AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಒಂದುವರೆ ವರ್ಷಗಳ ಬಳಿಕ ತಾಯಿ ಮಗನ ಭೇಟಿ, ಈ ಅಮೃತ ಕ್ಷಣದ ವೀಡಿಯೊ ಇಲ್ಲಿದೆ ನೋಡಿ

ವಿದೇಶದಲ್ಲಿದ್ದ ಮಗನೊಬ್ಬ ತನ್ನ ತಾಯಿಯನ್ನು ಸುಮಾರು ಒಂದುವರೆ ವರ್ಷಗಳ ನಂತರ ಭೇಟಿಯಾದಾಗ ತಾಯಿ ತನ್ನ ಮಗನನ್ನು ನೋಡಿ ಕಣ್ತುಬಿಂಕೊಳ್ಳುವ ಭಾವನಾತ್ಮಕ ವೀಡಿಯೋವೊಂದು ಇನ್ಸ್ಟಾಗ್ರಾಮ್ ನಲ್ಲಿ ವೈರಲ್ ಆಗಿದ್ದು, ಈ ತಾಯಿ ಮಗನ ಪರಿಶುದ್ಧ ಪ್ರೀತಿ ಎಂತಹ ಕಲ್ಲು ಮನಸ್ಸನ್ನೂ ಕರಗಿಸುವಂತಿದೆ.

Viral Video: ಒಂದುವರೆ ವರ್ಷಗಳ ಬಳಿಕ ತಾಯಿ ಮಗನ ಭೇಟಿ, ಈ ಅಮೃತ ಕ್ಷಣದ ವೀಡಿಯೊ ಇಲ್ಲಿದೆ ನೋಡಿ
ವೈರಲ್​​ ವೀಡಿಯೊ
ಮಾಲಾಶ್ರೀ ಅಂಚನ್​
| Edited By: |

Updated on: Jun 07, 2023 | 6:20 PM

Share

ಭವಿಷ್ಯ ರೂಪಿಸುವ ಸಲುವಾಗಿ ಅನೇಕರು ಉನ್ನತ ವಿಧ್ಯಾಭ್ಯಾಸ ಹಾಗೂ ಕೆಲಸದ ನಿಮಿತ್ತ ವಿದೇಶಗಳಿಗೆ ತೆರಳುತ್ತಾರೆ. ಹಲವಾರು ಆಸೆ ಕನಸುಗಳನ್ನು ಹೊತ್ತು ತನ್ನ ತಾಯಿ ಮತ್ತು ಕುಟುಂಬದವರನ್ನು ಚೆನ್ನಾಗಿ ನೋಡಿಕೊಳ್ಳಬೇಕು ಎನ್ನುವ ಒಂದೇ ಕಾರಣದಿಂದ ಎಷ್ಟೇ ಕಷ್ಟ ಆದರೂ ಮನೆಯವರಿಂದ ದೂರವಿದ್ದು ಕೆಲಸ ಮಾಡುತ್ತಿರುತ್ತಾರೆ. ಅದೇನೇ ಆದರೂ ತಾಯಿಗೆ ಮಗನದ್ದೇ ಧ್ಯಾನ. ನನ್ನ ಮಗ ಯಾವಾಗ ಮನೆಗೆ ಬರಬಹುದು ಎಂದು ಕಾಯುತ್ತಾ ಕುಳಿತಿರುತ್ತಾಳೆ. ಮಗ ವಿದೇಶದಿಂದ ಅಥವಾ ದೂರದೂರಿನಿಂದ ಬರುತ್ತಿದ್ದಾನೆ ಎಂದು ತಿಳಿದ ತಕ್ಷಣ ತಾಯಿಯ ಖುಷಿಗೆ ಪಾರವೇ ಇರುವುದಿಲ್ಲ. ಅದರಲ್ಲೂ ತಾಯಿ ಮಗನ ಭೇಟಿಯ ಅಪೂರ್ವ ಕ್ಷಣವನ್ನು ನೋಡಲು ಎರಡು ಕಣ್ಣು ಸಾಲದು. ಇಂತಹದ್ದೇ ತಾಯಿ ಮಗನ ಭೇಟಿಯ ಕುರಿತ ಭಾವನಾತ್ಮಕ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಮಗನೊಬ್ಬ ತನ್ನ ತಾಯಿಯನ್ನು ಸುಮಾರು ಒಂದುವರೆ ವರ್ಷಗಳ ನಂತರ ಭೇಟಿಯಾದಾಗ ತಾಯಿ ತನ್ನ ಮಗನನ್ನು ನೋಡಿ ಕಣ್ತುಬಿಂಕೊಳ್ಳುವ ಹೃದಯಸ್ಪರ್ಶಿ ಕ್ಷಣವನ್ನು ಈ ವೀಡಿಯೋದಲ್ಲಿ ಸೆರೆಹಿಡಿಯಲಾಗಿದೆ.

ತಾಯಿ-ಮಗನ ಭಾಂದವ್ಯದ ಕುರಿತ ಈ ಭಾವನಾತ್ಮಕ ವೀಡಿಯೋವನ್ನು ಅನ್ಜಿಲ್ (@anzil_a) ಎಂಬವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದು, ‘ನನಗೆ ಜಗತ್ತಾಗಿರುವವರೊಂದಿಗೆ ಮತ್ತೆ ಸೇರಿದ ಕ್ಷಣ. ಒಂದುವರೆ ವರ್ಷಗಳ ಬಳಿಕ ನಾನು ನನ್ನ ಕುಟುಂಬವನ್ನು ಭೇಟಿಯಾಗಿ ಅವರನ್ನು ಆಶ್ಚರ್ಯಗೊಳಿಸಿದೆ’ ಎಂದು ಶೀರ್ಷಿಕೆಯಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ:Viral Video: ಕೆ.ಎಲ್-19 ಗಾಡಿ ಸೈಡಿಗೆ ಹಾಕಿ, ಹೇ ಹುಡುಗ ಏನೋ, ಯುವಕನ ತರ್ಲೆ ನೋಡಿ

ಈ ವೀಡಿಯೋದಲ್ಲಿ ವಿದೇಶದಲ್ಲಿದ್ದ ಮಗ ತನ್ನ ತಾಯಿಗೆ ಸರ್ಪ್ರೈಸ್ ನೀಡಬೇಕೆಂದು ಮನೆಯವರಿಗೆ ಯಾರಿಗೂ ತಿಳಿಸದೆ ತಾಯ್ನಾಡಿಗೆ ಬರುತ್ತಾನೆ. ಮಗ ಮನೆಯೊಳಗೆ ಕಾಲಿಡುತ್ತಿದ್ದಂತೆ ಮನೆಮಂದಿಗೆಲ್ಲರಿಗೂ ಮನೆಮಗನನ್ನು ಕಂಡು ಆಶ್ಚರ್ಯವಾಗುತ್ತದೆ. ಆತನನ್ನು ತಬ್ಬಿಕೊಂಡು ಮಾತನಾಡಿಸುತ್ತಾರೆ. ಬಳಿಕ ಆತ ಅಡುಗೆ ಮನೆಗೆ ಹೋಗಿ ತಾಯಿಯ ಮುಂದೆ ನಿಂತುಕೊಳ್ಳುತ್ತಾನೆ. ಹೆತ್ತ ಕರುಳಿಗೆ ತನ್ನ ಕರುಳಿನ ಕುಡಿಯನ್ನು ಕಂಡು ಆಶ್ಚರ್ಯವಾದದ್ದು ಮಾತ್ರವಲ್ಲದೆ, ಭಾವನಾತ್ಮಗೊಂಡು ಮಗನ ಮಡಿಲಿನಲ್ಲಿ ಕುಳಿತು ಅಳುವ ಭಾವನಾತ್ಮಕ ದೃಶ್ಯಾವಳಿಯನ್ನು ಕಾಣಬಹುದು.

ಇನ್ಸ್ಟಾಗ್ರಾಮ್ ನಲ್ಲಿ ವೈರಲ್ ಆಗಿರುವ ಈ ಹೃದಯಸ್ಪರ್ಶಿ ವೀಡಿಯೋ 14.3 ಮಿಲಿಯನ್ ವೀಕ್ಷಣೆಗಳನ್ನು ಹಾಗೂ 2.7 ಮಿಲಿಯನ್ ಲೈಕ್ಸ್ ಗಳನ್ನು ಪಡೆದುಕೊಂಡಿದೆ. ಸುಮಾರು 34.6 K ಕಮೆಂಟ್ಸ್ ಗಳೂ ಈ ವೀಡಿಯೋಗೆ ಹರಿದುಬಂದಿವೆ. ಒಬ್ಬ ಬಳಕೆದಾರರು ‘ಈ ವೀಡಿಯೋ ನನ್ನ ಕಣ್ಣಂಚಲ್ಲಿ ನೀರು ತರಿಸಿತು’ ಎಂದು ಕಮೆಂಟ್ ಮಾಡಿದ್ದಾರೆ. ಇನ್ನೊಬ್ಬ ಬಳಕೆದಾರರು ‘ನೀವು ನಿಮ್ಮ ತಾಯಿಯನ್ನು ನೊಡಿದಾಗ, ಪರಿಶುದ್ಧ ಪ್ರೀತಿಯನ್ನು ಕಾಣುತ್ತೀರಿ’ ಎಂದು ಹೇಳಿದ್ದಾರೆ. ಮತ್ತೊಬ್ಬ ಬಳಕೆದಾರರು ‘ಅಮ್ಮನ ಹೊರತಾಗಿ ಯಾರು ಇಲ್ಲ’ ಎಂದು ಕಮೆಂಟ್ ಮಾಡಿದ್ದಾರೆ.

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ