AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ತಲೆ ಕೆಳಗಾಗಿ ನಡೆಯುತ್ತಾ ಪ್ರಭು ಶ್ರೀರಾಮನ ದರ್ಶನಕ್ಕೆ ಅಯೋಧ್ಯೆಗೆ ಹೊರಟ ರಾಮಭಕ್ತ 

ಅಯೋಧ್ಯೆಯ ಶ್ರೀ ರಾಮ ಮಂದಿರ ಉದ್ಘಾಟನೆಗೆ ದಿನಗಣನೆ ಶುರುವಾಗಿದೆ.  ಈ ಒಂದು ಪುಣ್ಯ ಕಾರ್ಯದಲ್ಲಿ ಪಾಲ್ಗೊಳ್ಳಲು ಕರ್ನಾಟಕ ಸೇರಿದಂತೆ ಬೇರೆ ರಾಜ್ಯಗಳಲ್ಲಿನ ಕೆಲವೊಬ್ಬ ರಾಮ ಭಕ್ತರು ಈಗಾಗಲೇ ಅಯೋಧ್ಯೆಗೆ ಪಾದಯಾತ್ರೆಯನ್ನು ಪ್ರಾರಂಭಿಸಿದ್ದಾರೆ. ಈ ಕುರಿತ ಹಲವಾರು ಸುದ್ದಿಗಳು ಹರಿದಾಡುತ್ತಿವೆ. ಅದೇ ರೀತಿಯ ವಿಶೇಷ ವಿಡಿಯೋವೊಂದು ಇದೀಗ ವೈರಲ್ ಆಗಿದ್ದು, ಪ್ರಭು ಶ್ರೀರಾಮನ ಭಕ್ತರೊಬ್ಬರು, ತಮ್ಮ ಸಂಕಲ್ಪದಂತೆ ಅಯೋಧ್ಯೆಗೆ ತಲೆಕೆಳಗಾಗಿ ನಡೆಯುತ್ತಾ ಪಾದಯಾತ್ರೆಯನ್ನು ಹೊರಟಿದ್ದಾರೆ.

Viral Video: ತಲೆ ಕೆಳಗಾಗಿ ನಡೆಯುತ್ತಾ ಪ್ರಭು ಶ್ರೀರಾಮನ ದರ್ಶನಕ್ಕೆ ಅಯೋಧ್ಯೆಗೆ ಹೊರಟ ರಾಮಭಕ್ತ 
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​|

Updated on:Jan 17, 2024 | 10:30 AM

Share

ಉತ್ತರ ಪ್ರದೇಶದ ಅಯ್ಯೋಧ್ಯೆಯಲ್ಲಿ ಜನವರಿ 22ರಂದು ಪ್ರಧಾನಿ ನರೇಂದ್ರ ಮೋದಿ ಅವರ ಸಾರಥ್ಯದಲ್ಲಿ ರಾಮ ಲಲ್ಲಾ (ಬಾಲ ರಾಮ) ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ಮತ್ತು ರಾಮ ಮಂದಿರ ಉದ್ಘಾಟನಾ ಸಮಾರಂಭ ನಡೆಯಲಿದೆ. ಈ ಒಂದು ಪುಣ್ಯ ಕಾರ್ಯದಲ್ಲಿ  ಭಾಗಿಯಾಗಲು ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಈ ದಿನದಂದು ರಾಮ ಮಂದಿರಕ್ಕೆ ಭೇಟಿ ನೀಡಲಿದ್ದಾರೆ. ವಿಶೇಷವಾಗಿ ಕೆಲವೊಬ್ಬ ರಾಮಭಕ್ತರು ತಮ್ಮ ಊರುಗಳಿಂದ ಪಾದಯಾತ್ರೆಯ ಮೂಲಕವೇ ಪ್ರಭು ಶ್ರೀರಾಮನ ಜನ್ಮಸ್ಥಳಕ್ಕೆ ಭೇಟಿ ನೀಡುತ್ತೇನೆ ಎಂದು ಸಂಕಲ್ಪ ತೆಗೆದುಕೊಂಡು  ಈಗಾಗಲೇ ಅಯೋಧ್ಯೆಗೆ ಪಾದಯಾತ್ರೆಯನ್ನು ಪ್ರಾರಂಭಿಸಿದ್ದಾರೆ.

ಕರ್ನಾಟಕ ಸೇರಿದಂತೆ, ಬೇರೆ ರಾಜ್ಯಗಳಿಂದಲೂ ಭಕ್ತರು ಪಾದಯಾತ್ರೆಯನ್ನು ಹೊರಟಿರುವ ಸುದ್ದಿಗಳು ಹರಿದಾಡುತ್ತಿವೆ.  ಸದ್ಯ ಇಲ್ಲೊಂದು ವಿಶೇಷ ವಿಡಿಯೋ ಹರಿದಾಡುತ್ತಿದ್ದು,  ರಾಮಭಕ್ತರೊಬ್ಬರು ತಮ್ಮ ಸಂಕಲ್ಪದಂತೆ ತಲೆಕೆಳಗಾಗಿ ನಡೆಯುತ್ತಾ  ಪ್ರಭು ಶ್ರೀರಾಮನ ದರ್ಶನಕ್ಕಾಗಿ ಅಯೋಧ್ಯೆಗೆ ಹೊರಟಿದ್ದಾರೆ.

ಇದನ್ನೂ ಓದಿ: ಪೇಪರ್​​​ನಲ್ಲಿ ಮೂಡಿದ ಪರಿಸರಸ್ನೇಹಿ ಶ್ರೀರಾಮ ಮೂರ್ತಿ

ವೈರಲ್​​​ ವಿಡಿಯೋ ಇಲ್ಲಿದೆ ನೋಡಿ:

ರಾಮಭಕ್ತ ತಲೆಕೆಳಗಾಗಿ ನಡೆಯುತ್ತಾ, ಅಯೋಧ್ಯೆಗೆ ಶ್ರೀರಾಮನ ದರ್ಶನಕ್ಕೆ ಹೊರಟಿರುವಂತಹ ವಿಡಿಯೋ ತುಣುಕುಗಳು ಸಾಮಾಜಿಕ ಜಾಲತಾಣದಲ್ಲಿ  ಹರಿದಾಡುತ್ತಿದ್ದು, ವಿಡಿಯೋದಲ್ಲಿ ರಾಮಭಕ್ತರೊಬ್ಬರು ತಲೆ ಕೆಳಗಾಗಿ ತಮ್ಮ ಕೈಗಳಲ್ಲಿ ಹೆಜ್ಜೆಯಿಡುತ್ತಾ, ಶ್ರೀರಾಮನ ದರ್ಶನಕ್ಕಾಗಿ ಅಯೋಧ್ಯೆಗೆ ಹೊರಟಿರುವ ದೃಶ್ಯವನ್ನು ಕಾಣಬಹುದು.  ಅಷ್ಟಕ್ಕೂ ಇವರು ಯಾವ ಊರಿನಿಂದ ಪಾದಯತ್ರೆ ಹೊರಟಿದ್ದಾರೆ ಹಾಗೂ  ಅವರ ವೈಯಕ್ತಿಕ ವಿವರವಗಳ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:24 am, Wed, 17 January 24

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!