Viral Video: ಅರರೇ ಏನಿದು ಆಶ್ಚರ್ಯ…. ಮಳೆ ಬಂದ ಖುಷಿಯಲ್ಲಿ ಕುಣಿದಾಡಿದ ಇಲಿ

ಸಾಮಾನ್ಯವಾಗಿ ಇಲಿಗಳು ರಾತ್ರಿ  ಹೊತ್ತಿನಲ್ಲಿ  ಮನೆಯಲ್ಲಿರುವ ಇತರೆ ವಸ್ತುಗಳಾಗಿರಲಿ  ಅಥವಾ ಮನೆಯಲ್ಲಿರುವ ತರಕಾರಿಗಳನ್ನೆಲ್ಲಾ ತಿಂದು ಅಥವಾ ಕದ್ದೊಯ್ದು ಮೆಲ್ಲಗೆ ಎಸ್ಕೇಪ್‌ ಆಗುತ್ತವೆ. ಆದರೆ ಇಲ್ಲೊಂದು ಅಚ್ಚರಿಯ ಸಂಗತಿ ನಡೆದಿದ್ದು, ಮಳೆ ಬಂದ ಖುಷಿಯಲ್ಲಿ ಇಲಿಯೊಂದು ನಡು ರಸ್ತೆಯಲ್ಲಿಯೇ ಕುಣಿದು ಕುಪ್ಪಳಿಸುತ್ತಾ, ಮಳೆ ನೀರಿನಲ್ಲಿ ಆಟವಾಡಿದೆ. ಈ ಕುರಿತ ವಿಡಿಯೋವೊಂದು ಇದೀಗ ಸಖತ್‌ ವೈರಲ್‌ ಆಗಿದೆ. 

Viral Video: ಅರರೇ ಏನಿದು ಆಶ್ಚರ್ಯ.... ಮಳೆ ಬಂದ ಖುಷಿಯಲ್ಲಿ ಕುಣಿದಾಡಿದ ಇಲಿ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Jun 10, 2024 | 10:16 AM

ಸಾಮಾಜಿಕ ಜಾಲತಾಣದಲ್ಲಿ ಪ್ರಾಣಿ ಸಾಮ್ರಾಜ್ಯಗಳಿಗೆ ಸಂಬಂಧಿಸಿದ ವಿಸ್ಮಯಕಾರಿ ವಿಡಿಯೋಗಳು ಕೆಲವೊಮ್ಮೆ ಹರಿದಾಡುತ್ತಿರುತ್ತವೆ. ಇಂತಹ ದೃಶ್ಯಗಳನ್ನು ನೋಡಿದಾಗ ಅರರೇ ಏನಿದು ವಿಸ್ಮಯ, ಹೀಗೆಲ್ಲಾ ನಡೆಯೋಕೇ ಸಾಧ್ಯಾನ  ಅಂತಾ ನಮಗೆ ಭಾಸವಾಗುತ್ತದೆ. ಸದ್ಯ ಅಂತಹದೇ ಅಚ್ಚರಿಯ ಹಾಗೇನೇ ತಮಾಷೆಯ ವಿಡಿಯೋವೊಂದು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಪುಟಾಣಿ ಇಲಿಯೊಂದು ಮಳೆರಾಯ ಧರೆಗಿಳಿದ ಖುಷಿಯಲ್ಲಿ ಮಳೆ ನೀರಿನಲ್ಲಿ ಒದ್ದೆಯಾಗುತ್ತಾ  ಕುಣಿದು ಕುಪ್ಪಳಿಸುತ್ತಾ ಆಟವಾಡಿದೆ.  ಈ ಮುದ್ದಾದ ವಿಡಿಯೋ ನೆಟ್ಟಿಗರ ಮನ ಗೆದ್ದಿದೆ.

ಉರಿ ಬಿಸಿಲಿನಲ್ಲಿ ಬಸವಳಿದಾಗ ದಿಢೀರ್‌ ಮಳೆ ಬಂದೆರೆ ಅದರ ಮಜಾವೇ ಬೇರೆ. ಹೀಗೆ ಮಳೆ ಬರುವ ಸಂದರ್ಭದಲ್ಲಿ ಹೆಚ್ಚಿನವರು ಮಳೆ ನೀರಿನಲ್ಲಿ ಆಟವಾಡುತ್ತಾರೆ, ಕುಣಿದು ಕುಪ್ಪಳಿಸುತ್ತಾರೆ. ಮನುಷ್ಯರಷ್ಟೇ ಅಲ್ಲ ಪ್ರಾಣಿಗಳು ಸಹ ಮಳೆಯಲ್ಲಿ ಆಟವಾಡುತ್ತವೆ ಎಂಬುದನ್ನು ಇಲ್ಲೊಂದು ಇಲಿ ತೋರಿಸಿಕೊಟ್ಟಿದೆ.

ಈ ವಿಶೇಷ ವಿಡಿಯೋವನ್ನು AMAZINGNATURE ಎಂಬ ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.  ವೈರಲ್‌ ವಿಡಿಯೋದಲ್ಲಿ ಇಲಿಯೊಂದು ಮಳೆ ನೀರಿನಲ್ಲಿ ನೆನೆಯುತ್ತಾ ನಿಂತಿರುವ ದೃಶ್ಯವನ್ನು ಕಾಣಬಹುದು. ಜೋರಾಗಿ ಮಳೆ ಬರುವಂತಹ ಸಂದರ್ಭದಲ್ಲಿ ನಡು ರಸ್ತೆಯಲ್ಲಿದ್ದ ಇಲಿಯೊಂದು ದೇವ್ರೇ ಇಗಲಾದರೂ ಮಳೆ ಬಂತಲ್ವಾ ಎನ್ನುತ್ತಾ ಆಕಾಶದ ಕಡೆ ಮುಖ ಮಾಡಿ ಖುಷಿಯಲ್ಲಿ ಕುಣಿದಿದೆ. ಜೊತೆಗೆ ಜಿಗಿ ಜಿಗಿದು ಮಳೆ ನೀರಿನಲ್ಲಿ ಆಟವಾಡಿದೆ.

ಇದನ್ನೂ ಓದಿ: ಸಾವಿರಾರೂ ರೂ. ಪಾವತಿಸಿ ಐಷಾರಾಮಿ ಹೋಟೆಲ್‌ ರೂಮ್​​​ನಲ್ಲಿ ಮಲಗಿದ್ದ ಮಹಿಳೆಗೆ ಒಂದೇ ರಾತ್ರಿ 200ರಕ್ಕೂ ಹೆಚ್ಚು ತಿಗಣೆ ಕಡಿತ

ಜೂನ್‌ 05 ರಂದು ಹಂಚಿಕೊಳ್ಳಲಾದ ಈ ವಿಡಿಯೋ 1.5 ಮಿಲಿಯನ್‌ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಅಯ್ಯಯ್ಯೋ ಈ ದೃಶ್ಯವಂತೂ ತುಂಬಾನೇ ಮುದ್ದಾಗಿದೆ ಎಂದು ಇಲಿಯ ಖುಷಿಯ ಕುಣಿತಕ್ಕೆ ನೆಟ್ಟಿಗರು ಮನ ಸೋತಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ತಾಜಾ ಸುದ್ದಿ
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್