AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ; ಪೆಟ್ರೋಲ್​ನಿಂದ ತನ್ನ ಬೈಕ್​​ ತೊಳೆದುಕೊಂಡ ಭೂಪನೀಗ ಜೈಲಿನಲ್ಲಿ

Amroha : ಹಗ್ಗ ಕೊಟ್ಟು ಕೈ ಕಟ್ಟಿಸಿಕೊಳ್ಳುವಂಥಾಗಿದೆ ಈ ರೀಲಿಗನ ಪರಿಸ್ಥಿತಿ. ಇವನ ವಿಡಿಯೋಗಳು ವೈರಲ್ ಆಗುತ್ತಿದ್ದಂತೆ ಪೊಲೀಸರು ಈತನನ್ನು ಮತ್ತು ಈತನ ಸಹಚರರನ್ನು ಬಂಧಿಸಿದ್ದಾರೆ. ಇನ್ನಾದರೂ ರೀಲಿಗರು ಎಚ್ಚೆತ್ತುಕೊಳ್ಳುತ್ತಾರೆಯೇ?

ಉತ್ತರ ಪ್ರದೇಶ; ಪೆಟ್ರೋಲ್​ನಿಂದ ತನ್ನ ಬೈಕ್​​ ತೊಳೆದುಕೊಂಡ ಭೂಪನೀಗ ಜೈಲಿನಲ್ಲಿ
ಪೆಟ್ರೋಲ್​ ಬಂಕ್​ನಲ್ಲಿ ತನ್ನ ಗಾಡಿಯನ್ನು ಪೆಟ್ರೋಲ್​ನಿಂದ ತೊಳೆಯುತ್ತಿರುವ ಯುವಕ
ಶ್ರೀದೇವಿ ಕಳಸದ
| Edited By: |

Updated on:Aug 01, 2023 | 11:09 AM

Share

Uttar Pradesh : ರೀಲಿಗರ ಹುಚ್ಚಾಟಗಳಿಗೆ ಎಣೆಯೇ ಇಲ್ಲದಂತಾಗಿದೆ. ವಿನಾಕಾರಣ ತಮ್ಮನ್ನೂ ಮತ್ತಿತರರನ್ನೂ ಅಪಾಯಕ್ಕೆ ಒಡ್ಡಿಕೊಳ್ಳುವ ಇವರ ಆಟಗಳನ್ನು ನೋಡಿ ನೋಡಿ ನೆಟ್ಟಿಗರಂತೂ ಕೆಂಡಾಮಂಡಲವಾಗುತ್ತಿದ್ದಾರೆ. ಅಷ್ಟಕ್ಕೆ ಸುಮ್ಮನಾಗದೆ ಪೊಲೀಸರ ಗಮನಕ್ಕೂ ತರುತ್ತಿದ್ದಾರೆ. ಇದೀಗ ವೈರಲ್ ಆಗಿರುವ ಈ ವಿಡಿಯೋದಲ್ಲಿ ಯುವಕನೊಬ್ಬ ಪೆಟ್ರೋಲ್​ ಬಂಕ್​ನಲ್ಲಿ ತನ್ನ ಬೈಕ್​ಗೆ ಸ್ವತಃ ಪೆಟ್ರೋಲ್​ ತುಂಬಿಸಿಕೊಂಡದ್ದಲ್ಲದೇ ಬೈಕ್​ ಅನ್ನು ಪೆಟ್ರೋಲ್​ನಿಂದ ತೊಳೆದಿದ್ದಾನೆ. ಅವನ ಈ ಸಾಹಸಕ್ಕೆ ಅಮ್ರೋಹ್​ (Amroha) ಪೊಲೀಸರು ಕಂಬಿಯ ಹಿಂದೆ ವಿಶೇಷ ಆತಿಥ್ಯವನ್ನು ನೀಡಿ ಸನ್ಮಾನಿಸುತ್ತಿದ್ದಾರೆ.

ಈ ಯುವಕ ನೀರಿನ ಪೈಪ್​ನಂತೆ ಪೆಟ್ರೋಲ್​ ಪೈಪ್​ ಅನ್ನು ಬೈಕಿಗೆ ಹಿಡಿದು ತನ್ನ ಬೈಕನ್ನು ಸ್ಚಚ್ಛ ತೊಳೆದುಕೊಂಡಿದ್ದಾನೆ. ಈ ವಿಡಿಯೋ ಅನ್ನು ಸಚಿನ್​ ಗುಪ್ತಾ ಎನ್ನುವವರು ಜು. 27ರಂದು ಟ್ವೀಟ್​ ಮಾಡಿ ಅಮ್ರೋಹ್​ ಪೊಲೀಸರನ್ನು ಟ್ಯಾಗ್ ಮಾಡಿದ್ದಾರೆ. ಪರಿಣಾಮವಾಗಿ ಪೊಲೀಸರು ಈ ಪ್ರಕರಣಕ್ಕೆ ಸಂಬಂಧಿಸಿ ಕ್ರಮ ಕೈಗೊಂಡಿದ್ದಾರೆ. ಈ ಯುವಕನ ಬೈಕ್​ ಸಾಹಸದ ಇನ್ನೊಂದು ವಿಡಿಯೋ ಅನ್ನು ಸಚಿನ್​ ಟ್ವೀಟ್ ಮಾಡಿದ್ದಾರೆ.

‘ಈ  ಯುವಕನೊಂದಿಗೆ ಈ ಕೃತ್ಯವನ್ನು ವಿರೋಧಿಸದ ಪೆಟ್ರೋಲ್​ ಬಂಕ್​ ಸಿಬ್ಬಂದಿಯನ್ನೂ ಮತ್ತು ಇನ್ನೊಂದು ವಿಡಿಯೋದಲ್ಲಿ ಈ ಯುವಕನೊಂದಿಗೆ ಮಡ್​​ಗಾರ್ಡ್​ ಮೇಲೆ ಕುಳಿತ ಸಹಚರನನ್ನು ಕೂಡ ಬಂಧಿಸಲಾಗಿದೆ. ಅಲ್ಲದೇ ಈತನ ಬೈಕ್ ಅನ್ನೂ ವಶಕ್ಕೆ ತೆಗೆದುಕೊಳ್ಳಲಾಗಿದೆ’ ಎಂದು ಅಮ್ರೋಹ್​ ಪೊಲೀಸರು ಇದೇ ಟ್ವೀಟಿನಡಿ ಸಾಕ್ಷಿ ಸಮೇತ ಟ್ವೀಟ್ ಮಾಡಿದ್ದಾರೆ.

ಪೆಟ್ರೋಲ್ ಮಾಲೀಕರು ಹೇಗೆ ಇವನಿಗೆ ಹೀಗೆಲ್ಲ ಮಾಡಲು ಅನುಮತಿ ಕೊಟ್ಟಿದ್ದಾರೆ? ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳ ಗಮನ ಸೆಳೆಯಲು ಇಂಥವರು ಏನನ್ನೂ ಮಾಡಲು ತಯಾರು. ಜೈಲಿಗೆ ಹೋಗಿ ಬಂದರೂ ಇವರಿಗೆ ಅವಮಾನ ಎನ್ನುವುದೇ ಇರುವುದಿಲ್ಲ ಅಂತೆಲ್ಲ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 10:43 am, Tue, 1 August 23

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ