AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಕಾಲ ಸರಿದಂತೆ ಮರೆಯಾಗುತ್ತಿದೆ ಸಾಂಪ್ರದಾಯಿಕ ಉಗ್ರಾಣ ಈ ಭತ್ತದ ಕಣಜ

ಕೃಷಿಕರ ಬದುಕಿನ ಚಿತ್ರಣದ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಕೃಷಿಕರು ತಾವು ಬೆಳೆದ ಬೆಳೆಯನ್ನು ಸಾಂಪ್ರದಾಯಿಕ ವಿಧಾನ ಬಳಸಿ ಹೇಗೆ ಶೇಖರಿಸಿ ಇಡುತ್ತಿದ್ದರು ಎನ್ನುವುದಕ್ಕೆ ಈ ವಿಡಿಯೋ ಸಾಕ್ಷಿ. ಈ ಭತ್ತದ ಕಣಜದ ವಿಡಿಯೋ ಸದ್ಯ ವೈರಲ್ ಆಗಿದ್ದು, ನೆಟ್ಟಿಗರ ಗಮನ ಸೆಳೆಯುತ್ತಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಕಾಲ ಸರಿದಂತೆ ಮರೆಯಾಗುತ್ತಿದೆ ಸಾಂಪ್ರದಾಯಿಕ ಉಗ್ರಾಣ ಈ ಭತ್ತದ ಕಣಜ
ವೈರಲ್ ವಿಡಿಯೋImage Credit source: Instagram
ಸಾಯಿನಂದಾ
|

Updated on: Dec 23, 2025 | 1:23 PM

Share

ಹಳ್ಳಿಯ ಬದುಕು (Village life), ಕೃಷಿಕರ ಜೀವನ ಹಾಗೂ ಅವರು ಮಾಡುವ ಕೆಲಸವನ್ನು ನೋಡುವಾಗ ಎಷ್ಟು ಶ್ರಮ ಜೀವಿಗಳು ಇವರು ಎಂದೆನಿಸುವುದು ಸಹಜ. ಆದರೆ ಹೀಗೆಲ್ಲಾ ಕೃಷಿ ಚಟುವಟಿಕೆಗಳಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಹಿಂದೆಲ್ಲಾ ಉಳುಮೆ, ಪೈರು ಬಿತ್ತನೆಯಿಂದ ಹಿಡಿದು ಭತ್ತದಿಂದ ಅಕ್ಕಿ ಮಾಡುವ ವಿಧಾನಗಳೆಲ್ಲಾ ಸಾಂಪ್ರದಾಯಿಕವಾಗಿದ್ದವು. ಹೌದು, ಹಿಂದೆ ಭತ್ತದ ಕಣಜ ಮಾಡಿ ಬೆಳೆದ ಭತ್ತವನ್ನು ಸಂಗ್ರಹಿಸಿಡುತ್ತಿದ್ದ ವಿಡಿಯೋ ವೈರಲ್ ಆಗಿದೆ. ಕೃಷಿಕರ ಶ್ರಮದ ಬದುಕಿನ ಜತೆಗೆ ಕೃಷಿಯಲ್ಲಿ ಸಾಂಪ್ರದಾಯಿಕ ವಿಧಾನಗಳ (traditional method) ಅಳವಡಿಕೆ ನೆಟ್ಟಿಗರ ಹುಬ್ಬೇರುವಂತೆ ಮಾಡಿದೆ.

ಕಡಲ ತೀರ (Kadala teera) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಕೃಷಿಕರ ಬದುಕಿನ ಚಿತ್ರಣವನ್ನು ತೆರೆದಿಡಲಾಗಿದೆ. ಈ ವಿಡಿಯೋಗೆ ಭಟ್ರ ಮನೆಯ ಕಣಜ – ಮಲೆನಾಡು ಅಥವಾ ಕರಾವಳಿಯ ಸಾಂಪ್ರದಾಯಿಕ ಕೃಷಿಕ ಬದುಕಿನ ಸಮೃದ್ಧಿ ಮತ್ತು ಸಂಸ್ಕೃತಿಯ ಪ್ರತಿಬಿಂಬ. ಕಷ್ಟಪಟ್ಟು ಬೆಳೆದ ಭತ್ತವನ್ನು ಮಳೆ, ಗಾಳಿ ಮತ್ತು ಕೀಟಗಳಿಂದ ರಕ್ಷಸಿ, ಮುಂದಿನ ವರ್ಷದ ಬಿತ್ತನೆಗೆ ಹಾಗೂ ಬಳಕೆಗೆ ಸುರಕ್ಷಿತವಾಗಿ ಸಂಗ್ರಹಿಸಿಡುವ ಸಾಂಪ್ರದಾಯಿಕ ಉಗ್ರಾಣವೇ ಈ ‘ಭತ್ತದ ಕಣಜ’ ಎಂದು ಶೀರ್ಷಿಕೆಯಲ್ಲಿ ಬರೆಯಲಾಗಿದೆ. ರೈತರೆಲ್ಲಾ ಸೇರಿಕೊಂಡು ಮನೆಯ ಅಂಗಳದಲ್ಲಿ ಹುಲ್ಲನ್ನು ಬಳಸಿ ಭತ್ತದ ಕಣಜವನ್ನು ಮಾಡುತ್ತಿರುವುದನ್ನು ಕಾಣಬಹುದು.

ವೈರಲ್‌ ವಿಡಿಯೋ ಇಲ್ಲಿದೆ ನೋಡಿ

ಇದನ್ನೂ ಓದಿ:ಇದು ಹಳ್ಳಿ ಜೀವನದ ಗಮ್ಮತ್ತು; ಕೃಷಿ ಕಾಯಕದಲ್ಲಿ ನಿರತರಾಗಿರುವ ಹಳ್ಳಿ ಜನ್ರು

ಈ ವಿಡಿಯೋ ಮೂರು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಇಂತಹ ದೃಶ್ಯ ನೋಡುವುದೇ ಕಣ್ಣಿಗೆ ಹಬ್ಬ ಎಂದಿದ್ದಾರೆ. ಮತ್ತೊಬ್ಬರು, ಭತ್ತ ಕೊಯ್ಯುವ ಯಂತ್ರಗಳು ಬಂದ ನಂತರ ಈ ಸುಗ್ಗಿಯ ಸಂಭ್ರಮ ಸಡಗರ ಮರೆಯಾಗುತ್ತಿದೆ ಎಂದು ಹೇಳಿದ್ದಾರೆ. ಇನ್ನೊಬ್ಬರು ವರ್ಣಿಸಲು ಸಾಧ್ಯವಿಲ್ಲ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್‌ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ