AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬಲೆಯಲ್ಲಿ ಸಿಲುಕಿದ್ದ ಕಾಗೆಯನ್ನು ರಕ್ಷಿಸಿದ ಪುಟ್ಟ ಬಾಲಕ, ಇಲ್ಲಿದೆ ನೋಡಿ ವಿಡಿಯೋ

ಶಾಲೆಯ ಕ್ರೀಡಾ ಆವರಣದ ಬಲೆಯಲ್ಲಿ ಸಿಲುಕಿ ಒದ್ದಾಡುತ್ತಿದ್ದ ಕಾಗೆಯನ್ನು ಬಲೆಯಿಂದ ಬಿಡಿಸಿ ಹಾರಲು ಬಿಟ್ಟ ವಿಡಿಯೋ ಒಂದು ಟ್ವಿಟರ್‌ನಲ್ಲಿ ವೈರಲ್ ಆಗಿದೆ.

Viral Video: ಬಲೆಯಲ್ಲಿ ಸಿಲುಕಿದ್ದ ಕಾಗೆಯನ್ನು ರಕ್ಷಿಸಿದ ಪುಟ್ಟ ಬಾಲಕ, ಇಲ್ಲಿದೆ ನೋಡಿ ವಿಡಿಯೋ
ಬಲೆಯಲ್ಲಿ ಸಿಲುಕಿದ್ದ ಕಾಗೆಯನ್ನು ರಕ್ಷಿಸಿದ ಪುಟ್ಟ ಬಾಲಕImage Credit source: Twitter
Follow us
ಅಕ್ಷತಾ ವರ್ಕಾಡಿ
|

Updated on:Mar 03, 2023 | 6:29 PM

ಅಯ್ಯೋ ಕಾಗೆಯನ್ನು ಮುಟ್ಟಿದರೆ ಅಪಶಕುನ ಎನ್ನುವವರು ನಮ್ಮ ಸುತ್ತಮುತ್ತಲೇ ಸಾಕಷ್ಟು ಜನರಿದ್ದಾರೆ. ಆದರೆ ಮಕ್ಕಳು ಮನಸ್ಸು ನಿಷ್ಕಲ್ಮಶ, ಅದರಲ್ಲಿ ಯಾವುದೇ ಅಸೂಯೆ , ಕ್ರೂರತನವಿರುವುದಿಲ್ಲ. ಇದಕ್ಕೆ ಉತ್ತಮ ನಿದರ್ಶನವೆಂಬಂತೆ ಇಲ್ಲೊಬ್ಬ ಪುಟ್ಟ ಹುಡುಗ ಶಾಲೆಯ ಕ್ರೀಡಾ ಆವರಣದ ಬಲೆಯಲ್ಲಿ ಸಿಲುಕಿ ಒದ್ದಾಡುತ್ತಿದ್ದ ಕಾಗೆಯನ್ನು ಬಲೆಯಿಂದ ಬಿಡಿಸಿ ಹಾರಲು ಬಿಟ್ಟಿದ್ದಾನೆ. ಕಾಗೆಯನ್ನು ಬಲೆಯಿಂದ ಸಾಕಷ್ಟು ಕಷ್ಟ ಪಡುತ್ತಿರುವುದನ್ನು ಜೊತೆಗೆ ಆತನ ಸಹಪಾಠಿ ನಿಂತು ನೋಡುವುದನ್ನು ವಿಡಿಯೋದಲ್ಲಿ ಕಾಣಬಹುದು. ಈ ವಿಡಿಯೋ ಇದೀಗಾ ಟ್ವಿಟರ್‌ನಲ್ಲಿ ವೈರಲ್ ಆಗಿದೆ.

ಈ ವಿಡಿಯೋವನ್ನು ಸಬಿತಾ ಚಂದಾ ಎಂಬ ಬಳಕೆದಾರರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಪೋಸ್ಟ್‌ನ ಶೀರ್ಷಿಕೆಯಲ್ಲಿ, “ಕರುಣಾಮಯಿ ಹೃದಯವು ಅಸಂಖ್ಯಾತ ಜೀವನವನ್ನು ಸ್ಪರ್ಶಿಸುತ್ತದೆ” ಎಂದು ಬರೆದಿದ್ದಾರೆ. ಈ ವಿಡಿಯೋ ಇಲ್ಲಿದೆ ನೋಡಿ.

ಇದನ್ನು ಓದಿ: ಈ ಶ್ವಾನದ ದೇಶಪ್ರೇಮ ನೋಡಿ, ಇದು ಭಾರತೀಯರಿಗೆ ಹೆಮ್ಮೆಯ ವಿಚಾರ

ಶಾಲಾ ಸಮವಸ್ತ್ರವನ್ನು ಧರಿಸಿರುವ ಹುಡುಗ ಕಾಗೆಯನ್ನು ನೆಟ್‌ನಿಂದ ಬಿಡಿಸಲು ಪ್ರಯತ್ನಿಸುತ್ತಿರುವುದನ್ನು ವೀಡಿಯೊದಲ್ಲಿ ಕಾಣಬಹುದು. ಹುಡುಗ ನಿಧಾನವಾಗಿ ಹಕ್ಕಿಯನ್ನು ಬಿಡುಗಡೆ ಮಾಡಿ ತನ್ನ ಅಂಗೈಗಳಲ್ಲಿ ಹಿಡಿಯುತ್ತಾನೆ. ಅವನ ಸ್ನೇಹಿತರು ಅವನನ್ನು ಸುತ್ತುವರಿದಿರುವುದನ್ನು ಕಾಣಬಹುದು. ಈ ವಿಡಿಯೋವನ್ನು ಎರಡು ದಿನಗಳ ಹಿಂದೆ ಶೇರ್ ಮಾಡಲಾಗಿತ್ತು. ಪೋಸ್ಟ್ ಮಾಡಿದ ನಂತರ, ಇದು 2,000 ಕ್ಕೂ ಹೆಚ್ಚು ಬಾರಿ ಲೈಕ್ ಪಡೆದುಕೊಂಡಿದೆ. ಜೊತೆಗೆ 88 ಸಾವಿರ ವೀಕ್ಷಣೆ ಪಡೆದುಕೊಂಡಿದೆ. ಈ ಪುಟ್ಟ ಬಾಲಕನಿಗೆ ಸದಾ ದೇವರ ಆರ್ಶೀವಾದ ಇರಲಿ ಎಂದು ಸಾಕಷ್ಟು ಬಳಕೆದಾರರು ಶ್ಲಾಘನೆ ವ್ಯಕ್ತ ಪಡಿಸಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 6:28 pm, Fri, 3 March 23

ಭಾರತ-ಪಾಕಿಸ್ತಾನದ ಯುದ್ಧ ನಿಲ್ಲಿಸಿದ್ದು ನಾನೇ; ಹಳೇ ರಾಗ ಹಾಡಿದ ಟ್ರಂಪ್
ಭಾರತ-ಪಾಕಿಸ್ತಾನದ ಯುದ್ಧ ನಿಲ್ಲಿಸಿದ್ದು ನಾನೇ; ಹಳೇ ರಾಗ ಹಾಡಿದ ಟ್ರಂಪ್
ಯತ್ನಾಳ್, ಈಶ್ವರಪ್ಪ ಜೋಡಿಗೆ ಕನ್ನಡಿ ತೋರಿಸಿದ ರಾಜ್ಯ ಬಿಜೆಪಿ ಉಸ್ತುವಾರಿ
ಯತ್ನಾಳ್, ಈಶ್ವರಪ್ಪ ಜೋಡಿಗೆ ಕನ್ನಡಿ ತೋರಿಸಿದ ರಾಜ್ಯ ಬಿಜೆಪಿ ಉಸ್ತುವಾರಿ
ಅಣ್ಣಾವ್ರ ಮೊಮ್ಮಗನಿಗೆ ದುನಿಯಾ ವಿಜಿ ಆಕ್ಷನ್ ಕಟ್, ಭರದಿಂದ ಸಾಗಿದೆ ಶೂಟಿಂಗ್
ಅಣ್ಣಾವ್ರ ಮೊಮ್ಮಗನಿಗೆ ದುನಿಯಾ ವಿಜಿ ಆಕ್ಷನ್ ಕಟ್, ಭರದಿಂದ ಸಾಗಿದೆ ಶೂಟಿಂಗ್
ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರಗಳು ದಿನಕ್ಕೊಂದು ಬಯಲಾಗುತ್ತಿವೆ: ಚಲವಾದಿ
ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರಗಳು ದಿನಕ್ಕೊಂದು ಬಯಲಾಗುತ್ತಿವೆ: ಚಲವಾದಿ
ಪೊಲೀಸ್ ಮತ್ತು ಪ್ರತಿಭಟನೆಕಾರರ ನಡುವೆ ಸಿಲುಕಿ ಒದ್ದಾಡಿದ ರೇಣುಕಾಚಾರ್ಯ
ಪೊಲೀಸ್ ಮತ್ತು ಪ್ರತಿಭಟನೆಕಾರರ ನಡುವೆ ಸಿಲುಕಿ ಒದ್ದಾಡಿದ ರೇಣುಕಾಚಾರ್ಯ
ರಾಜು ಕಾಗೆ ಕೇಳಿದ ಕೆಲಸಗಳೆಲ್ಲವನ್ನೂ ಮಾಡಿಕೊಟ್ಟಿದ್ದೇನೆ: ಶಿವಕುಮಾರ್
ರಾಜು ಕಾಗೆ ಕೇಳಿದ ಕೆಲಸಗಳೆಲ್ಲವನ್ನೂ ಮಾಡಿಕೊಟ್ಟಿದ್ದೇನೆ: ಶಿವಕುಮಾರ್
ಹಿಮಾಚಲ ಪ್ರದೇಶದ ಕುಲುವಿನಲ್ಲಿ ಮೇಘಸ್ಫೋಟ; ಸೈಂಜ್ ಕಣಿವೆಯಲ್ಲಿ ಪ್ರವಾಹ
ಹಿಮಾಚಲ ಪ್ರದೇಶದ ಕುಲುವಿನಲ್ಲಿ ಮೇಘಸ್ಫೋಟ; ಸೈಂಜ್ ಕಣಿವೆಯಲ್ಲಿ ಪ್ರವಾಹ
ಕೇವಲ ನಾಲ್ಕು ದಿನಗಳ ಪರಿಚಯ ದೈಹಿಕ ಸಂಪರ್ಕದವರೆಗೆ ಮುಂದುವರಿಯಿತು
ಕೇವಲ ನಾಲ್ಕು ದಿನಗಳ ಪರಿಚಯ ದೈಹಿಕ ಸಂಪರ್ಕದವರೆಗೆ ಮುಂದುವರಿಯಿತು
ಕ್ಷಮೆ ಕೇಳಲು ಶಿವರಾಜ್​ಕುಮಾರ್ ಮನೆ ಎದುರು ಕಾಯುತ್ತಿರುವ ಮಡೆನೂರು ಮನು
ಕ್ಷಮೆ ಕೇಳಲು ಶಿವರಾಜ್​ಕುಮಾರ್ ಮನೆ ಎದುರು ಕಾಯುತ್ತಿರುವ ಮಡೆನೂರು ಮನು
ನೀರು ಬಿಡೋದಿಲ್ಲ ಅಂತ ಸ್ಟೇಟಸ್​ ಹಾಕಿದ್ದ BJP ಮುಖಂಡನ ಮೇಲೆ ಹಲ್ಲೆ
ನೀರು ಬಿಡೋದಿಲ್ಲ ಅಂತ ಸ್ಟೇಟಸ್​ ಹಾಕಿದ್ದ BJP ಮುಖಂಡನ ಮೇಲೆ ಹಲ್ಲೆ