AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕಾರಿನಡಿಯಲ್ಲಿ ಸಿಲುಕಿಕೊಂಡಿದ್ದ 15 ಅಡಿ ಉದ್ದದ ಕಾಳಿಂಗ ಸರ್ಪವನ್ನು ರಕ್ಷಿಸಿದ ಉರಗ ತಜ್ಞ

ವ್ಯಕ್ತಿಯೊಬ್ಬರು ಕಾರಿನಡಿಯಲ್ಲಿ ಅಡಗಿ ಕುಳಿತಿದ್ದ ಕೋಬ್ರಾವನ್ನು ರಕ್ಷಿಸಿ ಸುರಕ್ಷಿತವಾಗಿ ಕಾಡಿಗೆ ಬಿಡುವ ವೀಡಿಯೋ ವೈರಲ್ ಆಗಿದ್ದು, ಈ ವೀಡಿಯೋ ಕ್ಲಿಪ್ ನ್ನು ಅರಣ್ಯಾಧಿಕಾರಿ ಸುಸಾಂತ ನಂದಾ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

Viral Video: ಕಾರಿನಡಿಯಲ್ಲಿ ಸಿಲುಕಿಕೊಂಡಿದ್ದ 15 ಅಡಿ ಉದ್ದದ ಕಾಳಿಂಗ ಸರ್ಪವನ್ನು ರಕ್ಷಿಸಿದ ಉರಗ ತಜ್ಞ
ವೈರಲ್​​ ವೀಡಿಯೊ
ಮಾಲಾಶ್ರೀ ಅಂಚನ್​
| Edited By: |

Updated on: May 08, 2023 | 5:13 PM

Share

ಯಾವುದೇ ಹಾವುಗಳಾದರೂ ಸರಿ, ಅವುಗಳು ಮಾನವನ ಆವಾಸಸ್ಥಾನಗಳಿಂದ ದೂರವಿದ್ದು ಕಾಡುಗಳಲ್ಲಿ ವಾಸಿಸಲು ಬಯಸುತ್ತವೆ. ಈ ಮಳೆಗಾಲದಲ್ಲಿ ಅವುಗಳು ಅರಣ್ಯಗಳಿಗೆ ಸಮೀಪದಲ್ಲಿರುವ ಮಾನವ ಆವಾಸಸ್ಥಾನಗಳಿಗೆ ಆಹಾರ ಮತ್ತು ಸುರಕ್ಷತೆಯ ಹುಡುಕಾಟಕ್ಕಾಗಿ ಬರುತ್ತಿರುತ್ತವೆ. ಈ ರೀತಿ ಬಂದಂತಹ ಹಾವುಗಳನ್ನು ಅದೆಷ್ಟೋ ಜನ ಉರಗ ತಜ್ಞರನ್ನು ಕರೆದಂತು ಹಾವುಗಳನ್ನು ಸುರಕ್ಷಿತವಾಗಿ ಕಾಡಿಗೆ ಬಿಟ್ಟುಬರುವಂತೆ ಮಾಡುತ್ತಾರೆ. ಅದೇ ರೀತಿ ಇಲ್ಲೊಂದು ಘಟನೆ ನಡೆದಿದ್ದು, ಬರೋಬ್ಬರಿ 15 ಫೀಟ್ ಉದ್ದದ ಕಾಳಿಂಗ ಸರ್ಪವನ್ನು ರಕ್ಷಿಸಿ ಕಾಡಿಗೆ ಬಿಟ್ಟಿದ್ದು, ಈ ವಿಡಿಯೋ ಟ್ವಿಟರ್ ನಲ್ಲಿ ವೈರಲ್ ಆಗಿದೆ.

ಇದೀಗ ವೈರಲ್ ಆಗಿರುವ ವೀಡಿಯೋವನ್ನು ಅರಣ್ಯಾಧಿಕಾರಿ ಸುಸಂತ ನಂದಾ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದು ಹಾಗೂ ‘ಹಾವು ಹಿಡಿಯುವ ಕಾರ್ಯಾಚರಣೆಯನ್ನು ತರಬೇತಿ ಪಡೆದ ಉರಗ ತಜ್ಞರಿಂದ ಮಾಡಲಾಗುತ್ತದೆ. ದಯವಿಟ್ಟು ನೀವು ಈ ರೀತಿಯ ಪ್ರಯತ್ನ ಮಾಡಬೇಡಿ’ ಎಂದು ಎಚ್ಚರಿಕೆಯನ್ನು ನೀಡಿದ್ದಾರೆ. ಮನೆಯೊಂದರಲ್ಲಿ ಕಾಣಿಸಿಕೊಂಡ 15 ಅಡಿ ಉದ್ದದ ಕಿಂಗ್ ಕೋಬ್ರಾವನ್ನು ಉರಗ ತಜ್ಞರೊಬ್ಬರು ರಕ್ಷಿಸಿ, ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ.

ಇದನ್ನೂ ಓದಿ:ಅಬ್ಬಾ ಕೆಲಸ ಮುಗೀತಪ್ಪಾ! ಬಿಬಿಸಿ ಸುದ್ದಿವಾಚಕಿಯ ಲೈವ್​ ನ್ಯೂಸ್​ ತುಣುಕು ವೈರಲ್

ಮನೆಯೊಂದರ ಬಳಿ ನಿಲ್ಲಿಸಿದ ಕಾರಿನಡಿಯಲ್ಲಿ ಅಡಗಿ ಕೂತಿದ್ದ ಕಾಳಿಂಗ ಸರ್ಪವನ್ನು ನುರಿತ ಉರಗ ತಜ್ಞರು ಮೊಣಚಾದ ಹಾವು ಹಿಡಿಯುವ ಸ್ಟಿಕ್ ಸಹಾಯದಿಂದ ಹಿಡಿದು ನಂತರ ಆ ದೈತ್ಯ ಕಾಳಿಂಗ ಸರ್ಪವನ್ನು ಉದ್ದನೆಯ ಚೀಲಕ್ಕೆ ಹಾಕಿ, ಸುರಕ್ಷಿತವಾಗಿ ಕಾಡಿಗೆ ಬಿಡುವ ದೃಶ್ಯವನ್ನು ವೈರಲ್ ವೀಡಿಯೋ ಕ್ಲಿಪ್​​​ನಲ್ಲಿ ಕಾಣಬಹುದು.

ಟ್ವಿಟರ್​​ನಲ್ಲಿ ವೈರಲ್ ಆಗಿರುವ ಈ ವೀಡಿಯೋ ಸುಮಾರು 31.2 ಸಾವಿರ ವೀಕ್ಷಣೆಗಳನ್ನು ಹಾಗೂ 1.5 ಸಾವಿರ ಲೈಕ್ಸ್ ಗಳನ್ನು ಪಡೆದುಕೊಂಡಿದೆ. ಹಾಗೂ ಅನೇಕರು ಕಮೆಂಟ್ ಮಾಡುವ ಮೂಲಕ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ಒಬ್ಬ ಬಳಕೆದಾರರು ‘ಉತ್ತಮ ವೀಡಿಯೋ. ಈ ಹಾವು ಹಿಡಿಯುವವರು ತುಂಬಾ ಧೈರ್ಯಶಾಲಿ’ ಎಂದು ಕಮೆಂಟ್ ಮಾಡಿದ್ದಾರೆ. ಇನ್ನೊಬ್ಬ ಬಳಕೆದಾರರು ನಾನು ಯಾವಾಗಲೂ ಕೇಳಲು ಬಯಸುವ ಈ ಬ್ಯಾಗ್​​ನ ಬಗ್ಗೆ ಒಂದು ಪ್ರಶ್ನೆ ಇದೆ. ಚೀಲವನ್ನು ಹೊತ್ತೊಯ್ಯುವಾಗ ಅವು ಕಚ್ಚುವುದಿಲ್ಲವೇ, ವಿಶೇಷವಾಗಿ ಆ ವಿಷಕಾರಿ ಹಾವುಗಳು’ ಎಂದು ತಮ್ಮ ಕುತೂಹಲದ ಬಗ್ಗೆ ಕೇಳಿದ್ದಾರೆ. ಇನ್ನು ಅನೇಕ ಬಳಕೆದಾರರು ಹಾವನ್ನು ರಕ್ಷಿಸಿದ್ದಕ್ಕಾಗಿ ಇದು ತುಂಬಾ ಒಳ್ಳೆಯ ಕಾರ್ಯ ಎಂದು ಕಮೆಂಟ್ ಮಾಡಿದ್ದಾರೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ