AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಮಸಾಲೆ ದೋಸೆಯೊಂದಿಗೆ ಸಾಂಬಾರ್ ನೀಡದಿದ್ದಕ್ಕೆ ರೆಸ್ಟೋರೆಂಟ್‌ಗೆ 3,500 ರೂ. ದಂಡ

ಬಿಹಾರದ ರೆಸ್ಟೊರೆಂಟ್‌ಗೆ ದೋಸೆಯೊಂದಿಗೆ ಸಾಂಬಾರ್ ನೀಡದಿದ್ದಕ್ಕೆ 3500 ರೂ ದಂಡ ವಿಧಿಸಲಾಗಿದೆ. ಈ ಒಂದು ವಿಶಿಷ್ಟ ಪ್ರಕರಣ ಎಲ್ಲೆಡೆ ವೈರಲ್​ ಆಗಿದೆ.

Viral News: ಮಸಾಲೆ ದೋಸೆಯೊಂದಿಗೆ ಸಾಂಬಾರ್ ನೀಡದಿದ್ದಕ್ಕೆ ರೆಸ್ಟೋರೆಂಟ್‌ಗೆ 3,500 ರೂ. ದಂಡ
ಸಾಂದರ್ಭಿಕ ಚಿತ್ರImage Credit source: Vismai Food
ಅಕ್ಷತಾ ವರ್ಕಾಡಿ
|

Updated on: Jul 13, 2023 | 6:33 PM

Share

ಬಿಹಾರದ ರೆಸ್ಟೊರೆಂಟ್‌ಗೆ ದೋಸೆಯೊಂದಿಗೆ ಸಾಂಬಾರ್ ನೀಡದಿದ್ದಕ್ಕೆ 3500 ರೂ ದಂಡ ವಿಧಿಸಲಾಗಿದೆ. ಈ ಒಂದು ವಿಶಿಷ್ಟ ಪ್ರಕರಣ ಎಲ್ಲೆಡೆ ವೈರಲ್​ ಆಗಿದೆ. ಗ್ರಾಹಕರೊಬ್ಬರು ರೆಸ್ಟೋರೆಂಟ್‌ ಒಂದರಿಂದ ರಾತ್ರಿ ಹೊತ್ತು ಮನೆಗೆ ಮಸಾಲ್​ ದೋಸೆ ಪಾರ್ಸೆಲ್​​ ತೆಗೆದುಕೊಂಡು ಹೋಗಿದ್ದಾರೆ. ಮನೆಗೆ ಹೋಗಿ ಪಾರ್ಸೆಲ್​​ ತೆರೆದ ಮೇಲೆ ದೋಸೆಯೊಂದಿಗೆ ಬರೀ ಚಟ್ನಿ ಮಾತ್ರ ಇರುವುದನ್ನು ಗಮನಿಸಿದ್ದು, ರೆಸ್ಟೋರೆಂಟ್‌ ಸಿಬ್ಬಂದಿಗಳ ಬೇಜಾವಬ್ದಾರಿ ವರ್ತನೆಗೆ 3,500 ರೂ. ದಂಡ ವಿಧಿಸುವ ಕುರಿತು ಕೋರ್ಟ್​ ಮೆಟ್ಟಿಲೇರಿದ್ದಾರೆ.

ಒಂದು ವರ್ಷದ ಹಿಂದಿನ ಘಟನೆ:

ಬಾಂಗ್ಲಾ ಘಾಟ್‌ನ ನಿವಾಸಿ ಮನೀಶ್ ಪಾಠಕ್ ಆಗಸ್ಟ್ 15, 2022 ರಂದು ಗೋಲಾ ಮಾರ್ಕೆಟ್‌ನಲ್ಲಿರುವ ರೆಸ್ಟೋರೆಂಟ್‌ಗೆ ಹೋಗಿ ಸ್ಪೆಷಲ್ ಮಸಾಲಾ ದೋಸೆಗೆ ಆರ್ಡರ್ ಮಾಡಿದ್ದರು. ಅವರ ಹುಟ್ಟು ಹಬ್ಬದ ಪ್ರಯುಕ್ತ ರಾತ್ರಿಯ ಊಟ ಹೊರಗಡೆಯಿಂದ ತರಲು ನಿರ್ಧರಿಸಿದ್ದರು. 140 ರೂಪಾಯಿ ಕೊಟ್ಟು ಮನೆಗೆ ವಾಪಸ್ ಪಾರ್ಸೆಲ್ ತೆಗೆದುಕೊಂಡು ಬಂದು, ಪಾರ್ಸೆಲ್ ತೆರೆದಾಗ ಸಾಂಬಾರ್ ಇರಲಿಲ್ಲ. ದೋಸೆ ಮತ್ತು ಚಟ್ನಿ ಮಾತ್ರ ಇತ್ತು. ದೋಸೆ ತಿನ್ನುವಾಗ ಸಾಂಬಾರ್ ಮುಖ್ಯ. ರಾತ್ರಿಯ ಸಮಯವಾದ್ದರಿಂದ ಮರುದಿನ ಬೆಳಗ್ಗೆ ರೆಸ್ಟೋರೆಂಟ್‌ಗೆ ಹೋಗಿ ಮಾಲೀಕರಿಗೆ ದೂರು ನೀಡಿದ್ದರು. ಆದರೆ ರೆಸ್ಟೋರೆಂಟ್‌ ಮಾಲೀಕರ ಸರಿಯಾದ ಪ್ರತಿಕ್ರಿಯೆ ನೀಡದೆ ಇರುವ ಕಾರಣದಿಂದಾಗಿ .ಇದು ಗ್ರಾಹಕರ ನಂಬಿಕೆಗೆ ವಂಚನೆ ಪ್ರಕರಣವಾಗಿರುವುದರಿಂದ ಗ್ರಾಹಕ ಆಯೋಗದಲ್ಲಿ ಪ್ರಕರಣ ದಾಖಲಿಸಲು ನಿರ್ಧರಿಸಿದೆ ಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಪ್ರವಾಹ ಪರಿಸ್ಥಿತಿಯನ್ನು ಪರಿಶೀಲಿಸಲು ಬಂದ ಶಾಸಕನಿಗೆ ಕಪಾಳಮೋಕ್ಷ ಮಾಡಿದ ಮಹಿಳೆ

ಇದೀಗಾ 11 ತಿಂಗಳ ವಿಚಾರಣೆಯ ನಂತರ ತೀರ್ಪು ಬಂದಿದ್ದು, ಅದರಂತೆ ಪ್ರಕರಣದ ವೇಳೆ ಮಾನಸಿಕ ಮತ್ತು ದೈಹಿಕ ಒತ್ತಡಕ್ಕೆ 2000 ರೂ., ನ್ಯಾಯಾಲಯದ ಖರ್ಚಿಗೆ 1500 ರೂ. ದಂಡ ಒಟ್ಟಾಗಿ 3500 ದಂಡವಿಧಿಸಲಾಗಿದ್ದು, ನ್ಯಾಯಾಲಯ ನನ್ನ ಪರವಾಗಿ ತೀರ್ಪು ನೀಡಿರುವುದು ಸಂತಸ ತಂದಿದೆ ಎಂದು ಹೇಳಿದ್ದಾರೆ ಗ್ರಾಹಕ ಮನೀಶ್ ಪಾಠಕ್. ದಂಡ ನಿಗದಿತ ಸಮಯದಲ್ಲಿ ಪಾವತಿಸದಿದ್ದರೆ, ಬಡ್ಡಿ ಸಮೇತವಾಗಿ ಹೆಚ್ಚಿನ ದರ ಪಾವತಿಸಬೇಕಾಗುತ್ತದೆ ಎಂದು ನ್ಯಾಯಲಯ ಎಚ್ಚರಿಸಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್