AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಅರರೇ ಏನಿದು ಆಶ್ಚರ್ಯ…. ಮಳೆ ಬಂದ ಖುಷಿಯಲ್ಲಿ ಕುಣಿದಾಡಿದ ಇಲಿ

ಸಾಮಾನ್ಯವಾಗಿ ಇಲಿಗಳು ರಾತ್ರಿ  ಹೊತ್ತಿನಲ್ಲಿ  ಮನೆಯಲ್ಲಿರುವ ಇತರೆ ವಸ್ತುಗಳಾಗಿರಲಿ  ಅಥವಾ ಮನೆಯಲ್ಲಿರುವ ತರಕಾರಿಗಳನ್ನೆಲ್ಲಾ ತಿಂದು ಅಥವಾ ಕದ್ದೊಯ್ದು ಮೆಲ್ಲಗೆ ಎಸ್ಕೇಪ್‌ ಆಗುತ್ತವೆ. ಆದರೆ ಇಲ್ಲೊಂದು ಅಚ್ಚರಿಯ ಸಂಗತಿ ನಡೆದಿದ್ದು, ಮಳೆ ಬಂದ ಖುಷಿಯಲ್ಲಿ ಇಲಿಯೊಂದು ನಡು ರಸ್ತೆಯಲ್ಲಿಯೇ ಕುಣಿದು ಕುಪ್ಪಳಿಸುತ್ತಾ, ಮಳೆ ನೀರಿನಲ್ಲಿ ಆಟವಾಡಿದೆ. ಈ ಕುರಿತ ವಿಡಿಯೋವೊಂದು ಇದೀಗ ಸಖತ್‌ ವೈರಲ್‌ ಆಗಿದೆ. 

Viral Video: ಅರರೇ ಏನಿದು ಆಶ್ಚರ್ಯ.... ಮಳೆ ಬಂದ ಖುಷಿಯಲ್ಲಿ ಕುಣಿದಾಡಿದ ಇಲಿ
ಮಾಲಾಶ್ರೀ ಅಂಚನ್​
| Edited By: |

Updated on: Jun 10, 2024 | 10:16 AM

Share

ಸಾಮಾಜಿಕ ಜಾಲತಾಣದಲ್ಲಿ ಪ್ರಾಣಿ ಸಾಮ್ರಾಜ್ಯಗಳಿಗೆ ಸಂಬಂಧಿಸಿದ ವಿಸ್ಮಯಕಾರಿ ವಿಡಿಯೋಗಳು ಕೆಲವೊಮ್ಮೆ ಹರಿದಾಡುತ್ತಿರುತ್ತವೆ. ಇಂತಹ ದೃಶ್ಯಗಳನ್ನು ನೋಡಿದಾಗ ಅರರೇ ಏನಿದು ವಿಸ್ಮಯ, ಹೀಗೆಲ್ಲಾ ನಡೆಯೋಕೇ ಸಾಧ್ಯಾನ  ಅಂತಾ ನಮಗೆ ಭಾಸವಾಗುತ್ತದೆ. ಸದ್ಯ ಅಂತಹದೇ ಅಚ್ಚರಿಯ ಹಾಗೇನೇ ತಮಾಷೆಯ ವಿಡಿಯೋವೊಂದು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಪುಟಾಣಿ ಇಲಿಯೊಂದು ಮಳೆರಾಯ ಧರೆಗಿಳಿದ ಖುಷಿಯಲ್ಲಿ ಮಳೆ ನೀರಿನಲ್ಲಿ ಒದ್ದೆಯಾಗುತ್ತಾ  ಕುಣಿದು ಕುಪ್ಪಳಿಸುತ್ತಾ ಆಟವಾಡಿದೆ.  ಈ ಮುದ್ದಾದ ವಿಡಿಯೋ ನೆಟ್ಟಿಗರ ಮನ ಗೆದ್ದಿದೆ.

ಉರಿ ಬಿಸಿಲಿನಲ್ಲಿ ಬಸವಳಿದಾಗ ದಿಢೀರ್‌ ಮಳೆ ಬಂದೆರೆ ಅದರ ಮಜಾವೇ ಬೇರೆ. ಹೀಗೆ ಮಳೆ ಬರುವ ಸಂದರ್ಭದಲ್ಲಿ ಹೆಚ್ಚಿನವರು ಮಳೆ ನೀರಿನಲ್ಲಿ ಆಟವಾಡುತ್ತಾರೆ, ಕುಣಿದು ಕುಪ್ಪಳಿಸುತ್ತಾರೆ. ಮನುಷ್ಯರಷ್ಟೇ ಅಲ್ಲ ಪ್ರಾಣಿಗಳು ಸಹ ಮಳೆಯಲ್ಲಿ ಆಟವಾಡುತ್ತವೆ ಎಂಬುದನ್ನು ಇಲ್ಲೊಂದು ಇಲಿ ತೋರಿಸಿಕೊಟ್ಟಿದೆ.

ಈ ವಿಶೇಷ ವಿಡಿಯೋವನ್ನು AMAZINGNATURE ಎಂಬ ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.  ವೈರಲ್‌ ವಿಡಿಯೋದಲ್ಲಿ ಇಲಿಯೊಂದು ಮಳೆ ನೀರಿನಲ್ಲಿ ನೆನೆಯುತ್ತಾ ನಿಂತಿರುವ ದೃಶ್ಯವನ್ನು ಕಾಣಬಹುದು. ಜೋರಾಗಿ ಮಳೆ ಬರುವಂತಹ ಸಂದರ್ಭದಲ್ಲಿ ನಡು ರಸ್ತೆಯಲ್ಲಿದ್ದ ಇಲಿಯೊಂದು ದೇವ್ರೇ ಇಗಲಾದರೂ ಮಳೆ ಬಂತಲ್ವಾ ಎನ್ನುತ್ತಾ ಆಕಾಶದ ಕಡೆ ಮುಖ ಮಾಡಿ ಖುಷಿಯಲ್ಲಿ ಕುಣಿದಿದೆ. ಜೊತೆಗೆ ಜಿಗಿ ಜಿಗಿದು ಮಳೆ ನೀರಿನಲ್ಲಿ ಆಟವಾಡಿದೆ.

ಇದನ್ನೂ ಓದಿ: ಸಾವಿರಾರೂ ರೂ. ಪಾವತಿಸಿ ಐಷಾರಾಮಿ ಹೋಟೆಲ್‌ ರೂಮ್​​​ನಲ್ಲಿ ಮಲಗಿದ್ದ ಮಹಿಳೆಗೆ ಒಂದೇ ರಾತ್ರಿ 200ರಕ್ಕೂ ಹೆಚ್ಚು ತಿಗಣೆ ಕಡಿತ

ಜೂನ್‌ 05 ರಂದು ಹಂಚಿಕೊಳ್ಳಲಾದ ಈ ವಿಡಿಯೋ 1.5 ಮಿಲಿಯನ್‌ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಅಯ್ಯಯ್ಯೋ ಈ ದೃಶ್ಯವಂತೂ ತುಂಬಾನೇ ಮುದ್ದಾಗಿದೆ ಎಂದು ಇಲಿಯ ಖುಷಿಯ ಕುಣಿತಕ್ಕೆ ನೆಟ್ಟಿಗರು ಮನ ಸೋತಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ