AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ತಲೆ ಕೆಳಗಾಗಿ ನಡೆಯುತ್ತಾ ಪ್ರಭು ಶ್ರೀರಾಮನ ದರ್ಶನಕ್ಕೆ ಅಯೋಧ್ಯೆಗೆ ಹೊರಟ ರಾಮಭಕ್ತ 

ಅಯೋಧ್ಯೆಯ ಶ್ರೀ ರಾಮ ಮಂದಿರ ಉದ್ಘಾಟನೆಗೆ ದಿನಗಣನೆ ಶುರುವಾಗಿದೆ.  ಈ ಒಂದು ಪುಣ್ಯ ಕಾರ್ಯದಲ್ಲಿ ಪಾಲ್ಗೊಳ್ಳಲು ಕರ್ನಾಟಕ ಸೇರಿದಂತೆ ಬೇರೆ ರಾಜ್ಯಗಳಲ್ಲಿನ ಕೆಲವೊಬ್ಬ ರಾಮ ಭಕ್ತರು ಈಗಾಗಲೇ ಅಯೋಧ್ಯೆಗೆ ಪಾದಯಾತ್ರೆಯನ್ನು ಪ್ರಾರಂಭಿಸಿದ್ದಾರೆ. ಈ ಕುರಿತ ಹಲವಾರು ಸುದ್ದಿಗಳು ಹರಿದಾಡುತ್ತಿವೆ. ಅದೇ ರೀತಿಯ ವಿಶೇಷ ವಿಡಿಯೋವೊಂದು ಇದೀಗ ವೈರಲ್ ಆಗಿದ್ದು, ಪ್ರಭು ಶ್ರೀರಾಮನ ಭಕ್ತರೊಬ್ಬರು, ತಮ್ಮ ಸಂಕಲ್ಪದಂತೆ ಅಯೋಧ್ಯೆಗೆ ತಲೆಕೆಳಗಾಗಿ ನಡೆಯುತ್ತಾ ಪಾದಯಾತ್ರೆಯನ್ನು ಹೊರಟಿದ್ದಾರೆ.

Viral Video: ತಲೆ ಕೆಳಗಾಗಿ ನಡೆಯುತ್ತಾ ಪ್ರಭು ಶ್ರೀರಾಮನ ದರ್ಶನಕ್ಕೆ ಅಯೋಧ್ಯೆಗೆ ಹೊರಟ ರಾಮಭಕ್ತ 
ಮಾಲಾಶ್ರೀ ಅಂಚನ್​
| Edited By: |

Updated on:Jan 17, 2024 | 10:30 AM

Share

ಉತ್ತರ ಪ್ರದೇಶದ ಅಯ್ಯೋಧ್ಯೆಯಲ್ಲಿ ಜನವರಿ 22ರಂದು ಪ್ರಧಾನಿ ನರೇಂದ್ರ ಮೋದಿ ಅವರ ಸಾರಥ್ಯದಲ್ಲಿ ರಾಮ ಲಲ್ಲಾ (ಬಾಲ ರಾಮ) ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ಮತ್ತು ರಾಮ ಮಂದಿರ ಉದ್ಘಾಟನಾ ಸಮಾರಂಭ ನಡೆಯಲಿದೆ. ಈ ಒಂದು ಪುಣ್ಯ ಕಾರ್ಯದಲ್ಲಿ  ಭಾಗಿಯಾಗಲು ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಈ ದಿನದಂದು ರಾಮ ಮಂದಿರಕ್ಕೆ ಭೇಟಿ ನೀಡಲಿದ್ದಾರೆ. ವಿಶೇಷವಾಗಿ ಕೆಲವೊಬ್ಬ ರಾಮಭಕ್ತರು ತಮ್ಮ ಊರುಗಳಿಂದ ಪಾದಯಾತ್ರೆಯ ಮೂಲಕವೇ ಪ್ರಭು ಶ್ರೀರಾಮನ ಜನ್ಮಸ್ಥಳಕ್ಕೆ ಭೇಟಿ ನೀಡುತ್ತೇನೆ ಎಂದು ಸಂಕಲ್ಪ ತೆಗೆದುಕೊಂಡು  ಈಗಾಗಲೇ ಅಯೋಧ್ಯೆಗೆ ಪಾದಯಾತ್ರೆಯನ್ನು ಪ್ರಾರಂಭಿಸಿದ್ದಾರೆ.

ಕರ್ನಾಟಕ ಸೇರಿದಂತೆ, ಬೇರೆ ರಾಜ್ಯಗಳಿಂದಲೂ ಭಕ್ತರು ಪಾದಯಾತ್ರೆಯನ್ನು ಹೊರಟಿರುವ ಸುದ್ದಿಗಳು ಹರಿದಾಡುತ್ತಿವೆ.  ಸದ್ಯ ಇಲ್ಲೊಂದು ವಿಶೇಷ ವಿಡಿಯೋ ಹರಿದಾಡುತ್ತಿದ್ದು,  ರಾಮಭಕ್ತರೊಬ್ಬರು ತಮ್ಮ ಸಂಕಲ್ಪದಂತೆ ತಲೆಕೆಳಗಾಗಿ ನಡೆಯುತ್ತಾ  ಪ್ರಭು ಶ್ರೀರಾಮನ ದರ್ಶನಕ್ಕಾಗಿ ಅಯೋಧ್ಯೆಗೆ ಹೊರಟಿದ್ದಾರೆ.

ಇದನ್ನೂ ಓದಿ: ಪೇಪರ್​​​ನಲ್ಲಿ ಮೂಡಿದ ಪರಿಸರಸ್ನೇಹಿ ಶ್ರೀರಾಮ ಮೂರ್ತಿ

ವೈರಲ್​​​ ವಿಡಿಯೋ ಇಲ್ಲಿದೆ ನೋಡಿ:

ರಾಮಭಕ್ತ ತಲೆಕೆಳಗಾಗಿ ನಡೆಯುತ್ತಾ, ಅಯೋಧ್ಯೆಗೆ ಶ್ರೀರಾಮನ ದರ್ಶನಕ್ಕೆ ಹೊರಟಿರುವಂತಹ ವಿಡಿಯೋ ತುಣುಕುಗಳು ಸಾಮಾಜಿಕ ಜಾಲತಾಣದಲ್ಲಿ  ಹರಿದಾಡುತ್ತಿದ್ದು, ವಿಡಿಯೋದಲ್ಲಿ ರಾಮಭಕ್ತರೊಬ್ಬರು ತಲೆ ಕೆಳಗಾಗಿ ತಮ್ಮ ಕೈಗಳಲ್ಲಿ ಹೆಜ್ಜೆಯಿಡುತ್ತಾ, ಶ್ರೀರಾಮನ ದರ್ಶನಕ್ಕಾಗಿ ಅಯೋಧ್ಯೆಗೆ ಹೊರಟಿರುವ ದೃಶ್ಯವನ್ನು ಕಾಣಬಹುದು.  ಅಷ್ಟಕ್ಕೂ ಇವರು ಯಾವ ಊರಿನಿಂದ ಪಾದಯತ್ರೆ ಹೊರಟಿದ್ದಾರೆ ಹಾಗೂ  ಅವರ ವೈಯಕ್ತಿಕ ವಿವರವಗಳ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:24 am, Wed, 17 January 24

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?