AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ; ಪೆಟ್ರೋಲ್​ನಿಂದ ತನ್ನ ಬೈಕ್​​ ತೊಳೆದುಕೊಂಡ ಭೂಪನೀಗ ಜೈಲಿನಲ್ಲಿ

Amroha : ಹಗ್ಗ ಕೊಟ್ಟು ಕೈ ಕಟ್ಟಿಸಿಕೊಳ್ಳುವಂಥಾಗಿದೆ ಈ ರೀಲಿಗನ ಪರಿಸ್ಥಿತಿ. ಇವನ ವಿಡಿಯೋಗಳು ವೈರಲ್ ಆಗುತ್ತಿದ್ದಂತೆ ಪೊಲೀಸರು ಈತನನ್ನು ಮತ್ತು ಈತನ ಸಹಚರರನ್ನು ಬಂಧಿಸಿದ್ದಾರೆ. ಇನ್ನಾದರೂ ರೀಲಿಗರು ಎಚ್ಚೆತ್ತುಕೊಳ್ಳುತ್ತಾರೆಯೇ?

ಉತ್ತರ ಪ್ರದೇಶ; ಪೆಟ್ರೋಲ್​ನಿಂದ ತನ್ನ ಬೈಕ್​​ ತೊಳೆದುಕೊಂಡ ಭೂಪನೀಗ ಜೈಲಿನಲ್ಲಿ
ಪೆಟ್ರೋಲ್​ ಬಂಕ್​ನಲ್ಲಿ ತನ್ನ ಗಾಡಿಯನ್ನು ಪೆಟ್ರೋಲ್​ನಿಂದ ತೊಳೆಯುತ್ತಿರುವ ಯುವಕ
ಶ್ರೀದೇವಿ ಕಳಸದ
ಶ್ರೀದೇವಿ ಕಳಸದ| Edited By: |

Updated on:Aug 01, 2023 | 11:09 AM

Share

Uttar Pradesh : ರೀಲಿಗರ ಹುಚ್ಚಾಟಗಳಿಗೆ ಎಣೆಯೇ ಇಲ್ಲದಂತಾಗಿದೆ. ವಿನಾಕಾರಣ ತಮ್ಮನ್ನೂ ಮತ್ತಿತರರನ್ನೂ ಅಪಾಯಕ್ಕೆ ಒಡ್ಡಿಕೊಳ್ಳುವ ಇವರ ಆಟಗಳನ್ನು ನೋಡಿ ನೋಡಿ ನೆಟ್ಟಿಗರಂತೂ ಕೆಂಡಾಮಂಡಲವಾಗುತ್ತಿದ್ದಾರೆ. ಅಷ್ಟಕ್ಕೆ ಸುಮ್ಮನಾಗದೆ ಪೊಲೀಸರ ಗಮನಕ್ಕೂ ತರುತ್ತಿದ್ದಾರೆ. ಇದೀಗ ವೈರಲ್ ಆಗಿರುವ ಈ ವಿಡಿಯೋದಲ್ಲಿ ಯುವಕನೊಬ್ಬ ಪೆಟ್ರೋಲ್​ ಬಂಕ್​ನಲ್ಲಿ ತನ್ನ ಬೈಕ್​ಗೆ ಸ್ವತಃ ಪೆಟ್ರೋಲ್​ ತುಂಬಿಸಿಕೊಂಡದ್ದಲ್ಲದೇ ಬೈಕ್​ ಅನ್ನು ಪೆಟ್ರೋಲ್​ನಿಂದ ತೊಳೆದಿದ್ದಾನೆ. ಅವನ ಈ ಸಾಹಸಕ್ಕೆ ಅಮ್ರೋಹ್​ (Amroha) ಪೊಲೀಸರು ಕಂಬಿಯ ಹಿಂದೆ ವಿಶೇಷ ಆತಿಥ್ಯವನ್ನು ನೀಡಿ ಸನ್ಮಾನಿಸುತ್ತಿದ್ದಾರೆ.

ಈ ಯುವಕ ನೀರಿನ ಪೈಪ್​ನಂತೆ ಪೆಟ್ರೋಲ್​ ಪೈಪ್​ ಅನ್ನು ಬೈಕಿಗೆ ಹಿಡಿದು ತನ್ನ ಬೈಕನ್ನು ಸ್ಚಚ್ಛ ತೊಳೆದುಕೊಂಡಿದ್ದಾನೆ. ಈ ವಿಡಿಯೋ ಅನ್ನು ಸಚಿನ್​ ಗುಪ್ತಾ ಎನ್ನುವವರು ಜು. 27ರಂದು ಟ್ವೀಟ್​ ಮಾಡಿ ಅಮ್ರೋಹ್​ ಪೊಲೀಸರನ್ನು ಟ್ಯಾಗ್ ಮಾಡಿದ್ದಾರೆ. ಪರಿಣಾಮವಾಗಿ ಪೊಲೀಸರು ಈ ಪ್ರಕರಣಕ್ಕೆ ಸಂಬಂಧಿಸಿ ಕ್ರಮ ಕೈಗೊಂಡಿದ್ದಾರೆ. ಈ ಯುವಕನ ಬೈಕ್​ ಸಾಹಸದ ಇನ್ನೊಂದು ವಿಡಿಯೋ ಅನ್ನು ಸಚಿನ್​ ಟ್ವೀಟ್ ಮಾಡಿದ್ದಾರೆ.

‘ಈ  ಯುವಕನೊಂದಿಗೆ ಈ ಕೃತ್ಯವನ್ನು ವಿರೋಧಿಸದ ಪೆಟ್ರೋಲ್​ ಬಂಕ್​ ಸಿಬ್ಬಂದಿಯನ್ನೂ ಮತ್ತು ಇನ್ನೊಂದು ವಿಡಿಯೋದಲ್ಲಿ ಈ ಯುವಕನೊಂದಿಗೆ ಮಡ್​​ಗಾರ್ಡ್​ ಮೇಲೆ ಕುಳಿತ ಸಹಚರನನ್ನು ಕೂಡ ಬಂಧಿಸಲಾಗಿದೆ. ಅಲ್ಲದೇ ಈತನ ಬೈಕ್ ಅನ್ನೂ ವಶಕ್ಕೆ ತೆಗೆದುಕೊಳ್ಳಲಾಗಿದೆ’ ಎಂದು ಅಮ್ರೋಹ್​ ಪೊಲೀಸರು ಇದೇ ಟ್ವೀಟಿನಡಿ ಸಾಕ್ಷಿ ಸಮೇತ ಟ್ವೀಟ್ ಮಾಡಿದ್ದಾರೆ.

ಪೆಟ್ರೋಲ್ ಮಾಲೀಕರು ಹೇಗೆ ಇವನಿಗೆ ಹೀಗೆಲ್ಲ ಮಾಡಲು ಅನುಮತಿ ಕೊಟ್ಟಿದ್ದಾರೆ? ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳ ಗಮನ ಸೆಳೆಯಲು ಇಂಥವರು ಏನನ್ನೂ ಮಾಡಲು ತಯಾರು. ಜೈಲಿಗೆ ಹೋಗಿ ಬಂದರೂ ಇವರಿಗೆ ಅವಮಾನ ಎನ್ನುವುದೇ ಇರುವುದಿಲ್ಲ ಅಂತೆಲ್ಲ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 10:43 am, Tue, 1 August 23

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ