಹೊರಟ ರಾಮಭಕ್ತ 

ಅಯೋಧ್ಯೆಯ ಶ್ರೀ ರಾಮ ಮಂದಿರ ಉದ್ಘಾಟನೆಗೆ ದಿನಗಣನೆ ಶುರುವಾಗಿದೆ.  ಈ ಒಂದು ಪುಣ್ಯ ಕಾರ್ಯದಲ್ಲಿ ಪಾಲ್ಗೊಳ್ಳಲು ಕರ್ನಾಟಕ ಸೇರಿದಂತೆ ಬೇರೆ ರಾಜ್ಯಗಳಲ್ಲಿನ ಕೆಲವೊಬ್ಬ ರಾಮ ಭಕ್ತರು ಈಗಾಗಲೇ ಅಯೋಧ್ಯೆಗೆ ಪಾದಯಾತ್ರೆಯನ್ನು ಪ್ರಾರಂಭಿಸಿದ್ದಾರೆ. ಈ ಕುರಿತ ಹಲವಾರು ಸುದ್ದಿಗಳು ಹರಿದಾಡುತ್ತಿವೆ. ಅದೇ ರೀತಿಯ ವಿಶೇಷ ವಿಡಿಯೋವೊಂದು ಇದೀಗ ವೈರಲ್ ಆಗಿದ್ದು, ಪ್ರಭು ಶ್ರೀರಾಮನ ಭಕ್ತರೊಬ್ಬರು, ತಮ್ಮ ಸಂಕಲ್ಪದಂತೆ ಅಯೋಧ್ಯೆಗೆ ತಲೆಕೆಳಗಾಗಿ ನಡೆಯುತ್ತಾ ಪಾದಯಾತ್ರೆಯನ್ನು ಹೊರಟಿದ್ದಾರೆ.

Viral Video: ತಲೆ ಕೆಳಗಾಗಿ ನಡೆಯುತ್ತಾ ಪ್ರಭು ಶ್ರೀರಾಮನ ದರ್ಶನಕ್ಕೆ ಅಯೋಧ್ಯೆಗೆ ಹೊರಟ ರಾಮಭಕ್ತ 
ಮಾಲಾಶ್ರೀ ಅಂಚನ್​
| Edited By: |

Updated on:Jan 17, 2024 | 10:30 AM

Share

ಉತ್ತರ ಪ್ರದೇಶದ ಅಯ್ಯೋಧ್ಯೆಯಲ್ಲಿ ಜನವರಿ 22ರಂದು ಪ್ರಧಾನಿ ನರೇಂದ್ರ ಮೋದಿ ಅವರ ಸಾರಥ್ಯದಲ್ಲಿ ರಾಮ ಲಲ್ಲಾ (ಬಾಲ ರಾಮ) ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ಮತ್ತು ರಾಮ ಮಂದಿರ ಉದ್ಘಾಟನಾ ಸಮಾರಂಭ ನಡೆಯಲಿದೆ. ಈ ಒಂದು ಪುಣ್ಯ ಕಾರ್ಯದಲ್ಲಿ  ಭಾಗಿಯಾಗಲು ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಈ ದಿನದಂದು ರಾಮ ಮಂದಿರಕ್ಕೆ ಭೇಟಿ ನೀಡಲಿದ್ದಾರೆ. ವಿಶೇಷವಾಗಿ ಕೆಲವೊಬ್ಬ ರಾಮಭಕ್ತರು ತಮ್ಮ ಊರುಗಳಿಂದ ಪಾದಯಾತ್ರೆಯ ಮೂಲಕವೇ ಪ್ರಭು ಶ್ರೀರಾಮನ ಜನ್ಮಸ್ಥಳಕ್ಕೆ ಭೇಟಿ ನೀಡುತ್ತೇನೆ ಎಂದು ಸಂಕಲ್ಪ ತೆಗೆದುಕೊಂಡು  ಈಗಾಗಲೇ ಅಯೋಧ್ಯೆಗೆ ಪಾದಯಾತ್ರೆಯನ್ನು ಪ್ರಾರಂಭಿಸಿದ್ದಾರೆ.

ಕರ್ನಾಟಕ ಸೇರಿದಂತೆ, ಬೇರೆ ರಾಜ್ಯಗಳಿಂದಲೂ ಭಕ್ತರು ಪಾದಯಾತ್ರೆಯನ್ನು ಹೊರಟಿರುವ ಸುದ್ದಿಗಳು ಹರಿದಾಡುತ್ತಿವೆ.  ಸದ್ಯ ಇಲ್ಲೊಂದು ವಿಶೇಷ ವಿಡಿಯೋ ಹರಿದಾಡುತ್ತಿದ್ದು,  ರಾಮಭಕ್ತರೊಬ್ಬರು ತಮ್ಮ ಸಂಕಲ್ಪದಂತೆ ತಲೆಕೆಳಗಾಗಿ ನಡೆಯುತ್ತಾ  ಪ್ರಭು ಶ್ರೀರಾಮನ ದರ್ಶನಕ್ಕಾಗಿ ಅಯೋಧ್ಯೆಗೆ ಹೊರಟಿದ್ದಾರೆ.

ಇದನ್ನೂ ಓದಿ: ಪೇಪರ್​​​ನಲ್ಲಿ ಮೂಡಿದ ಪರಿಸರಸ್ನೇಹಿ ಶ್ರೀರಾಮ ಮೂರ್ತಿ

ವೈರಲ್​​​ ವಿಡಿಯೋ ಇಲ್ಲಿದೆ ನೋಡಿ:

ರಾಮಭಕ್ತ ತಲೆಕೆಳಗಾಗಿ ನಡೆಯುತ್ತಾ, ಅಯೋಧ್ಯೆಗೆ ಶ್ರೀರಾಮನ ದರ್ಶನಕ್ಕೆ ಹೊರಟಿರುವಂತಹ ವಿಡಿಯೋ ತುಣುಕುಗಳು ಸಾಮಾಜಿಕ ಜಾಲತಾಣದಲ್ಲಿ  ಹರಿದಾಡುತ್ತಿದ್ದು, ವಿಡಿಯೋದಲ್ಲಿ ರಾಮಭಕ್ತರೊಬ್ಬರು ತಲೆ ಕೆಳಗಾಗಿ ತಮ್ಮ ಕೈಗಳಲ್ಲಿ ಹೆಜ್ಜೆಯಿಡುತ್ತಾ, ಶ್ರೀರಾಮನ ದರ್ಶನಕ್ಕಾಗಿ ಅಯೋಧ್ಯೆಗೆ ಹೊರಟಿರುವ ದೃಶ್ಯವನ್ನು ಕಾಣಬಹುದು.  ಅಷ್ಟಕ್ಕೂ ಇವರು ಯಾವ ಊರಿನಿಂದ ಪಾದಯತ್ರೆ ಹೊರಟಿದ್ದಾರೆ ಹಾಗೂ  ಅವರ ವೈಯಕ್ತಿಕ ವಿವರವಗಳ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:24 am, Wed, 17 January 24

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ